Homeಮುಖಪುಟಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

ಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

- Advertisement -
- Advertisement -

ಇಂದು ಸಂಜೆ NCP ಯ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ತಮ್ಮ ನಿವಾಸದಲ್ಲಿ 15 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಮಂಗಳವಾರ ನವದೆಹಲಿಯ ಪವಾರ್ ನಿವಾಸದಲ್ಲಿ ಆಮ್ ಆದ್ಮಿ, ಶಿವಸೇನೆ, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿ ಚರ್ಚೆ ನಡೆಸಿದ್ದಾರೆ.

ಈ ಸಭೆ ಶರದ್ ಪವಾರ್ ಮತ್ತು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್  ಭೇಟಿಯ ಬೆನ್ನಲ್ಲೇ ನಡೆದಿದೆ. ನಿನ್ನೆ ಪ್ರಶಾಂತ್ ಕಿಶೋರ್ ಎರಡನೇ ಬಾರಿಗೆ ಶರದ್ ಪವಾರ್ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆಗಳನ್ನು ನಡೆಸಿದ್ದರು. ಆದರೆ ಶರದ್ ಪವಾರ್ ಮತ್ತು ತಮ್ಮ ನಡುವಿನ ಚರ್ಚೆಯ ವಿಷಯವನ್ನು ಕುರಿತು ಪ್ರಶಾಂತ್ ಕಿಶೋರ್ ಇದುವರೆಗೆ ಹೆಚ್ಚಿನ ಮಾಹಿತಿಯನ್ನು ಹೊರಗೆಡವುತ್ತಿಲ್ಲ. ಆದರೆ ಒಂದು ವಾರದ ಅಂತರದಲ್ಲಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು 2 ಸಾರಿ ಭೇಟಿಯಾಗಿದ್ದಾರೆ. ಇದರ ಹಿಂದೆ ತೃತೀಯ ರಂಗದ ಲೆಕ್ಕಾಚಾರಗಳಿವೆ ಎಂದು ಅನೇಕ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಆದರೆ ಪ್ರಶಾಂತ್ ಕಿಶೋರ್ ಮಾತ್ರ ಶರದ್ ಪವಾರ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಲೆಕ್ಕಾಚಾರಗಳಿಲ್ಲ. ತೃತೀಯ ಚತುರ್ಥ ರಂಗಗಳ ರಚನೆಯ ಉದ್ಧೇಶವೂ ಇಲ್ಲ ಎಂದು ಹೆಳುತ್ತಲೆ ಬಂದಿದ್ದಾರೆ. ತೃತೀಯ, ಚತುರ್ಥ ರಂಗಗಳಿಂದ,  2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವುದು ಸಾಧ್ಯವಿಲ್ಲ. ಏನಿದ್ದರೂ ಬಿಜೆಪಿಗೆ ವಿರುದ್ಧವಾಗಿ ಎಲ್ಲಾ ಪಕ್ಷಗಳೂ ಒಗ್ಗೂಡಿ ಚುನಾವಣೆ ಎದುರಿಸಬೇಕು ಎಂದಿದ್ದಾರೆ.

