Homeಅಂತರಾಷ್ಟ್ರೀಯಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ 'ಸಾಹಿತ್ಯ ಉತ್ಸವ'ಕ್ಕೆ ಬಹಿಷ್ಕಾರ ಹಾಕಿದ...

ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

- Advertisement -
- Advertisement -

ಗಾಝಾ ಮೇಲಿನ ಯುದ್ಧವನ್ನು ತಡೆಯುವಲ್ಲಿ ವಿಫಲವಾದ ಕಾರಣ ಹಲವು ಸಾಹಿತಿಗಳು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು ಅಮೆರಿಕದಲ್ಲಿ ನಡೆಯುವ ಪ್ರತಿಷ್ಠಿತ PEN ವಿಶ್ವ ಧ್ವನಿ ಉತ್ಸವವನ್ನು( PEN World Voices Festival) ಬಹಿಷ್ಕರಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಖ್ಯಾತ ಬರಹಗಾರರಾದ ನವೋಮಿ ಕ್ಲೈನ್, ಮಿಚೆಲ್ ಅಲೆಕ್ಸಾಂಡರ್, ಹಿಶಾಮ್ ಮಟರ್, ಇಸಾಬೆಲ್ಲಾ ಹಮ್ಮದ್, ಮಾಝಾ ಮೆಂಗಿಸ್ಟೆ, ಝೈನಾ ಅರಾಫತ್ ಮತ್ತು ಸುಸಾನ್ ಮುಅಡ್ಡಿ ದರ್ರಾಜ್ ಪತ್ರಕ್ಕೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ,  ಇದಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗೆಗಿನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಇತರ ಬರಹಗಾರರನ್ನು ಒತ್ತಾಯಿಸಿದ್ದಾರೆ.

PEN ವಿಶ್ವ ಧ್ವನಿ ಉತ್ಸವವನ್ನು ವಿಶ್ವದ ಅತ್ಯಂತ ಪ್ರತಿಷ್ಠಿತ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಒಂದೆಂದು ಹೆಸರಿಸಲಾಗಿದೆ ಮತ್ತು 2005ರಿಂದ ಈ ಕಾರ್ಯಕ್ರಮವನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ.

ಗಾಝಾದ ಮೇಲೆ ಇಸ್ರೇಲ್‌ ಯುದ್ಧ ನಡೆಸುತ್ತಿರುವ ಈ ಸನ್ನಿವೇಶದಲ್ಲಿ PEN ಅಮೆರಿಕಾ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಬರಹಗಾರರಿಗೆ ಸ್ವಾತಂತ್ರ್ಯ ಕುರಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ ಎಂದು ಪತ್ರದಲ್ಲಿ ಪ್ರತಿಪಾದಿಸಲಾಗಿದೆ. ಪತ್ರದಲ್ಲಿ ಗಾಝಾದಲ್ಲಿ ತಕ್ಷಣದ ಕದನ ವಿರಾಮವನ್ನು ಒತ್ತಾಯಿಸುವ ಇತರ ಮಾನವ ಹಕ್ಕುಗಳ ಸಂಘಟನೆಗಳೊಂದಿಗೆ ಸೇರಲು PEN ಅಮೆರಿಕ ಉತ್ಸುಕತೆಯನ್ನು ತೋರಿಲ್ಲ ಎಂದು ಉಲ್ಲೇಖಿಸಲಾಗಿದೆ.

600 ಬರಹಗಾರರು ಮತ್ತು ಕವಿಗಳ ಗುಂಪು ಗಾಝಾದ ಮೇಲೆ ದಾಳಿಯನ್ನು ಖಂಡಿಸದ PENನ ಸಾಪೇಕ್ಷ ಮೌನವನ್ನು ಖಂಡಿಸುವ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ. ಆ ಪತ್ರಕ್ಕೆ ಈಗ ರೊಕ್ಸೇನ್ ಗೇ, ಲಾರೆನ್ ಗ್ರಾಫ್, ಮೇರಿ-ಹೆಲೆನ್ ಬರ್ಟಿನೊ, ಕೀಸೆ ಲೇಮನ್, ಸಯೀದ್ ಜೋನ್ಸ್, ಕಾರ್ಮೆನ್ ಮರಿಯಾ ಮಚಾಡೊ, ಸೋಲ್ಮಾಜ್ ಷರೀಫ್, ಟಾಮಿ ಪಿಕೊ, ಲಾರಾ ವ್ಯಾನ್ ಡೆನ್ ಬರ್ಗ್ ಮತ್ತು ನಾನಾ ಕ್ವಾಮೆ ಅಡ್ಜೆ ಸೇರಿದಂತೆ 1300ಕ್ಕೂ ಹೆಚ್ಚು ಬರಹಗಾರರು ಸಹಿ ಹಾಕಿದ್ದಾರೆ.

