Homeಮುಖಪುಟ‘ಹರಿತವಲ್ಲ ಬಲವಾದ ಹಲವು ಗಾಯವಿದೆ’: ಬಿಜೆಪಿ ನಾಯಕಿ ಸೋನಾಲಿ ಫೋಗಟ್‌ ಶವಪರೀಕ್ಷೆ ವರದಿ

‘ಹರಿತವಲ್ಲ ಬಲವಾದ ಹಲವು ಗಾಯವಿದೆ’: ಬಿಜೆಪಿ ನಾಯಕಿ ಸೋನಾಲಿ ಫೋಗಟ್‌ ಶವಪರೀಕ್ಷೆ ವರದಿ

ಟಿಕ್‌ಟಾಕ್ ವೀಡಿಯೊ ಮೂಲಕ ಖ್ಯಾತಿ ಪಡೆದಿದ್ದ ಸೋನಾಲಿ ಫೋಗಟ್‌ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು

- Advertisement -
- Advertisement -

ಗೋವಾದಲ್ಲಿ ಮೃತಪಟ್ಟ ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ದೇಹದಲ್ಲಿ ‘ಹಲವು ಹರಿತವಲ್ಲದ ಬಲವಾದ ಗಾಯಗಳು(multiple blunt force injurie)’ ಕಂಡು ಬಂದಿದೆ ಎಂದು ಶವಪರೀಕ್ಷೆ ವರದಿ ಗುರುವಾರ ಬಹಿರಂಗಪಡಿಸಿದೆ. ಸೋನಾಲಿ ಅವರ ಇಬ್ಬರು ಸಹಚರರ ಮೇಲೆ ಅವರ ಕೊಲೆ ಆರೋಪ ಹೊರಿಸಿದ ಕೆಲವೇ ಗಂಟೆಗಳಲ್ಲಿ ಈ ವರದಿ ಬಂದಿದೆ.

“ದೇಹದ ಮೇಲೆ ಅನೇಕ ಹರಿತವಲ್ಲದ ಬಲವಾದ ಗಾಯಗಳಿವೆ. ಅವುಗಳನ್ನು ಗಮನಿಸಿದರೆ ಸಾವಿನ ವಿಧಾನವನ್ನು ತನಿಖಾಧಿಕಾರಿಯೇ ಖಚಿತಪಡಿಸಿಕೊಳ್ಳಬೇಕು” ಎಂದು ಪೋಸ್ಟ್ ಮಾರ್ಟಂ ವರದಿ ಹೇಳಿದೆ. ಆದರೆ, ಸೋನಾಲಿ ಫೋಗಟ್ ಅವರ ದೇಹದ ದೈಹಿಕ ಪರೀಕ್ಷೆಯನ್ನು ನಡೆಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ದೇಹದ ಮೇಲೆ ಯಾವುದೇ ಹರಿತವಾದ(ಚೂಪಾದ) ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಾಲಿ ಫೋಗಟ್ ಅವರ ಕೊಲೆ ಮಾಡಿದ್ದಾರೆ ಎಂದು ಸೋಮವಾರ ಅವರು ಗೋವಾಕ್ಕೆ ಆಗಮಿಸಿದಾಗ ಅವರ ಜೊತೆಗಿದ್ದ ಅವರ ಆಪ್ತ ಸಹಾಯಕ ಸುಧೀರ್ ಸಾಂಗ್ವಾನ್ ಮತ್ತು ಅವರ ಸ್ನೇಹಿತ ಸುಖ್ವಿಂದರ್ ವಾಸಿ ವಿರುದ್ಧ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ‘ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌‌ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ’: ದೂರು ದಾಖಲಿಸಿದ ಸಹೋದರ

43 ವರ್ಷದ ಸೋನಾಲಿ ಫೋಗಟ್ ಮಂಗಳವಾರ ಬೆಳಗ್ಗೆ ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಅವರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ವರದಿಗಳನ್ನು ಅವರ ಕುಟುಂಬಿಕರು ಪ್ರಶ್ನಿಸಿದ್ದರು.

ಸೋನಾಲಿ ಫೋಗಟ್ ಅವರ ಶವಪರೀಕ್ಷೆ ವರದಿ

ಕುಟುಂಬಿಕರು ಮೃತದೇಹವನ್ನು ದೆಹಲಿಯ ಏಮ್ಸ್‌ನಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಬಯಸಿದ್ದರು. ಆದರೆ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ ನಂತರ ಗೋವಾದಲ್ಲೆ ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಕೊಂಡಿದ್ದರು.

