Homeಮುಖಪುಟ‘ಹರಿತವಲ್ಲ ಬಲವಾದ ಹಲವು ಗಾಯವಿದೆ’: ಬಿಜೆಪಿ ನಾಯಕಿ ಸೋನಾಲಿ ಫೋಗಟ್‌ ಶವಪರೀಕ್ಷೆ ವರದಿ

‘ಹರಿತವಲ್ಲ ಬಲವಾದ ಹಲವು ಗಾಯವಿದೆ’: ಬಿಜೆಪಿ ನಾಯಕಿ ಸೋನಾಲಿ ಫೋಗಟ್‌ ಶವಪರೀಕ್ಷೆ ವರದಿ

ಟಿಕ್‌ಟಾಕ್ ವೀಡಿಯೊ ಮೂಲಕ ಖ್ಯಾತಿ ಪಡೆದಿದ್ದ ಸೋನಾಲಿ ಫೋಗಟ್‌ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು

- Advertisement -
- Advertisement -

ಗೋವಾದಲ್ಲಿ ಮೃತಪಟ್ಟ ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ದೇಹದಲ್ಲಿ ‘ಹಲವು ಹರಿತವಲ್ಲದ ಬಲವಾದ ಗಾಯಗಳು(multiple blunt force injurie)’ ಕಂಡು ಬಂದಿದೆ ಎಂದು ಶವಪರೀಕ್ಷೆ ವರದಿ ಗುರುವಾರ ಬಹಿರಂಗಪಡಿಸಿದೆ. ಸೋನಾಲಿ ಅವರ ಇಬ್ಬರು ಸಹಚರರ ಮೇಲೆ ಅವರ ಕೊಲೆ ಆರೋಪ ಹೊರಿಸಿದ ಕೆಲವೇ ಗಂಟೆಗಳಲ್ಲಿ ಈ ವರದಿ ಬಂದಿದೆ.

“ದೇಹದ ಮೇಲೆ ಅನೇಕ ಹರಿತವಲ್ಲದ ಬಲವಾದ ಗಾಯಗಳಿವೆ. ಅವುಗಳನ್ನು ಗಮನಿಸಿದರೆ ಸಾವಿನ ವಿಧಾನವನ್ನು ತನಿಖಾಧಿಕಾರಿಯೇ ಖಚಿತಪಡಿಸಿಕೊಳ್ಳಬೇಕು” ಎಂದು ಪೋಸ್ಟ್ ಮಾರ್ಟಂ ವರದಿ ಹೇಳಿದೆ. ಆದರೆ, ಸೋನಾಲಿ ಫೋಗಟ್ ಅವರ ದೇಹದ ದೈಹಿಕ ಪರೀಕ್ಷೆಯನ್ನು ನಡೆಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ದೇಹದ ಮೇಲೆ ಯಾವುದೇ ಹರಿತವಾದ(ಚೂಪಾದ) ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಾಲಿ ಫೋಗಟ್ ಅವರ ಕೊಲೆ ಮಾಡಿದ್ದಾರೆ ಎಂದು ಸೋಮವಾರ ಅವರು ಗೋವಾಕ್ಕೆ ಆಗಮಿಸಿದಾಗ ಅವರ ಜೊತೆಗಿದ್ದ ಅವರ ಆಪ್ತ ಸಹಾಯಕ ಸುಧೀರ್ ಸಾಂಗ್ವಾನ್ ಮತ್ತು ಅವರ ಸ್ನೇಹಿತ ಸುಖ್ವಿಂದರ್ ವಾಸಿ ವಿರುದ್ಧ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ‘ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌‌ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ’: ದೂರು ದಾಖಲಿಸಿದ ಸಹೋದರ

43 ವರ್ಷದ ಸೋನಾಲಿ ಫೋಗಟ್ ಮಂಗಳವಾರ ಬೆಳಗ್ಗೆ ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಅವರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ವರದಿಗಳನ್ನು ಅವರ ಕುಟುಂಬಿಕರು ಪ್ರಶ್ನಿಸಿದ್ದರು.

ಸೋನಾಲಿ ಫೋಗಟ್ ಅವರ ಶವಪರೀಕ್ಷೆ ವರದಿ

ಕುಟುಂಬಿಕರು ಮೃತದೇಹವನ್ನು ದೆಹಲಿಯ ಏಮ್ಸ್‌ನಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಬಯಸಿದ್ದರು. ಆದರೆ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ ನಂತರ ಗೋವಾದಲ್ಲೆ ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಕೊಂಡಿದ್ದರು.

