Homeಮುಖಪುಟಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

ಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

- Advertisement -
- Advertisement -

ಇಂದು ಸಂಜೆ NCP ಯ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ತಮ್ಮ ನಿವಾಸದಲ್ಲಿ 15 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಮಂಗಳವಾರ ನವದೆಹಲಿಯ ಪವಾರ್ ನಿವಾಸದಲ್ಲಿ ಆಮ್ ಆದ್ಮಿ, ಶಿವಸೇನೆ, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿ ಚರ್ಚೆ ನಡೆಸಿದ್ದಾರೆ.

ಈ ಸಭೆ ಶರದ್ ಪವಾರ್ ಮತ್ತು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್  ಭೇಟಿಯ ಬೆನ್ನಲ್ಲೇ ನಡೆದಿದೆ. ನಿನ್ನೆ ಪ್ರಶಾಂತ್ ಕಿಶೋರ್ ಎರಡನೇ ಬಾರಿಗೆ ಶರದ್ ಪವಾರ್ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆಗಳನ್ನು ನಡೆಸಿದ್ದರು. ಆದರೆ ಶರದ್ ಪವಾರ್ ಮತ್ತು ತಮ್ಮ ನಡುವಿನ ಚರ್ಚೆಯ ವಿಷಯವನ್ನು ಕುರಿತು ಪ್ರಶಾಂತ್ ಕಿಶೋರ್ ಇದುವರೆಗೆ ಹೆಚ್ಚಿನ ಮಾಹಿತಿಯನ್ನು ಹೊರಗೆಡವುತ್ತಿಲ್ಲ. ಆದರೆ ಒಂದು ವಾರದ ಅಂತರದಲ್ಲಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು 2 ಸಾರಿ ಭೇಟಿಯಾಗಿದ್ದಾರೆ. ಇದರ ಹಿಂದೆ ತೃತೀಯ ರಂಗದ ಲೆಕ್ಕಾಚಾರಗಳಿವೆ ಎಂದು ಅನೇಕ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಆದರೆ ಪ್ರಶಾಂತ್ ಕಿಶೋರ್ ಮಾತ್ರ ಶರದ್ ಪವಾರ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಲೆಕ್ಕಾಚಾರಗಳಿಲ್ಲ. ತೃತೀಯ ಚತುರ್ಥ ರಂಗಗಳ ರಚನೆಯ ಉದ್ಧೇಶವೂ ಇಲ್ಲ ಎಂದು ಹೆಳುತ್ತಲೆ ಬಂದಿದ್ದಾರೆ. ತೃತೀಯ, ಚತುರ್ಥ ರಂಗಗಳಿಂದ,  2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವುದು ಸಾಧ್ಯವಿಲ್ಲ. ಏನಿದ್ದರೂ ಬಿಜೆಪಿಗೆ ವಿರುದ್ಧವಾಗಿ ಎಲ್ಲಾ ಪಕ್ಷಗಳೂ ಒಗ್ಗೂಡಿ ಚುನಾವಣೆ ಎದುರಿಸಬೇಕು ಎಂದಿದ್ದಾರೆ.

