Homeಮುಖಪುಟ‘ಹರಿತವಲ್ಲ ಬಲವಾದ ಹಲವು ಗಾಯವಿದೆ’: ಬಿಜೆಪಿ ನಾಯಕಿ ಸೋನಾಲಿ ಫೋಗಟ್‌ ಶವಪರೀಕ್ಷೆ ವರದಿ

‘ಹರಿತವಲ್ಲ ಬಲವಾದ ಹಲವು ಗಾಯವಿದೆ’: ಬಿಜೆಪಿ ನಾಯಕಿ ಸೋನಾಲಿ ಫೋಗಟ್‌ ಶವಪರೀಕ್ಷೆ ವರದಿ

ಟಿಕ್‌ಟಾಕ್ ವೀಡಿಯೊ ಮೂಲಕ ಖ್ಯಾತಿ ಪಡೆದಿದ್ದ ಸೋನಾಲಿ ಫೋಗಟ್‌ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು

- Advertisement -
- Advertisement -

ಗೋವಾದಲ್ಲಿ ಮೃತಪಟ್ಟ ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ದೇಹದಲ್ಲಿ ‘ಹಲವು ಹರಿತವಲ್ಲದ ಬಲವಾದ ಗಾಯಗಳು(multiple blunt force injurie)’ ಕಂಡು ಬಂದಿದೆ ಎಂದು ಶವಪರೀಕ್ಷೆ ವರದಿ ಗುರುವಾರ ಬಹಿರಂಗಪಡಿಸಿದೆ. ಸೋನಾಲಿ ಅವರ ಇಬ್ಬರು ಸಹಚರರ ಮೇಲೆ ಅವರ ಕೊಲೆ ಆರೋಪ ಹೊರಿಸಿದ ಕೆಲವೇ ಗಂಟೆಗಳಲ್ಲಿ ಈ ವರದಿ ಬಂದಿದೆ.

“ದೇಹದ ಮೇಲೆ ಅನೇಕ ಹರಿತವಲ್ಲದ ಬಲವಾದ ಗಾಯಗಳಿವೆ. ಅವುಗಳನ್ನು ಗಮನಿಸಿದರೆ ಸಾವಿನ ವಿಧಾನವನ್ನು ತನಿಖಾಧಿಕಾರಿಯೇ ಖಚಿತಪಡಿಸಿಕೊಳ್ಳಬೇಕು” ಎಂದು ಪೋಸ್ಟ್ ಮಾರ್ಟಂ ವರದಿ ಹೇಳಿದೆ. ಆದರೆ, ಸೋನಾಲಿ ಫೋಗಟ್ ಅವರ ದೇಹದ ದೈಹಿಕ ಪರೀಕ್ಷೆಯನ್ನು ನಡೆಸಿದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ದೇಹದ ಮೇಲೆ ಯಾವುದೇ ಹರಿತವಾದ(ಚೂಪಾದ) ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋನಾಲಿ ಫೋಗಟ್ ಅವರ ಕೊಲೆ ಮಾಡಿದ್ದಾರೆ ಎಂದು ಸೋಮವಾರ ಅವರು ಗೋವಾಕ್ಕೆ ಆಗಮಿಸಿದಾಗ ಅವರ ಜೊತೆಗಿದ್ದ ಅವರ ಆಪ್ತ ಸಹಾಯಕ ಸುಧೀರ್ ಸಾಂಗ್ವಾನ್ ಮತ್ತು ಅವರ ಸ್ನೇಹಿತ ಸುಖ್ವಿಂದರ್ ವಾಸಿ ವಿರುದ್ಧ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ‘ಹರಿಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌‌ರನ್ನು ಗೋವಾದಲ್ಲಿ ಹತ್ಯೆ ಮಾಡಲಾಗಿದೆ’: ದೂರು ದಾಖಲಿಸಿದ ಸಹೋದರ

43 ವರ್ಷದ ಸೋನಾಲಿ ಫೋಗಟ್ ಮಂಗಳವಾರ ಬೆಳಗ್ಗೆ ಉತ್ತರ ಗೋವಾದ ಅಂಜುನಾದಲ್ಲಿರುವ ಸೇಂಟ್ ಆಂಥೋನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಅವರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ವರದಿಗಳನ್ನು ಅವರ ಕುಟುಂಬಿಕರು ಪ್ರಶ್ನಿಸಿದ್ದರು.

ಸೋನಾಲಿ ಫೋಗಟ್ ಅವರ ಶವಪರೀಕ್ಷೆ ವರದಿ

ಕುಟುಂಬಿಕರು ಮೃತದೇಹವನ್ನು ದೆಹಲಿಯ ಏಮ್ಸ್‌ನಲ್ಲಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಬಯಸಿದ್ದರು. ಆದರೆ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿದ ನಂತರ ಗೋವಾದಲ್ಲೆ ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಕೊಂಡಿದ್ದರು.

