Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ 'ಸಾಹಿತ್ಯ ಉತ್ಸವ'ಕ್ಕೆ ಬಹಿಷ್ಕಾರ ಹಾಕಿದ...

ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

- Advertisement -
- Advertisement -

ಗಾಝಾ ಮೇಲಿನ ಯುದ್ಧವನ್ನು ತಡೆಯುವಲ್ಲಿ ವಿಫಲವಾದ ಕಾರಣ ಹಲವು ಸಾಹಿತಿಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು ಅಮೆರಿಕದಲ್ಲಿ ನಡೆಯುವ ಪ್ರತಿಷ್ಠಿತ PEN ವಿಶ್ವ ಧ್ವನಿ ಉತ್ಸವವನ್ನು( PEN World Voices Festival) ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಖ್ಯಾತ ಬರಹಗಾರರಾದ ನವೋಮಿ ಕ್ಲೈನ್, ಮಿಚೆಲ್ ಅಲೆಕ್ಸಾಂಡರ್, ಹಿಶಾಮ್ ಮಟರ್, ಇಸಾಬೆಲ್ಲಾ ಹಮ್ಮದ್, ಮಾಝಾ ಮೆಂಗಿಸ್ಟೆ, ಝೈನಾ ಅರಾಫತ್ ಮತ್ತು ಸುಸಾನ್ ಮುಅಡ್ಡಿ ದರ್ರಾಜ್ ಪತ್ರಕ್ಕೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ,  ಇದಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗೆಗಿನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಇತರ ಬರಹಗಾರರನ್ನು ಒತ್ತಾಯಿಸಿದ್ದಾರೆ.

PEN ವಿಶ್ವ ಧ್ವನಿ ಉತ್ಸವವನ್ನು ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಒಂದೆಂದು ಹೆಸರಿಸಲಾಗಿದೆ ಮತ್ತು 2005ರಿಂದ ಈ ಕಾರ್ಯಕ್ರಮವನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ.

ಗಾಝಾದ ಮೇಲೆ ಇಸ್ರೇಲ್‌ ಯುದ್ಧ ನಡೆಸುತ್ತಿರುವ ಈ ಸನ್ನಿವೇಶದಲ್ಲಿ PEN ಅಮೆರಿಕಾ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಬರಹಗಾರರಿಗೆ ಸ್ವಾತಂತ್ರ್ಯ ಕುರಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ ಎಂದು ಪತ್ರದಲ್ಲಿ ಪ್ರತಿಪಾದಿಸಲಾಗಿದೆ. ಪತ್ರದಲ್ಲಿ ಗಾಝಾದಲ್ಲಿ ತಕ್ಷಣದ ಕದನ ವಿರಾಮವನ್ನು ಒತ್ತಾಯಿಸುವ ಇತರ ಮಾನವ ಹಕ್ಕುಗಳ ಸಂಘಟನೆಗಳೊಂದಿಗೆ ಸೇರಲು PEN ಅಮೆರಿಕ ಉತ್ಸುಕತೆಯನ್ನು ತೋರಿಲ್ಲ ಎಂದು ಉಲ್ಲೇಖಿಸಲಾಗಿದೆ.

600 ಬರಹಗಾರರು ಮತ್ತು ಕವಿಗಳ ಗುಂಪು ಗಾಝಾದ ಮೇಲೆ ದಾಳಿಯನ್ನು ಖಂಡಿಸದ PENನ ಸಾಪೇಕ್ಷ ಮೌನವನ್ನು ಖಂಡಿಸುವ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ. ಆ ಪತ್ರಕ್ಕೆ ಈಗ ರೊಕ್ಸೇನ್ ಗೇ, ಲಾರೆನ್ ಗ್ರಾಫ್, ಮೇರಿ-ಹೆಲೆನ್ ಬರ್ಟಿನೊ, ಕೀಸೆ ಲೇಮನ್, ಸಯೀದ್ ಜೋನ್ಸ್, ಕಾರ್ಮೆನ್ ಮರಿಯಾ ಮಚಾಡೊ, ಸೋಲ್ಮಾಜ್ ಷರೀಫ್, ಟಾಮಿ ಪಿಕೊ, ಲಾರಾ ವ್ಯಾನ್ ಡೆನ್ ಬರ್ಗ್ ಮತ್ತು ನಾನಾ ಕ್ವಾಮೆ ಅಡ್ಜೆ ಸೇರಿದಂತೆ 1300ಕ್ಕೂ ಹೆಚ್ಚು ಬರಹಗಾರರು ಸಹಿ ಹಾಕಿದ್ದಾರೆ.

ನ್ಯೂಯಾರ್ಕ್ ನಗರದಲ್ಲಿ ಈ ವರ್ಷದ PEN ವರ್ಲ್ಡ್ ವಾಯ್ಸ್ ಉತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಲು ನಮ್ಮಲ್ಲಿ ಪ್ರತಿಯೊಬ್ಬರನ್ನು ಆಹ್ವಾನಿಸಲಾಗಿದೆ. ನಾವು ಎಲ್ಲರೂ ಸೇರಿ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇವೆ. ನಮಗೆ ಉತ್ಸವದ ಬಹಿಷ್ಕಾರವಲ್ಲದೆ ಬೇರೆ ಆಯ್ಕೆ ಯಾಕಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದೇವೆ ಎಂದು ಹೇಳಿದ್ದಾರೆ.

