Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ 'ಸಾಹಿತ್ಯ ಉತ್ಸವ'ಕ್ಕೆ ಬಹಿಷ್ಕಾರ ಹಾಕಿದ...

ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

- Advertisement -
- Advertisement -

ಗಾಝಾ ಮೇಲಿನ ಯುದ್ಧವನ್ನು ತಡೆಯುವಲ್ಲಿ ವಿಫಲವಾದ ಕಾರಣ ಹಲವು ಸಾಹಿತಿಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು ಅಮೆರಿಕದಲ್ಲಿ ನಡೆಯುವ ಪ್ರತಿಷ್ಠಿತ PEN ವಿಶ್ವ ಧ್ವನಿ ಉತ್ಸವವನ್ನು( PEN World Voices Festival) ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಖ್ಯಾತ ಬರಹಗಾರರಾದ ನವೋಮಿ ಕ್ಲೈನ್, ಮಿಚೆಲ್ ಅಲೆಕ್ಸಾಂಡರ್, ಹಿಶಾಮ್ ಮಟರ್, ಇಸಾಬೆಲ್ಲಾ ಹಮ್ಮದ್, ಮಾಝಾ ಮೆಂಗಿಸ್ಟೆ, ಝೈನಾ ಅರಾಫತ್ ಮತ್ತು ಸುಸಾನ್ ಮುಅಡ್ಡಿ ದರ್ರಾಜ್ ಪತ್ರಕ್ಕೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ,  ಇದಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗೆಗಿನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಇತರ ಬರಹಗಾರರನ್ನು ಒತ್ತಾಯಿಸಿದ್ದಾರೆ.

PEN ವಿಶ್ವ ಧ್ವನಿ ಉತ್ಸವವನ್ನು ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಒಂದೆಂದು ಹೆಸರಿಸಲಾಗಿದೆ ಮತ್ತು 2005ರಿಂದ ಈ ಕಾರ್ಯಕ್ರಮವನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ.

ಗಾಝಾದ ಮೇಲೆ ಇಸ್ರೇಲ್‌ ಯುದ್ಧ ನಡೆಸುತ್ತಿರುವ ಈ ಸನ್ನಿವೇಶದಲ್ಲಿ PEN ಅಮೆರಿಕಾ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಬರಹಗಾರರಿಗೆ ಸ್ವಾತಂತ್ರ್ಯ ಕುರಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ ಎಂದು ಪತ್ರದಲ್ಲಿ ಪ್ರತಿಪಾದಿಸಲಾಗಿದೆ. ಪತ್ರದಲ್ಲಿ ಗಾಝಾದಲ್ಲಿ ತಕ್ಷಣದ ಕದನ ವಿರಾಮವನ್ನು ಒತ್ತಾಯಿಸುವ ಇತರ ಮಾನವ ಹಕ್ಕುಗಳ ಸಂಘಟನೆಗಳೊಂದಿಗೆ ಸೇರಲು PEN ಅಮೆರಿಕ ಉತ್ಸುಕತೆಯನ್ನು ತೋರಿಲ್ಲ ಎಂದು ಉಲ್ಲೇಖಿಸಲಾಗಿದೆ.

600 ಬರಹಗಾರರು ಮತ್ತು ಕವಿಗಳ ಗುಂಪು ಗಾಝಾದ ಮೇಲೆ ದಾಳಿಯನ್ನು ಖಂಡಿಸದ PENನ ಸಾಪೇಕ್ಷ ಮೌನವನ್ನು ಖಂಡಿಸುವ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ. ಆ ಪತ್ರಕ್ಕೆ ಈಗ ರೊಕ್ಸೇನ್ ಗೇ, ಲಾರೆನ್ ಗ್ರಾಫ್, ಮೇರಿ-ಹೆಲೆನ್ ಬರ್ಟಿನೊ, ಕೀಸೆ ಲೇಮನ್, ಸಯೀದ್ ಜೋನ್ಸ್, ಕಾರ್ಮೆನ್ ಮರಿಯಾ ಮಚಾಡೊ, ಸೋಲ್ಮಾಜ್ ಷರೀಫ್, ಟಾಮಿ ಪಿಕೊ, ಲಾರಾ ವ್ಯಾನ್ ಡೆನ್ ಬರ್ಗ್ ಮತ್ತು ನಾನಾ ಕ್ವಾಮೆ ಅಡ್ಜೆ ಸೇರಿದಂತೆ 1300ಕ್ಕೂ ಹೆಚ್ಚು ಬರಹಗಾರರು ಸಹಿ ಹಾಕಿದ್ದಾರೆ.

ನ್ಯೂಯಾರ್ಕ್ ನಗರದಲ್ಲಿ ಈ ವರ್ಷದ PEN ವರ್ಲ್ಡ್ ವಾಯ್ಸ್ ಉತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಲು ನಮ್ಮಲ್ಲಿ ಪ್ರತಿಯೊಬ್ಬರನ್ನು ಆಹ್ವಾನಿಸಲಾಗಿದೆ. ನಾವು ಎಲ್ಲರೂ ಸೇರಿ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇವೆ. ನಮಗೆ ಉತ್ಸವದ ಬಹಿಷ್ಕಾರವಲ್ಲದೆ ಬೇರೆ ಆಯ್ಕೆ ಯಾಕಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದೇವೆ ಎಂದು ಹೇಳಿದ್ದಾರೆ.