ಮೂರು ವರ್ಷಗಳ ಹಿಂದೆ ತಮ್ಮ ಸಹೋದರಿಯನ್ನು ಸುಧೀರ್ ಸಂಗ್ವಾನ್ ಮತ್ತು ಸುಖ್ವಿಂದರ್ ಅತ್ಯಾಚಾರವೆಸಗಿದ್ದರು. ಇದೀಗ ಅವರ ಕೊಲೆ ಮಾಡಿದ್ದಾರೆ ಎಂದು ಸೋನಾಲಿ ಸಹೋದರ ರಿಂಕು ಧಾಕಾ ದೂರು ದಾಖಲಿಸಿದ್ದಾರೆ. ಸೋನಾಲಿ ಅವರ ವಿಡಿಯೋ ಮೂಲಕ ಅವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಟಿಕ್‌ಟಾಕ್‌ ಸ್ಟಾರ್‌ ಸೋನಾಲಿಗೆ ಸೋಲು: ಮತದಾರರ ಮನ ಗೆದ್ದ ಕುಲ್ದೀಪ್‌

“ಸೋನಾಲಿ ಅವರ ಆಹಾರದಲ್ಲಿ ಏನನ್ನೋ ಬೆರೆಸಲಾಗಿದೆ ಎಂದು ಅವರು ನಮಗೆ ಹೇಳಿದ್ದರು. ನಾವು ಅನುಮಾನಿಸುತ್ತಿರುವವರನ್ನು ಬಂಧಿಸಿ” ಎಂದು ಅವರ ಸಹೋದರ NDTV ಜೊತೆಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಸೋನಾಲಿ ಫೋಗಟ್ ಸಾಯುವ ಕೆಲವು ಗಂಟೆಗಳ ಮೊದಲು ತನ್ನ ತಾಯಿ, ಸಹೋದರಿ ಮತ್ತು ಸೋದರ ಮಾವನ ಜೊತೆ ಮಾತನಾಡಿದ್ದರು ಎಂದು ರಿಂಕು ಹೇಳಿದ್ದಾರೆ. ಈ ವೇಳೆ ಅವರು ವಿಚಲಿತಳಾಗಿದ್ದು, ತನ್ನ ಸಹಾಯಕರ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದರು ಜೊತೆಗೆ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ನಿರ್ಧರಿಸಿದ್ದಾರು ಎಂದು ರಿಂಕು ಹೇಳಿದ್ದಾರೆ.

ಸುಧೀರ್ ಸಂಗ್ವಾನ್ ತನ್ನ ಸಹೋದರಿಯ ರಾಜಕೀಯ ಮತ್ತು ನಟನಾ ವೃತ್ತಿಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಸೋನಾಲಿಯ ಫೋನ್‌ಗಳು, ಆಸ್ತಿ ದಾಖಲೆಗಳು, ಎಟಿಎಂ ಕಾರ್ಡ್‌ಗಳು ಮತ್ತು ಮನೆಯ ಕೀಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ರಿಂಕು ಧಾಕಾ ಆರೋಪಿಸಿದ್ದಾರೆ. ಅವರ ಸಾವಿನ ನಂತರ ಹರಿಯಾಣದಲ್ಲಿರುವ ಅವರ ಫಾರ್ಮ್‌ಹೌಸ್‌ನಿಂದ ಸಿಸಿಟಿವಿ ಕ್ಯಾಮೆರಾಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಗ್ಯಾಜೆಟ್‌ಗಳು ಕಾಣೆಯಾಗಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾಮರಾ ಎದುರಲ್ಲೇ ಅಧಿಕಾರಿಗೆ ಚಪ್ಪಲಿಯಲ್ಲಿ ಹೊಡೆದ ಬಿಜೆಪಿ ನಾಯಕಿ ಸೋನಾಲಿ ಫೋಗಟ್‌

ತನ್ನ ಟಿಕ್‌ಟಾಕ್ ವೀಡಿಯೊ ಮೂಲಕ ಖ್ಯಾತಿ ಪಡೆದಿದ್ದ ಸೋನಾಲಿ ಫೋಗಟ್‌ 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಆಗಿನ ಕಾಂಗ್ರೆಸ್ ನಾಯಕ ಕುಲದೀಪ್ ಬಿಷ್ಣೋಯ್ ವಿರುದ್ಧ ಸೋತಿದ್ದರು (ಅವರು ನಂತರ ಬಿಜೆಪಿಗೆ ಸೇರಿದ್ದಾರೆ). 2020 ರಲ್ಲಿ ಸೋನಾಲಿ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡಿದ್ದರು.

ಸೋನಾಲಿ ಅವರ 15 ವರ್ಷದ ಮಗಳು ಯಶೋಧರ ಕೂಡ ತನ್ನ ತಾಯಿಗೆ ನ್ಯಾಯ ದೊರಕಿಸಿಕೊಡುವಂತೆ ಕೇಳಿಕೊಂಡಿದ್ದಾರೆ. ಸೋನಾಲಿ ಫೋಗಟ್ ಅವರ ಪತಿ 2016 ರಲ್ಲಿ ನಿಧನರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....