Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ 'ಸಾಹಿತ್ಯ ಉತ್ಸವ'ಕ್ಕೆ ಬಹಿಷ್ಕಾರ ಹಾಕಿದ...

ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

- Advertisement -
- Advertisement -

ಗಾಝಾ ಮೇಲಿನ ಯುದ್ಧವನ್ನು ತಡೆಯುವಲ್ಲಿ ವಿಫಲವಾದ ಕಾರಣ ಹಲವು ಸಾಹಿತಿಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು ಅಮೆರಿಕದಲ್ಲಿ ನಡೆಯುವ ಪ್ರತಿಷ್ಠಿತ PEN ವಿಶ್ವ ಧ್ವನಿ ಉತ್ಸವವನ್ನು( PEN World Voices Festival) ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಖ್ಯಾತ ಬರಹಗಾರರಾದ ನವೋಮಿ ಕ್ಲೈನ್, ಮಿಚೆಲ್ ಅಲೆಕ್ಸಾಂಡರ್, ಹಿಶಾಮ್ ಮಟರ್, ಇಸಾಬೆಲ್ಲಾ ಹಮ್ಮದ್, ಮಾಝಾ ಮೆಂಗಿಸ್ಟೆ, ಝೈನಾ ಅರಾಫತ್ ಮತ್ತು ಸುಸಾನ್ ಮುಅಡ್ಡಿ ದರ್ರಾಜ್ ಪತ್ರಕ್ಕೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ,  ಇದಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗೆಗಿನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಇತರ ಬರಹಗಾರರನ್ನು ಒತ್ತಾಯಿಸಿದ್ದಾರೆ.

PEN ವಿಶ್ವ ಧ್ವನಿ ಉತ್ಸವವನ್ನು ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಒಂದೆಂದು ಹೆಸರಿಸಲಾಗಿದೆ ಮತ್ತು 2005ರಿಂದ ಈ ಕಾರ್ಯಕ್ರಮವನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ.

ಗಾಝಾದ ಮೇಲೆ ಇಸ್ರೇಲ್‌ ಯುದ್ಧ ನಡೆಸುತ್ತಿರುವ ಈ ಸನ್ನಿವೇಶದಲ್ಲಿ PEN ಅಮೆರಿಕಾ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಬರಹಗಾರರಿಗೆ ಸ್ವಾತಂತ್ರ್ಯ ಕುರಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ ಎಂದು ಪತ್ರದಲ್ಲಿ ಪ್ರತಿಪಾದಿಸಲಾಗಿದೆ. ಪತ್ರದಲ್ಲಿ ಗಾಝಾದಲ್ಲಿ ತಕ್ಷಣದ ಕದನ ವಿರಾಮವನ್ನು ಒತ್ತಾಯಿಸುವ ಇತರ ಮಾನವ ಹಕ್ಕುಗಳ ಸಂಘಟನೆಗಳೊಂದಿಗೆ ಸೇರಲು PEN ಅಮೆರಿಕ ಉತ್ಸುಕತೆಯನ್ನು ತೋರಿಲ್ಲ ಎಂದು ಉಲ್ಲೇಖಿಸಲಾಗಿದೆ.

600 ಬರಹಗಾರರು ಮತ್ತು ಕವಿಗಳ ಗುಂಪು ಗಾಝಾದ ಮೇಲೆ ದಾಳಿಯನ್ನು ಖಂಡಿಸದ PENನ ಸಾಪೇಕ್ಷ ಮೌನವನ್ನು ಖಂಡಿಸುವ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ. ಆ ಪತ್ರಕ್ಕೆ ಈಗ ರೊಕ್ಸೇನ್ ಗೇ, ಲಾರೆನ್ ಗ್ರಾಫ್, ಮೇರಿ-ಹೆಲೆನ್ ಬರ್ಟಿನೊ, ಕೀಸೆ ಲೇಮನ್, ಸಯೀದ್ ಜೋನ್ಸ್, ಕಾರ್ಮೆನ್ ಮರಿಯಾ ಮಚಾಡೊ, ಸೋಲ್ಮಾಜ್ ಷರೀಫ್, ಟಾಮಿ ಪಿಕೊ, ಲಾರಾ ವ್ಯಾನ್ ಡೆನ್ ಬರ್ಗ್ ಮತ್ತು ನಾನಾ ಕ್ವಾಮೆ ಅಡ್ಜೆ ಸೇರಿದಂತೆ 1300ಕ್ಕೂ ಹೆಚ್ಚು ಬರಹಗಾರರು ಸಹಿ ಹಾಕಿದ್ದಾರೆ.

ನ್ಯೂಯಾರ್ಕ್ ನಗರದಲ್ಲಿ ಈ ವರ್ಷದ PEN ವರ್ಲ್ಡ್ ವಾಯ್ಸ್ ಉತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಲು ನಮ್ಮಲ್ಲಿ ಪ್ರತಿಯೊಬ್ಬರನ್ನು ಆಹ್ವಾನಿಸಲಾಗಿದೆ. ನಾವು ಎಲ್ಲರೂ ಸೇರಿ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇವೆ. ನಮಗೆ ಉತ್ಸವದ ಬಹಿಷ್ಕಾರವಲ್ಲದೆ ಬೇರೆ ಆಯ್ಕೆ ಯಾಕಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದೇವೆ ಎಂದು ಹೇಳಿದ್ದಾರೆ.