ಗಾಝಾದ ಮೇಲೆ ಇಸ್ರೇಲ್‌ನ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ, PEN ಅಮೆರಿಕ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಸ್ವಾತಂತ್ರ್ಯ ಮತ್ತು ಭದ್ರತೆಗೆ ಸಂಬಂಧಿಸಿದ ಪ್ರತಿಪಾದಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ. 1948ರಲ್ಲಿ ಅಳವಡಿಸಿಕೊಂಡ PEN ತತ್ವದ ಪ್ರಕಾರ, ಜಗತ್ತಿನಲ್ಲಿ ಶಾಂತಿ ಮತ್ತು ಸಮಾನತೆಯಿಂದ ಬದುಕುವ ಒಂದು ಮಾನವೀಯತೆಯ ಆದರ್ಶವನ್ನು ಸಾಧಿಸಲು ತಮ್ಮ ಕೈಲಾದಷ್ಟು ಕೆಲಸ ಮಾಡುವುದು PEN ಸದಸ್ಯರ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಪ್ಯಾಲೆಸ್ತೀನ್‌ನಲ್ಲಿ ಕವಿಗಳು, ವಿದ್ವಾಂಸರು, ಕಾದಂಬರಿಕಾರರು ಮತ್ತು ಪತ್ರಕರ್ತರು ಮತ್ತು ಪ್ರಬಂಧಕಾರರು ತಮ್ಮ ಮಾತುಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳಲು ತಮ್ಮ ಜೀವನ ಮತ್ತು ಅವರ ಕುಟುಂಬಗಳ ಜೀವನವನ್ನು ಒಳಗೊಂಡಂತೆ ಎಲ್ಲವನ್ನೂ ಪಣಕ್ಕಿಟ್ಟಿದ್ದಾರೆ. ಆದರೂ PEN ಅಮೇರಿಕ ತುಳಿತಕ್ಕೊಳಗಾದವರ ಪರವಾಗಿ ದೃಢವಾಗಿ ನಿಲ್ಲಲಿಲ್ಲ ಎಂದು ಹೇಳಿದ್ದಾರೆ.

ನಿಮಗೆ ತಿಳಿದಿರುವಂತೆ, ಪ್ರಸ್ತುತ ಗಾಝಾದಲ್ಲಿ ನಾಗರಿಕರ ನರಮೇಧ ನಡೆಸಲಾಗುತ್ತಿದೆ, ಇದರ ಭಯಾನಕತೆಯನ್ನು ಪ್ರತಿದಿನ ಚಿತ್ರೀಕರಿಸಲಾಗುತ್ತಿದೆ ಮತ್ತು ಪ್ರಪಂಚದಾದ್ಯಂತ ವೈರಲ್‌ ಮಾಡಲಾಗಿದೆ. ಇಸ್ರೇಲ್‌ ಹತ್ಯಾಕಾಂಡಕ್ಕೆ ಈವರೆಗೆ 1,00,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 30,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಗಾಝಾದಲ್ಲಿ 70 ಪ್ರತಿಶತದಷ್ಟು ಮನೆಗಳು ಹಾನಿಗೊಳಗಾಗಿವೆ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಜನರು ಬರಗಾಲದ ಅಪಾಯದಲ್ಲಿದ್ದಾರೆ ಮತ್ತು ತಮ್ಮ ಮನೆಗಳ ಮೇಲೆ ಬಾಂಬ್ ದಾಳಿಯಿಂದ ಬದುಕುಳಿದ ನಂತರವೂ ಮಕ್ಕಳು ಮತ್ತು ವೃದ್ಧರು ಅಪೌಷ್ಟಿಕತೆ ಮತ್ತು ನಿರ್ಜಲೀಕರಣದಿಂದ ಸಾಯುತ್ತಿದ್ದಾರೆ. ಇದೆಲ್ಲದರ ಹೊರತಾಗಿಯೂ, ತಕ್ಷಣದ ಮತ್ತು ಬೇಷರತ್ತಾದ ಕದನ ವಿರಾಮದ ಬೇಡಿಕೆಗಳಲ್ಲಿ ಇತರ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳನ್ನು ಸೇರಲು PEN ಅಮೆರಿಕ ನಿರಾಕರಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯುದ್ಧ ಪ್ರಾರಂಭಿಸಿದ ಬಳಿಕ ಇಸ್ರೇಲ್ ಸುಮಾರು ನೂರು ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರನ್ನು ಹತ್ಯೆ ಮಾಡಿದೆ. ಅಫ್ಘಾನಿಸ್ತಾನದಲ್ಲಿ ಯುದ್ಧದ ವೇಳೆ ಸಂಭವಿಸಿದ ಸಾವಿಗಿಂತ ಇದು ಅಧಿಕವಾಗಿದೆ. ಇಸ್ರೇಲ್ ಸುಮಾರು ನೂರು ಶಿಕ್ಷಣ ತಜ್ಞರು ಮತ್ತು ಬರಹಗಾರರನ್ನು ಹತ್ಯೆ ಮಾಡಿದೆ. PEN ಅಮೆರಿಕದಂತಹ ಸಂಸ್ಥೆಗಳು ಪ್ಯಾಲೆಸ್ತೀನ್ ಜನರ ಜೀವನ ಮತ್ತು ಸಂಸ್ಕೃತಿಯನ್ನು ನಾಶಮಾಡುವ ಸ್ಪಷ್ಟ ಪ್ರಯತ್ನದ ಮುಂದೆ ರಾಜಕೀಯ ತಟಸ್ಥತೆಯನ್ನು ಮುಂದುವರಿಸಿದರೆ, ಗಾಝಾದಲ್ಲಿ ಅವರ ಕಥೆಯನ್ನು ಹೇಳಲು ಯಾವುದೇ ಬರಹಗಾರರು ಉಳಿಯಲಿದ್ದಾರಾ ಎಂದು ಸಾಹಿತಿಗಳು ಮತ್ತು ಬರಹಗಾರರು ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...