ಗಾಝಾದ ಮೇಲೆ ಇಸ್ರೇಲ್‌ನ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ, PEN ಅಮೆರಿಕ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಸ್ವಾತಂತ್ರ್ಯ ಮತ್ತು ಭದ್ರತೆಗೆ ಸಂಬಂಧಿಸಿದ ಪ್ರತಿಪಾದಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ. 1948ರಲ್ಲಿ ಅಳವಡಿಸಿಕೊಂಡ PEN ತತ್ವದ ಪ್ರಕಾರ, ಜಗತ್ತಿನಲ್ಲಿ ಶಾಂತಿ ಮತ್ತು ಸಮಾನತೆಯಿಂದ ಬದುಕುವ ಒಂದು ಮಾನವೀಯತೆಯ ಆದರ್ಶವನ್ನು ಸಾಧಿಸಲು ತಮ್ಮ ಕೈಲಾದಷ್ಟು ಕೆಲಸ ಮಾಡುವುದು PEN ಸದಸ್ಯರ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಪ್ಯಾಲೆಸ್ತೀನ್‌ನಲ್ಲಿ ಕವಿಗಳು, ವಿದ್ವಾಂಸರು, ಕಾದಂಬರಿಕಾರರು ಮತ್ತು ಪತ್ರಕರ್ತರು ಮತ್ತು ಪ್ರಬಂಧಕಾರರು ತಮ್ಮ ಮಾತುಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳಲು ತಮ್ಮ ಜೀವನ ಮತ್ತು ಅವರ ಕುಟುಂಬಗಳ ಜೀವನವನ್ನು ಒಳಗೊಂಡಂತೆ ಎಲ್ಲವನ್ನೂ ಪಣಕ್ಕಿಟ್ಟಿದ್ದಾರೆ. ಆದರೂ PEN ಅಮೇರಿಕ ತುಳಿತಕ್ಕೊಳಗಾದವರ ಪರವಾಗಿ ದೃಢವಾಗಿ ನಿಲ್ಲಲಿಲ್ಲ ಎಂದು ಹೇಳಿದ್ದಾರೆ.

ನಿಮಗೆ ತಿಳಿದಿರುವಂತೆ, ಪ್ರಸ್ತುತ ಗಾಝಾದಲ್ಲಿ ನಾಗರಿಕರ ನರಮೇಧ ನಡೆಸಲಾಗುತ್ತಿದೆ, ಇದರ ಭಯಾನಕತೆಯನ್ನು ಪ್ರತಿದಿನ ಚಿತ್ರೀಕರಿಸಲಾಗುತ್ತಿದೆ ಮತ್ತು ಪ್ರಪಂಚದಾದ್ಯಂತ ವೈರಲ್‌ ಮಾಡಲಾಗಿದೆ. ಇಸ್ರೇಲ್‌ ಹತ್ಯಾಕಾಂಡಕ್ಕೆ ಈವರೆಗೆ 1,00,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 30,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಗಾಝಾದಲ್ಲಿ 70 ಪ್ರತಿಶತದಷ್ಟು ಮನೆಗಳು ಹಾನಿಗೊಳಗಾಗಿವೆ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಜನರು ಬರಗಾಲದ ಅಪಾಯದಲ್ಲಿದ್ದಾರೆ ಮತ್ತು ತಮ್ಮ ಮನೆಗಳ ಮೇಲೆ ಬಾಂಬ್ ದಾಳಿಯಿಂದ ಬದುಕುಳಿದ ನಂತರವೂ ಮಕ್ಕಳು ಮತ್ತು ವೃದ್ಧರು ಅಪೌಷ್ಟಿಕತೆ ಮತ್ತು ನಿರ್ಜಲೀಕರಣದಿಂದ ಸಾಯುತ್ತಿದ್ದಾರೆ. ಇದೆಲ್ಲದರ ಹೊರತಾಗಿಯೂ, ತಕ್ಷಣದ ಮತ್ತು ಬೇಷರತ್ತಾದ ಕದನ ವಿರಾಮದ ಬೇಡಿಕೆಗಳಲ್ಲಿ ಇತರ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳನ್ನು ಸೇರಲು PEN ಅಮೆರಿಕ ನಿರಾಕರಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯುದ್ಧ ಪ್ರಾರಂಭಿಸಿದ ಬಳಿಕ ಇಸ್ರೇಲ್ ಸುಮಾರು ನೂರು ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರನ್ನು ಹತ್ಯೆ ಮಾಡಿದೆ. ಅಫ್ಘಾನಿಸ್ತಾನದಲ್ಲಿ ಯುದ್ಧದ ವೇಳೆ ಸಂಭವಿಸಿದ ಸಾವಿಗಿಂತ ಇದು ಅಧಿಕವಾಗಿದೆ. ಇಸ್ರೇಲ್ ಸುಮಾರು ನೂರು ಶಿಕ್ಷಣ ತಜ್ಞರು ಮತ್ತು ಬರಹಗಾರರನ್ನು ಹತ್ಯೆ ಮಾಡಿದೆ. PEN ಅಮೆರಿಕದಂತಹ ಸಂಸ್ಥೆಗಳು ಪ್ಯಾಲೆಸ್ತೀನ್ ಜನರ ಜೀವನ ಮತ್ತು ಸಂಸ್ಕೃತಿಯನ್ನು ನಾಶಮಾಡುವ ಸ್ಪಷ್ಟ ಪ್ರಯತ್ನದ ಮುಂದೆ ರಾಜಕೀಯ ತಟಸ್ಥತೆಯನ್ನು ಮುಂದುವರಿಸಿದರೆ, ಗಾಝಾದಲ್ಲಿ ಅವರ ಕಥೆಯನ್ನು ಹೇಳಲು ಯಾವುದೇ ಬರಹಗಾರರು ಉಳಿಯಲಿದ್ದಾರಾ ಎಂದು ಸಾಹಿತಿಗಳು ಮತ್ತು ಬರಹಗಾರರು ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...