ಗಾಝಾದ ಮೇಲೆ ಇಸ್ರೇಲ್‌ನ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ, PEN ಅಮೆರಿಕ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಸ್ವಾತಂತ್ರ್ಯ ಮತ್ತು ಭದ್ರತೆಗೆ ಸಂಬಂಧಿಸಿದ ಪ್ರತಿಪಾದಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ. 1948ರಲ್ಲಿ ಅಳವಡಿಸಿಕೊಂಡ PEN ತತ್ವದ ಪ್ರಕಾರ, ಜಗತ್ತಿನಲ್ಲಿ ಶಾಂತಿ ಮತ್ತು ಸಮಾನತೆಯಿಂದ ಬದುಕುವ ಒಂದು ಮಾನವೀಯತೆಯ ಆದರ್ಶವನ್ನು ಸಾಧಿಸಲು ತಮ್ಮ ಕೈಲಾದಷ್ಟು ಕೆಲಸ ಮಾಡುವುದು PEN ಸದಸ್ಯರ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಪ್ಯಾಲೆಸ್ತೀನ್‌ನಲ್ಲಿ ಕವಿಗಳು, ವಿದ್ವಾಂಸರು, ಕಾದಂಬರಿಕಾರರು ಮತ್ತು ಪತ್ರಕರ್ತರು ಮತ್ತು ಪ್ರಬಂಧಕಾರರು ತಮ್ಮ ಮಾತುಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳಲು ತಮ್ಮ ಜೀವನ ಮತ್ತು ಅವರ ಕುಟುಂಬಗಳ ಜೀವನವನ್ನು ಒಳಗೊಂಡಂತೆ ಎಲ್ಲವನ್ನೂ ಪಣಕ್ಕಿಟ್ಟಿದ್ದಾರೆ. ಆದರೂ PEN ಅಮೇರಿಕ ತುಳಿತಕ್ಕೊಳಗಾದವರ ಪರವಾಗಿ ದೃಢವಾಗಿ ನಿಲ್ಲಲಿಲ್ಲ ಎಂದು ಹೇಳಿದ್ದಾರೆ.

ನಿಮಗೆ ತಿಳಿದಿರುವಂತೆ, ಪ್ರಸ್ತುತ ಗಾಝಾದಲ್ಲಿ ನಾಗರಿಕರ ನರಮೇಧ ನಡೆಸಲಾಗುತ್ತಿದೆ, ಇದರ ಭಯಾನಕತೆಯನ್ನು ಪ್ರತಿದಿನ ಚಿತ್ರೀಕರಿಸಲಾಗುತ್ತಿದೆ ಮತ್ತು ಪ್ರಪಂಚದಾದ್ಯಂತ ವೈರಲ್‌ ಮಾಡಲಾಗಿದೆ. ಇಸ್ರೇಲ್‌ ಹತ್ಯಾಕಾಂಡಕ್ಕೆ ಈವರೆಗೆ 1,00,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 30,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಗಾಝಾದಲ್ಲಿ 70 ಪ್ರತಿಶತದಷ್ಟು ಮನೆಗಳು ಹಾನಿಗೊಳಗಾಗಿವೆ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಜನರು ಬರಗಾಲದ ಅಪಾಯದಲ್ಲಿದ್ದಾರೆ ಮತ್ತು ತಮ್ಮ ಮನೆಗಳ ಮೇಲೆ ಬಾಂಬ್ ದಾಳಿಯಿಂದ ಬದುಕುಳಿದ ನಂತರವೂ ಮಕ್ಕಳು ಮತ್ತು ವೃದ್ಧರು ಅಪೌಷ್ಟಿಕತೆ ಮತ್ತು ನಿರ್ಜಲೀಕರಣದಿಂದ ಸಾಯುತ್ತಿದ್ದಾರೆ. ಇದೆಲ್ಲದರ ಹೊರತಾಗಿಯೂ, ತಕ್ಷಣದ ಮತ್ತು ಬೇಷರತ್ತಾದ ಕದನ ವಿರಾಮದ ಬೇಡಿಕೆಗಳಲ್ಲಿ ಇತರ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳನ್ನು ಸೇರಲು PEN ಅಮೆರಿಕ ನಿರಾಕರಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯುದ್ಧ ಪ್ರಾರಂಭಿಸಿದ ಬಳಿಕ ಇಸ್ರೇಲ್ ಸುಮಾರು ನೂರು ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರನ್ನು ಹತ್ಯೆ ಮಾಡಿದೆ. ಅಫ್ಘಾನಿಸ್ತಾನದಲ್ಲಿ ಯುದ್ಧದ ವೇಳೆ ಸಂಭವಿಸಿದ ಸಾವಿಗಿಂತ ಇದು ಅಧಿಕವಾಗಿದೆ. ಇಸ್ರೇಲ್ ಸುಮಾರು ನೂರು ಶಿಕ್ಷಣ ತಜ್ಞರು ಮತ್ತು ಬರಹಗಾರರನ್ನು ಹತ್ಯೆ ಮಾಡಿದೆ. PEN ಅಮೆರಿಕದಂತಹ ಸಂಸ್ಥೆಗಳು ಪ್ಯಾಲೆಸ್ತೀನ್ ಜನರ ಜೀವನ ಮತ್ತು ಸಂಸ್ಕೃತಿಯನ್ನು ನಾಶಮಾಡುವ ಸ್ಪಷ್ಟ ಪ್ರಯತ್ನದ ಮುಂದೆ ರಾಜಕೀಯ ತಟಸ್ಥತೆಯನ್ನು ಮುಂದುವರಿಸಿದರೆ, ಗಾಝಾದಲ್ಲಿ ಅವರ ಕಥೆಯನ್ನು ಹೇಳಲು ಯಾವುದೇ ಬರಹಗಾರರು ಉಳಿಯಲಿದ್ದಾರಾ ಎಂದು ಸಾಹಿತಿಗಳು ಮತ್ತು ಬರಹಗಾರರು ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...