ಮೂರು ವರ್ಷಗಳ ಹಿಂದೆ ತಮ್ಮ ಸಹೋದರಿಯನ್ನು ಸುಧೀರ್ ಸಂಗ್ವಾನ್ ಮತ್ತು ಸುಖ್ವಿಂದರ್ ಅತ್ಯಾಚಾರವೆಸಗಿದ್ದರು. ಇದೀಗ ಅವರ ಕೊಲೆ ಮಾಡಿದ್ದಾರೆ ಎಂದು ಸೋನಾಲಿ ಸಹೋದರ ರಿಂಕು ಧಾಕಾ ದೂರು ದಾಖಲಿಸಿದ್ದಾರೆ. ಸೋನಾಲಿ ಅವರ ವಿಡಿಯೋ ಮೂಲಕ ಅವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಟಿಕ್‌ಟಾಕ್‌ ಸ್ಟಾರ್‌ ಸೋನಾಲಿಗೆ ಸೋಲು: ಮತದಾರರ ಮನ ಗೆದ್ದ ಕುಲ್ದೀಪ್‌

“ಸೋನಾಲಿ ಅವರ ಆಹಾರದಲ್ಲಿ ಏನನ್ನೋ ಬೆರೆಸಲಾಗಿದೆ ಎಂದು ಅವರು ನಮಗೆ ಹೇಳಿದ್ದರು. ನಾವು ಅನುಮಾನಿಸುತ್ತಿರುವವರನ್ನು ಬಂಧಿಸಿ” ಎಂದು ಅವರ ಸಹೋದರ NDTV ಜೊತೆಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಸೋನಾಲಿ ಫೋಗಟ್ ಸಾಯುವ ಕೆಲವು ಗಂಟೆಗಳ ಮೊದಲು ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು ಎಂದು ರಿಂಕು ಹೇಳಿದ್ದಾರೆ. ಈ ವೇಳೆ ಅವರು ವಿಚಲಿತಳಾಗಿದ್ದು, ತನ್ನ ಸಹಾಯಕರ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದರು ಜೊತೆಗೆ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ನಿರ್ಧರಿಸಿದ್ದಾರು ಎಂದು ರಿಂಕು ಹೇಳಿದ್ದಾರೆ.

ಸುಧೀರ್ ಸಂಗ್ವಾನ್ ತನ್ನ ಸಹೋದರಿಯ ರಾಜಕೀಯ ಮತ್ತು ನಟನಾ ವೃತ್ತಿಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಸೋನಾಲಿಯ ಫೋನ್‌ಗಳು, ಆಸ್ತಿ ದಾಖಲೆಗಳು, ಎಟಿಎಂ ಕಾರ್ಡ್‌ಗಳು ಮತ್ತು ಮನೆಯ ಕೀಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ರಿಂಕು ಧಾಕಾ ಆರೋಪಿಸಿದ್ದಾರೆ. ಅವರ ಸಾವಿನ ನಂತರ ಹರಿಯಾಣದಲ್ಲಿರುವ ಅವರ ಫಾರ್ಮ್‌ಹೌಸ್‌ನಿಂದ ಸಿಸಿಟಿವಿ ಕ್ಯಾಮೆರಾಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಗ್ಯಾಜೆಟ್‌ಗಳು ಕಾಣೆಯಾಗಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾಮರಾ ಎದುರಲ್ಲೇ ಅಧಿಕಾರಿಗೆ ಚಪ್ಪಲಿಯಲ್ಲಿ ಹೊಡೆದ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌

ತನ್ನ ಟಿಕ್‌ಟಾಕ್ ವೀಡಿಯೊ ಮೂಲಕ ಖ್ಯಾತಿ ಪಡೆದಿದ್ದ ಸೋನಾಲಿ ಫೋಗಟ್‌ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಆಗಿನ ಕಾಂಗ್ರೆಸ್ ನಾಯಕ ಕುಲದೀಪ್ ಬಿಷ್ಣೋಯ್ ವಿರುದ್ಧ ಸೋತಿದ್ದರು (ಅವರು ನಂತರ ಬಿಜೆಪಿಗೆ ಸೇರಿದ್ದಾರೆ). 2020 ರಲ್ಲಿ ಸೋನಾಲಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು.

ಸೋನಾಲಿ ಅವರ 15 ವರ್ಷದ ಮಗಳು ಯಶೋಧರ ಕೂಡ ತನ್ನ ತಾಯಿಗೆ ನ್ಯಾಯ ದೊರಕಿಸಿಕೊಡುವಂತೆ ಕೇಳಿಕೊಂಡಿದ್ದಾರೆ. ಸೋನಾಲಿ ಫೋಗಟ್ ಅವರ ಪತಿ 2016 ರಲ್ಲಿ ನಿಧನರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...