ಶರದ್ ಪವಾರ್ ಅವರೊಂದಿಗಿನ ಭೇಟಿಯಲ್ಲಿ ತೃತೀಯ ರಂಗದ ಚರ್ಚೆಯಾಗಿಲ್ಲ. ಯಾವ ತಂತ್ರಗಳಿಂದ ಬಿಜೆಪಿಯನ್ನು ಕಟ್ಟಿಹಾಕಬಹುದು ಎಂದು ಅಗತ್ಯವಾಗಿ ಚರ್ಚಿಸಿದ್ದೇವೆ. ಆದರೆ ಯಾವುದೇ ರಾಜಕೀಯ ಪಕ್ಷಗಳ ಒಕ್ಕೂಟಗಳ ರಚನೆ ವಿಷಯ ಸದ್ಯಕ್ಕೆ ತಮ್ಮ ಮುಂದೆ ಇಲ್ಲ ಎಂದು ಕೂಡ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಹೇಳಿಕೆಗಳ ನಡುವೆಯೂ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ. ಕೇಂದ್ರದ ಮಾಜಿ ಸಚಿವ ಯಶವಂತ್‌ ಸಿನ್ಹಾ, ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ, ಶಿವಸೇನೆಯ ಸಂಜಯ್ ರಾವತ್, ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಓಮರ್ ಅಬ್ದುಲ್ಲಾ, ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಗುಪ್ತಾ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಈ ಸಭೆಯು ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆಯ ಒಂದು ಕಾರ್ಯಕ್ರಮವಾಗಿದೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ದೇಶದ ಆರ್ಥಿಕತೆ, ಕೊರೋನಾ ವಿರುದ್ಧದ ಹೋರಾಟದ ಕುರಿತು ಚರ್ಚೆ ನಡೆಸಲು ಸೇರಿದ್ದೇವೆ ಎಂದು ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿರುವ ಅನೇಕ ರಾಜಕೀಯರು ತಾವು ತಮ್ಮ ಪಕ್ಷದ ಪ್ರತಿನಿಧಿಗಳಾಗಿ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ಎಂದು ತಿಳಿಸಿದ್ದಾರೆ. ತಮ್ಮ ವಯಕ್ತಿಕ ಸ್ನೇಹದ ಕಾರಣಕ್ಕೆ ಸಮಾನ ಮನಸ್ಕ ವ್ಯಕ್ತಿಗಳು ಸೇರಿ ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆ ಆಯೋಜಿಸಿದ ವಿಚಾರ ವಿನಿಮಯದಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ಸಭೆಗೆ ಆಹ್ವಾನಿತರಾಗಿದ್ದ ಡಿಎಂಕೆಯ ನಾಯಕ ಎ ರಾಜಾ ಅವರು ಸಭೆಯ ಅಜೆಂಡಾ ಕುರಿತು ಸ್ಪಷ್ಟತೆಯಿಲ್ಲದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ.

ಇದನ್ನೂ ಓದಿ : ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ತೃತೀಯ ರಂಗದ ರಚನೆ ನಮ್ಮ ಮುಂದೆ ಇಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿರುವುದು ನಿಜವೇ ಆದರೆ ಇಂದು ವಿವಿಧ ಪಕ್ಷಗಳ ರಾಜಕೀಯ ನಾಯಕರು ಯಾವಕಾರಣಕ್ಕೆ ಸಭೆ ಸೇರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ತೃತೀಯ ರಂಗದ ರಚನೆಯ ಕುರಿತಾದ ಚರ್ಚೆ ನಡೆಯುತ್ತಿರುವುದು ನಿಜವಾದರೆ ದೇಶದ ಬಹು ಮುಖ್ಯ ವಿರೋಧ ಪಕ್ಷಗಳಾದ ಡಿಎಂಕೆ, ಸಮಾಜವಾದಿ ಪಾರ್ಟಿ, CPI, RJD, BSP, TRS  ಮುಂತಾದ ಪಕ್ಷಗಳ ನಾಯಕರು ಸಭೆಗೆ ಹಾಜರಿರಲಿಲ್ಲ. ಜೊತೆಗೆ ಪ್ರಶಾಂತ್ ಕಿಶೋರ್ ತೃತೀಯ ರಂಗದ ಬದಲಾಗಿ ಸಂಯಕ್ತ ವಿರೋಧ ಪಕ್ಷಗಳ ಒಕ್ಕೂಟ ರಚನೆಯ ಕುರಿತು ಒತ್ತು ನೀಡುತ್ತಿದ್ದಾರೆ. ಆದರೆ ದೇಶದ ದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಇತರ ವಿರೋಧ ಪಕ್ಷಗಳ ಜೊತೆಗಿನ ಮಾತುಕತೆಯ ಪ್ರಸ್ತಾಪಕ್ಕೆ ಇಂಗಿತವನ್ನು ಇದುವರೆಗೆ ವ್ಯಕ್ತಪಡಿಸಿಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳ ಪ್ರಬಲ ಶಕ್ತಿಯನ್ನು ಕಟ್ಟುವ ಶರದ್ ಪವಾರ್ ಅವರ ಪ್ರಯತ್ನಕ್ಕೆ ಹಿನ್ನಡೆಯಾಗುತ್ತಿದೆ ಎಂದು NCP ಯ ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಾಧ್ಯತೆಗಳೊಂದರ ಚರ್ಚೆಯನ್ನು ಹುಟ್ಟುಹಾಕಿವೆ. ಆದರೆ ಇದುವರೆಗೆ ಅನೇಕ ಸಾರಿ ದೇಶದಲ್ಲಿ ತೃತೀಯ ರಂಗದ ರಚನೆಯ ಚರ್ಚೆ ಅನೇಕಬಾರಿ ನಡೆದಿದೆ. 2019, 2014 ಹೀಗೆ ಹಿಂದಿನ ಲೋಕಸಭೆ ಚುನಾವಣೆಗಳ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೃತೀಯ ರಂಗದ ರಚನೆಯ ಪ್ರಯತ್ನವನ್ನು ನಡೆಸಿದ್ದಾರೆ. ಅದರೆ ತೃತೀಯ ರಂಗದ ರಾಷ್ಟ್ರವ್ಯಾಪಿ ರಾಜಕೀಯ ಸಂಘಟನೆ ಇದುವರೆಗೆ ಸಾಧ್ಯವಾಗಿಲ್ಲ.

