Homeಮುಖಪುಟಇಸ್ರೇಲ್‌ನಿಂದ ವೈಮಾನಿಕ ದಾಳಿ: ಇರಾನ್‌ನ ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿ 7 ಜನರ ಹತ್ಯೆ

ಇಸ್ರೇಲ್‌ನಿಂದ ವೈಮಾನಿಕ ದಾಳಿ: ಇರಾನ್‌ನ ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿ 7 ಜನರ ಹತ್ಯೆ

- Advertisement -
- Advertisement -

ಡಮಾಸ್ಕಸ್‌ನಲ್ಲಿರುವ ಇರಾನಿನ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ (IRGC)ನ ಇಬ್ಬರು ಕಮಾಂಡರ್‌ಗಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದಾರೆ.

ಐಆರ್‌ಜಿಸಿಯ ಎಲೈಟ್ ಕುಡ್ಸ್ ಫೋರ್ಸ್‌ನ ಹಿರಿಯ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಉಪ ಜನರಲ್ ಮೊಹಮ್ಮದ್ ಹಾದಿ ಹಜ್ರಿಯಾಹಿಮಿ ಅವರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಐಆರ್‌ಜಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಡಮಾಸ್ಕಸ್‌ನ ರಾಯಭಾರಿ ಕಚೇರಿ ಬಳಿ ಅವಶೇಷಗಳಿಂದ ಹೊಗೆ ಬರುತ್ತಿರುವುದು ಮತ್ತು ತುರ್ತು ವಾಹನಗಳು ರಾಯಭಾರಿ ಕಚೇರಿಯನ್ನು ಆವರಿಸಿರುವುದನ್ನು ಮತ್ತು ಅವಶೇಷಗಳ ಮುಂದೆ ಕಂಬಕ್ಕೆ ಕಟ್ಟಿದ್ದ ಇರಾನಿನ ಧ್ವಜ ನೇತಾಡುತ್ತಿದೆ, ಸಿರಿಯಾ ಮತ್ತು ಇರಾನ್ ವಿದೇಶಾಂಗ ಮಂತ್ರಿಗಳು ಘಟನಾ ಸ್ಥಳದಲ್ಲಿದ್ದರು ಎಂದು ವರದಿಗಾರರು ಕಂಡುಕೊಂಡಿದ್ದಾರೆ. ಘಟನೆಯಲ್ಲಿ ಇರಾನ್‌ನ ರಾಯಭಾರಿ ಹುಸೇನ್ ಅಕ್ಬರಿ ಅವರು ಗಾಯಗೊಂಡಿಲ್ಲ, ದಾಳಿಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ, ಇದರಲ್ಲಿ ಮೂವರು ಮಿಲಿಟರಿ ಸಿಬ್ಬಂದಿ ಸೇರಿದ್ದಾರೆ ಎಂದು ವರದಿಯಾಗಿದೆ.

ಇರಾನ್‌ನ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ಈ ದಾಳಿಯನ್ನು ಎಲ್ಲಾ ಅಂತರಾಷ್ಟ್ರೀಯ ಕಟ್ಟುಪಾಡುಗಳು ಮತ್ತು ನಿಯಮಗಳ ಉಲ್ಲಂಘನೆ ಎಂದು ವಿವರಿಸಿ ಇಸ್ರೇಲ್‌ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರ ನಾಸರ್ ಕನಾನಿ ಈ ಕುರಿತು ಪ್ರತ್ಯೇಕ ಹೇಳಿಕೆಯನ್ನು ಹೊರಡಿಸಿದ್ದು, ಪ್ರತಿಕ್ರಿಯೆಯನ್ನು ನೀಡುವ ಹಕ್ಕನ್ನು ಇರಾನ್ ಹೊಂದಿದೆ ಮತ್ತು ಪ್ರತಿಕ್ರಿಯೆಯ ವಿಧಾನ ಮತ್ತು ಆಕ್ರಮಣಕಾರರಿಗೆ ಶಿಕ್ಷೆ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ಸಿರಿಯಾದ ವಿದೇಶಾಂಗ ಸಚಿವ ಫೈಸಲ್ ಮೆಕ್ದಾದ್ ಈ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ. ಡಮಾಸ್ಕಸ್‌ನಲ್ಲಿರುವ ಇರಾನ್ ಕಾನ್ಸುಲೇಟ್ ಕಟ್ಟಡವನ್ನು ಗುರಿಯಾಗಿಸಿಕೊಂಡು ಹಲವಾರು ಮುಗ್ಧ ಜನರನ್ನು ಕೊಂದ ಈ ಭೀಕರ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಮೆಕ್ದಾದ್ ಹೇಳಿದ್ದಾರೆ.

ಇಸ್ರೇಲ್ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ರಷ್ಯಾ, ಇಸ್ರೇಲ್‌ ಸ್ವೀಕಾರಾರ್ಹವಲ್ಲದ ದಾಳಿಯನ್ನು ನಡೆಸುತ್ತಿದೆ ಎಂದು ಹೇಳಿದೆ. ದಾಳಿಯ ಬಗ್ಗೆ ಕೇಳಿದಾಗ, ಇಸ್ರೇಲಿ ಮಿಲಿಟರಿ ವಕ್ತಾರರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.  ವಿದೇಶಿ ಮಾಧ್ಯಮಗಳಲ್ಲಿನ ವರದಿಗಳ ಬಗ್ಗೆ ನಾವು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್ ಅಕ್ಟೋಬರ್ 7ರಂದು ಗಾಝಾದ ಮೇಲೆ ಯುದ್ಧ ಘೋಷಿಸಿದ ಬಳಿಕ  ಇಸ್ರೇಲ್ ಸಿರಿಯಾದಲ್ಲಿ ಲೆಬನಾನ್‌ನ ಇರಾನಿನ ಬೆಂಬಲಿತ ಹೆಜ್ಬೊಲ್ಲಾ ಮಿಲಿಷಿಯಾ ಮತ್ತು ಇರಾನ್‌ನ ಐಆರ್‌ಜಿಸಿ ವಿರುದ್ಧ ವೈಮಾನಿಕ ದಾಳಿಯನ್ನು ಹೆಚ್ಚಿಸಿದೆ, ಇವೆರಡೂ ಸಿರಿಯಾದ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಸರ್ಕಾರವನ್ನು ಬೆಂಬಲಿಸುತ್ತವೆ. ಗಾಝಾ- ಇಸ್ರೇಲ್‌ ನಡುವಿನ ಯುದ್ಧವು ಪ್ರಾದೇಶಿಕ ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಆತಂಕದ ನಡುವೆ, ಡಮಾಸ್ಕಸ್‌ನ ಮೇಲೆ ಈ ದಾಳಿ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ.

ಇದನ್ನು ಓದಿ: “ಅವರು ಕಚ್ಚತೀವು ದ್ವೀಪವನ್ನು ವಾಪಸ್ ತೆಗೆದುಕೊಳ್ಳುತ್ತಾರಾ..”; ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಂಸದರ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...