ಶರದ್ ಪವಾರ್ ಅವರೊಂದಿಗಿನ ಭೇಟಿಯಲ್ಲಿ ತೃತೀಯ ರಂಗದ ಚರ್ಚೆಯಾಗಿಲ್ಲ. ಯಾವ ತಂತ್ರಗಳಿಂದ ಬಿಜೆಪಿಯನ್ನು ಕಟ್ಟಿಹಾಕಬಹುದು ಎಂದು ಅಗತ್ಯವಾಗಿ ಚರ್ಚಿಸಿದ್ದೇವೆ. ಆದರೆ ಯಾವುದೇ ರಾಜಕೀಯ ಪಕ್ಷಗಳ ಒಕ್ಕೂಟಗಳ ರಚನೆ ವಿಷಯ ಸದ್ಯಕ್ಕೆ ತಮ್ಮ ಮುಂದೆ ಇಲ್ಲ ಎಂದು ಕೂಡ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಹೇಳಿಕೆಗಳ ನಡುವೆಯೂ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ. ಕೇಂದ್ರದ ಮಾಜಿ ಸಚಿವ ಯಶವಂತ್‌ ಸಿನ್ಹಾ, ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ, ಶಿವಸೇನೆಯ ಸಂಜಯ್ ರಾವತ್, ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಓಮರ್ ಅಬ್ದುಲ್ಲಾ, ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಗುಪ್ತಾ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಈ ಸಭೆಯು ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆಯ ಒಂದು ಕಾರ್ಯಕ್ರಮವಾಗಿದೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ದೇಶದ ಆರ್ಥಿಕತೆ, ಕೊರೋನಾ ವಿರುದ್ಧದ ಹೋರಾಟದ ಕುರಿತು ಚರ್ಚೆ ನಡೆಸಲು ಸೇರಿದ್ದೇವೆ ಎಂದು ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿರುವ ಅನೇಕ ರಾಜಕೀಯರು ತಾವು ತಮ್ಮ ಪಕ್ಷದ ಪ್ರತಿನಿಧಿಗಳಾಗಿ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ಎಂದು ತಿಳಿಸಿದ್ದಾರೆ. ತಮ್ಮ ವಯಕ್ತಿಕ ಸ್ನೇಹದ ಕಾರಣಕ್ಕೆ ಸಮಾನ ಮನಸ್ಕ ವ್ಯಕ್ತಿಗಳು ಸೇರಿ ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆ ಆಯೋಜಿಸಿದ ವಿಚಾರ ವಿನಿಮಯದಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ಸಭೆಗೆ ಆಹ್ವಾನಿತರಾಗಿದ್ದ ಡಿಎಂಕೆಯ ನಾಯಕ ಎ ರಾಜಾ ಅವರು ಸಭೆಯ ಅಜೆಂಡಾ ಕುರಿತು ಸ್ಪಷ್ಟತೆಯಿಲ್ಲದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ.

ಇದನ್ನೂ ಓದಿ : ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ತೃತೀಯ ರಂಗದ ರಚನೆ ನಮ್ಮ ಮುಂದೆ ಇಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿರುವುದು ನಿಜವೇ ಆದರೆ ಇಂದು ವಿವಿಧ ಪಕ್ಷಗಳ ರಾಜಕೀಯ ನಾಯಕರು ಯಾವಕಾರಣಕ್ಕೆ ಸಭೆ ಸೇರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ತೃತೀಯ ರಂಗದ ರಚನೆಯ ಕುರಿತಾದ ಚರ್ಚೆ ನಡೆಯುತ್ತಿರುವುದು ನಿಜವಾದರೆ ದೇಶದ ಬಹು ಮುಖ್ಯ ವಿರೋಧ ಪಕ್ಷಗಳಾದ ಡಿಎಂಕೆ, ಸಮಾಜವಾದಿ ಪಾರ್ಟಿ, CPI, RJD, BSP, TRS  ಮುಂತಾದ ಪಕ್ಷಗಳ ನಾಯಕರು ಸಭೆಗೆ ಹಾಜರಿರಲಿಲ್ಲ. ಜೊತೆಗೆ ಪ್ರಶಾಂತ್ ಕಿಶೋರ್ ತೃತೀಯ ರಂಗದ ಬದಲಾಗಿ ಸಂಯಕ್ತ ವಿರೋಧ ಪಕ್ಷಗಳ ಒಕ್ಕೂಟ ರಚನೆಯ ಕುರಿತು ಒತ್ತು ನೀಡುತ್ತಿದ್ದಾರೆ. ಆದರೆ ದೇಶದ ದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಇತರ ವಿರೋಧ ಪಕ್ಷಗಳ ಜೊತೆಗಿನ ಮಾತುಕತೆಯ ಪ್ರಸ್ತಾಪಕ್ಕೆ ಇಂಗಿತವನ್ನು ಇದುವರೆಗೆ ವ್ಯಕ್ತಪಡಿಸಿಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳ ಪ್ರಬಲ ಶಕ್ತಿಯನ್ನು ಕಟ್ಟುವ ಶರದ್ ಪವಾರ್ ಅವರ ಪ್ರಯತ್ನಕ್ಕೆ ಹಿನ್ನಡೆಯಾಗುತ್ತಿದೆ ಎಂದು NCP ಯ ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಾಧ್ಯತೆಗಳೊಂದರ ಚರ್ಚೆಯನ್ನು ಹುಟ್ಟುಹಾಕಿವೆ. ಆದರೆ ಇದುವರೆಗೆ ಅನೇಕ ಸಾರಿ ದೇಶದಲ್ಲಿ ತೃತೀಯ ರಂಗದ ರಚನೆಯ ಚರ್ಚೆ ಅನೇಕಬಾರಿ ನಡೆದಿದೆ. 2019, 2014 ಹೀಗೆ ಹಿಂದಿನ ಲೋಕಸಭೆ ಚುನಾವಣೆಗಳ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೃತೀಯ ರಂಗದ ರಚನೆಯ ಪ್ರಯತ್ನವನ್ನು ನಡೆಸಿದ್ದಾರೆ. ಅದರೆ ತೃತೀಯ ರಂಗದ ರಾಷ್ಟ್ರವ್ಯಾಪಿ ರಾಜಕೀಯ ಸಂಘಟನೆ ಇದುವರೆಗೆ ಸಾಧ್ಯವಾಗಿಲ್ಲ.