ನ್ಯೂಯಾರ್ಕ್ ನಗರದಲ್ಲಿ ಈ ವರ್ಷದ PEN ವರ್ಲ್ಡ್ ವಾಯ್ಸ್ ಉತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಲು ನಮ್ಮಲ್ಲಿ ಪ್ರತಿಯೊಬ್ಬರನ್ನು ಆಹ್ವಾನಿಸಲಾಗಿದೆ. ನಾವು ಎಲ್ಲರೂ ಸೇರಿ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇವೆ. ನಮಗೆ ಉತ್ಸವದ ಬಹಿಷ್ಕಾರವಲ್ಲದೆ ಬೇರೆ ಆಯ್ಕೆ ಯಾಕಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದೇವೆ ಎಂದು ಹೇಳಿದ್ದಾರೆ.

ಗಾಝಾದ ಮೇಲೆ ಇಸ್ರೇಲ್‌ನ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ, PEN ಅಮೆರಿಕ ಎಲ್ಲರಿಗೂ ಶಾಂತಿ ಮತ್ತು ಸಮಾನತೆ ಮತ್ತು ಸ್ವಾತಂತ್ರ್ಯ ಮತ್ತು ಭದ್ರತೆಗೆ ಸಂಬಂಧಿಸಿದ ಪ್ರತಿಪಾದಿತ ಬದ್ಧತೆಗೆ ದ್ರೋಹ ಮಾಡಿದೆ ಎಂದು ನಾವು ನಂಬುತ್ತೇವೆ. 1948ರಲ್ಲಿ ಅಳವಡಿಸಿಕೊಂಡ PEN ತತ್ವದ ಪ್ರಕಾರ, ಜಗತ್ತಿನಲ್ಲಿ ಶಾಂತಿ ಮತ್ತು ಸಮಾನತೆಯಿಂದ ಬದುಕುವ ಒಂದು ಮಾನವೀಯತೆಯ ಆದರ್ಶವನ್ನು ಸಾಧಿಸಲು ತಮ್ಮ ಕೈಲಾದಷ್ಟು ಕೆಲಸ ಮಾಡುವುದು PEN ಸದಸ್ಯರ ಕರ್ತವ್ಯವಾಗಿದೆ ಎಂದು ಹೇಳುತ್ತದೆ. ಪ್ಯಾಲೆಸ್ತೀನ್‌ನಲ್ಲಿ ಕವಿಗಳು, ವಿದ್ವಾಂಸರು, ಕಾದಂಬರಿಕಾರರು ಮತ್ತು ಪತ್ರಕರ್ತರು ಮತ್ತು ಪ್ರಬಂಧಕಾರರು ತಮ್ಮ ಮಾತುಗಳನ್ನು ಪ್ರಪಂಚದೊಂದಿಗೆ ಹಂಚಿಕೊಳ್ಳಲು ತಮ್ಮ ಜೀವನ ಮತ್ತು ಅವರ ಕುಟುಂಬಗಳ ಜೀವನವನ್ನು ಒಳಗೊಂಡಂತೆ ಎಲ್ಲವನ್ನೂ ಪಣಕ್ಕಿಟ್ಟಿದ್ದಾರೆ. ಆದರೂ PEN ಅಮೇರಿಕ ತುಳಿತಕ್ಕೊಳಗಾದವರ ಪರವಾಗಿ ದೃಢವಾಗಿ ನಿಲ್ಲಲಿಲ್ಲ ಎಂದು ಹೇಳಿದ್ದಾರೆ.