ಮೂರು ವರ್ಷಗಳ ಹಿಂದೆ ತಮ್ಮ ಸಹೋದರಿಯನ್ನು ಸುಧೀರ್ ಸಂಗ್ವಾನ್ ಮತ್ತು ಸುಖ್ವಿಂದರ್ ಅತ್ಯಾಚಾರವೆಸಗಿದ್ದರು. ಇದೀಗ ಅವರ ಕೊಲೆ ಮಾಡಿದ್ದಾರೆ ಎಂದು ಸೋನಾಲಿ ಸಹೋದರ ರಿಂಕು ಧಾಕಾ ದೂರು ದಾಖಲಿಸಿದ್ದಾರೆ. ಸೋನಾಲಿ ಅವರ ವಿಡಿಯೋ ಮೂಲಕ ಅವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಟಿಕ್‌ಟಾಕ್‌ ಸ್ಟಾರ್‌ ಸೋನಾಲಿಗೆ ಸೋಲು: ಮತದಾರರ ಮನ ಗೆದ್ದ ಕುಲ್ದೀಪ್‌

“ಸೋನಾಲಿ ಅವರ ಆಹಾರದಲ್ಲಿ ಏನನ್ನೋ ಬೆರೆಸಲಾಗಿದೆ ಎಂದು ಅವರು ನಮಗೆ ಹೇಳಿದ್ದರು. ನಾವು ಅನುಮಾನಿಸುತ್ತಿರುವವರನ್ನು ಬಂಧಿಸಿ” ಎಂದು ಅವರ ಸಹೋದರ NDTV ಜೊತೆಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಸೋನಾಲಿ ಫೋಗಟ್ ಸಾಯುವ ಕೆಲವು ಗಂಟೆಗಳ ಮೊದಲು ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು ಎಂದು ರಿಂಕು ಹೇಳಿದ್ದಾರೆ. ಈ ವೇಳೆ ಅವರು ವಿಚಲಿತಳಾಗಿದ್ದು, ತನ್ನ ಸಹಾಯಕರ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದರು ಜೊತೆಗೆ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ನಿರ್ಧರಿಸಿದ್ದಾರು ಎಂದು ರಿಂಕು ಹೇಳಿದ್ದಾರೆ.

ಸುಧೀರ್ ಸಂಗ್ವಾನ್ ತನ್ನ ಸಹೋದರಿಯ ರಾಜಕೀಯ ಮತ್ತು ನಟನಾ ವೃತ್ತಿಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಸೋನಾಲಿಯ ಫೋನ್‌ಗಳು, ಆಸ್ತಿ ದಾಖಲೆಗಳು, ಎಟಿಎಂ ಕಾರ್ಡ್‌ಗಳು ಮತ್ತು ಮನೆಯ ಕೀಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ರಿಂಕು ಧಾಕಾ ಆರೋಪಿಸಿದ್ದಾರೆ. ಅವರ ಸಾವಿನ ನಂತರ ಹರಿಯಾಣದಲ್ಲಿರುವ ಅವರ ಫಾರ್ಮ್‌ಹೌಸ್‌ನಿಂದ ಸಿಸಿಟಿವಿ ಕ್ಯಾಮೆರಾಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಗ್ಯಾಜೆಟ್‌ಗಳು ಕಾಣೆಯಾಗಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾಮರಾ ಎದುರಲ್ಲೇ ಅಧಿಕಾರಿಗೆ ಚಪ್ಪಲಿಯಲ್ಲಿ ಹೊಡೆದ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌

ತನ್ನ ಟಿಕ್‌ಟಾಕ್ ವೀಡಿಯೊ ಮೂಲಕ ಖ್ಯಾತಿ ಪಡೆದಿದ್ದ ಸೋನಾಲಿ ಫೋಗಟ್‌ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಆಗಿನ ಕಾಂಗ್ರೆಸ್ ನಾಯಕ ಕುಲದೀಪ್ ಬಿಷ್ಣೋಯ್ ವಿರುದ್ಧ ಸೋತಿದ್ದರು (ಅವರು ನಂತರ ಬಿಜೆಪಿಗೆ ಸೇರಿದ್ದಾರೆ). 2020 ರಲ್ಲಿ ಸೋನಾಲಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು.

ಸೋನಾಲಿ ಅವರ 15 ವರ್ಷದ ಮಗಳು ಯಶೋಧರ ಕೂಡ ತನ್ನ ತಾಯಿಗೆ ನ್ಯಾಯ ದೊರಕಿಸಿಕೊಡುವಂತೆ ಕೇಳಿಕೊಂಡಿದ್ದಾರೆ. ಸೋನಾಲಿ ಫೋಗಟ್ ಅವರ ಪತಿ 2016 ರಲ್ಲಿ ನಿಧನರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...