ಇನ್ನೊಂದು ಕಡೆ 2019 ರ ಲೋಕಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್‌ ಪಕ್ಷದ ಅನೇಕ ನಾಯಕರುಗಳು ಕೂಡ ಸಂಯುಕ್ತ ವಿರೊಧ ಪಕ್ಷಗಳ ಒಕ್ಕೂಟದ ರಚನೆಯ ಅಗತ್ಯತೆ ಕುರಿತು ಮಾತನಾಡಿದ್ದರು. ಆದರೆ ಇದುವರೆಗೆ ಕಾಂಗ್ರೆಸ್‌ನ ಉನ್ನತ ನಾಯಕತ್ವ ಬಿಜೆಪಿ ವಿರುದ್ಧದ ವಿರೊಧ ಪಕ್ಷಗಳ ಪ್ರಬಲ ಸಂಘಟನೆಯ ಕಡೆ ಒಲವು ತೋರಿಲ್ಲ.

ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳ ನಡುವಿನ ಹೊಂದಾಣಿಕೆಯ ಕೊರತೆಗೆ ನಾಯಕತ್ವದ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ಒಂದು ವೇಳೆ ವಿರೋಧ ಪಕ್ಷಗಳ ಒಕ್ಕೂಟ ರಚನೆಯಾದರೆ ಅದು ಕಾಂಗ್ರೆಸ್‌ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಕಾಂಗ್ರೆಸ್‌ನ ಉನ್ನತ ನಾಯಕತ್ವ ಪಟ್ಟು ಹಿಡಿದಿರುವುದು ಕೂಡ ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಒಕ್ಕೂಟದ ರಚನೆಗೆ ಹಿನ್ನಡೆಯನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಲೇ ಕೆಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸೇತರ ತೃತಿಯ ರಂಗದ ರಚನೆಯ ಕಡೆಗೆ ಒಲವು ತೋರಿಸಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ UPA ಒಕ್ಕೂಟದ ಭಾಗವಾಗಿರುವ ಶರದ್ ಪವಾರ್ ಕಾಂಗ್ರೇಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಒಂದೇ ವೇದಿಕೆಗೆ ತರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ತೃತೀಯ ರಂಗವೋ, ವಿರೋಧಪಕ್ಷಗಳ ಒಕ್ಕೂಟವೋ ಅಥವಾ ಸಮಾನ ಮನಸ್ಕ ನಾಯಕರ ಸಂವಾದವೋ ಒಟ್ಟಿನಲ್ಲಿ ಶರದ್ ಪವಾರ್ ಮಾತ್ರ ರಾಷ್ಟ್ರ ರಾಜಕಾರಣದಲ್ಲಿ  ಒಂದಷ್ಟು ಬಿಸಿಬಿಸಿ ರಾಜಕೀಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದ್ದಾರೆ.

 -ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...