ನಿಮಗೆ ತಿಳಿದಿರುವಂತೆ, ಪ್ರಸ್ತುತ ಗಾಝಾದಲ್ಲಿ ನಾಗರಿಕರ ನರಮೇಧ ನಡೆಸಲಾಗುತ್ತಿದೆ, ಇದರ ಭಯಾನಕತೆಯನ್ನು ಪ್ರತಿದಿನ ಚಿತ್ರೀಕರಿಸಲಾಗುತ್ತಿದೆ ಮತ್ತು ಪ್ರಪಂಚದಾದ್ಯಂತ ವೈರಲ್‌ ಮಾಡಲಾಗಿದೆ. ಇಸ್ರೇಲ್‌ ಹತ್ಯಾಕಾಂಡಕ್ಕೆ ಈವರೆಗೆ 1,00,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 12,000ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 30,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಗಾಝಾದಲ್ಲಿ 70 ಪ್ರತಿಶತದಷ್ಟು ಮನೆಗಳು ಹಾನಿಗೊಳಗಾಗಿವೆ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಜನರು ಬರಗಾಲದ ಅಪಾಯದಲ್ಲಿದ್ದಾರೆ ಮತ್ತು ತಮ್ಮ ಮನೆಗಳ ಮೇಲೆ ಬಾಂಬ್ ದಾಳಿಯಿಂದ ಬದುಕುಳಿದ ನಂತರವೂ ಮಕ್ಕಳು ಮತ್ತು ವೃದ್ಧರು ಅಪೌಷ್ಟಿಕತೆ ಮತ್ತು ನಿರ್ಜಲೀಕರಣದಿಂದ ಸಾಯುತ್ತಿದ್ದಾರೆ. ಇದೆಲ್ಲದರ ಹೊರತಾಗಿಯೂ, ತಕ್ಷಣದ ಮತ್ತು ಬೇಷರತ್ತಾದ ಕದನ ವಿರಾಮದ ಬೇಡಿಕೆಗಳಲ್ಲಿ ಇತರ ಪ್ರಮುಖ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಅಧಿಕಾರಿಗಳನ್ನು ಸೇರಲು PEN ಅಮೆರಿಕ ನಿರಾಕರಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಯುದ್ಧ ಪ್ರಾರಂಭಿಸಿದ ಬಳಿಕ ಇಸ್ರೇಲ್ ಸುಮಾರು ನೂರು ಪತ್ರಕರ್ತರು ಮತ್ತು ಮಾದ್ಯಮ ಕಾರ್ಯಕರ್ತರನ್ನು ಹತ್ಯೆ ಮಾಡಿದೆ. ಅಫ್ಘಾನಿಸ್ತಾನದಲ್ಲಿ ಯುದ್ಧದ ವೇಳೆ ಸಂಭವಿಸಿದ ಸಾವಿಗಿಂತ ಇದು ಅಧಿಕವಾಗಿದೆ. ಇಸ್ರೇಲ್ ಸುಮಾರು ನೂರು ಶಿಕ್ಷಣ ತಜ್ಞರು ಮತ್ತು ಬರಹಗಾರರನ್ನು ಹತ್ಯೆ ಮಾಡಿದೆ. PEN ಅಮೆರಿಕದಂತಹ ಸಂಸ್ಥೆಗಳು ಪ್ಯಾಲೆಸ್ತೀನ್ ಜನರ ಜೀವನ ಮತ್ತು ಸಂಸ್ಕೃತಿಯನ್ನು ನಾಶಮಾಡುವ ಸ್ಪಷ್ಟ ಪ್ರಯತ್ನದ ಮುಂದೆ ರಾಜಕೀಯ ತಟಸ್ಥತೆಯನ್ನು ಮುಂದುವರಿಸಿದರೆ, ಗಾಝಾದಲ್ಲಿ ಅವರ ಕಥೆಯನ್ನು ಹೇಳಲು ಯಾವುದೇ ಬರಹಗಾರರು ಉಳಿಯಲಿದ್ದಾರಾ ಎಂದು ಸಾಹಿತಿಗಳು ಮತ್ತು ಬರಹಗಾರರು ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...