ಇನ್ನೊಂದು ಕಡೆ 2019 ರ ಲೋಕಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್‌ ಪಕ್ಷದ ಅನೇಕ ನಾಯಕರುಗಳು ಕೂಡ ಸಂಯುಕ್ತ ವಿರೊಧ ಪಕ್ಷಗಳ ಒಕ್ಕೂಟದ ರಚನೆಯ ಅಗತ್ಯತೆ ಕುರಿತು ಮಾತನಾಡಿದ್ದರು. ಆದರೆ ಇದುವರೆಗೆ ಕಾಂಗ್ರೆಸ್‌ನ ಉನ್ನತ ನಾಯಕತ್ವ ಬಿಜೆಪಿ ವಿರುದ್ಧದ ವಿರೊಧ ಪಕ್ಷಗಳ ಪ್ರಬಲ ಸಂಘಟನೆಯ ಕಡೆ ಒಲವು ತೋರಿಲ್ಲ.

ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳ ನಡುವಿನ ಹೊಂದಾಣಿಕೆಯ ಕೊರತೆಗೆ ನಾಯಕತ್ವದ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ಒಂದು ವೇಳೆ ವಿರೋಧ ಪಕ್ಷಗಳ ಒಕ್ಕೂಟ ರಚನೆಯಾದರೆ ಅದು ಕಾಂಗ್ರೆಸ್‌ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಕಾಂಗ್ರೆಸ್‌ನ ಉನ್ನತ ನಾಯಕತ್ವ ಪಟ್ಟು ಹಿಡಿದಿರುವುದು ಕೂಡ ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಒಕ್ಕೂಟದ ರಚನೆಗೆ ಹಿನ್ನಡೆಯನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಲೇ ಕೆಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸೇತರ ತೃತಿಯ ರಂಗದ ರಚನೆಯ ಕಡೆಗೆ ಒಲವು ತೋರಿಸಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ UPA ಒಕ್ಕೂಟದ ಭಾಗವಾಗಿರುವ ಶರದ್ ಪವಾರ್ ಕಾಂಗ್ರೇಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಒಂದೇ ವೇದಿಕೆಗೆ ತರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ತೃತೀಯ ರಂಗವೋ, ವಿರೋಧಪಕ್ಷಗಳ ಒಕ್ಕೂಟವೋ ಅಥವಾ ಸಮಾನ ಮನಸ್ಕ ನಾಯಕರ ಸಂವಾದವೋ ಒಟ್ಟಿನಲ್ಲಿ ಶರದ್ ಪವಾರ್ ಮಾತ್ರ ರಾಷ್ಟ್ರ ರಾಜಕಾರಣದಲ್ಲಿ  ಒಂದಷ್ಟು ಬಿಸಿಬಿಸಿ ರಾಜಕೀಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದ್ದಾರೆ.

 -ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...