Homeಮುಖಪುಟಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

ಶರದ್ ಪವಾರ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರ ಸಭೆ: ಪವಾರ್-ಕಿಶೋರ್ ಸರಣಿ ಭೇಟಿಗೆ ಮಹತ್ವ..

- Advertisement -
- Advertisement -

ಇಂದು ಸಂಜೆ NCP ಯ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ತಮ್ಮ ನಿವಾಸದಲ್ಲಿ 15 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಇಂದು ಮಂಗಳವಾರ ನವದೆಹಲಿಯ ಪವಾರ್ ನಿವಾಸದಲ್ಲಿ ಆಮ್ ಆದ್ಮಿ, ಶಿವಸೇನೆ, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿ ಚರ್ಚೆ ನಡೆಸಿದ್ದಾರೆ.

ಈ ಸಭೆ ಶರದ್ ಪವಾರ್ ಮತ್ತು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್  ಭೇಟಿಯ ಬೆನ್ನಲ್ಲೇ ನಡೆದಿದೆ. ನಿನ್ನೆ ಪ್ರಶಾಂತ್ ಕಿಶೋರ್ ಎರಡನೇ ಬಾರಿಗೆ ಶರದ್ ಪವಾರ್ ಅವರನ್ನು ಭೇಟಿಯಾಗಿ ರಾಜಕೀಯ ಚರ್ಚೆಗಳನ್ನು ನಡೆಸಿದ್ದರು. ಆದರೆ ಶರದ್ ಪವಾರ್ ಮತ್ತು ತಮ್ಮ ನಡುವಿನ ಚರ್ಚೆಯ ವಿಷಯವನ್ನು ಕುರಿತು ಪ್ರಶಾಂತ್ ಕಿಶೋರ್ ಇದುವರೆಗೆ ಹೆಚ್ಚಿನ ಮಾಹಿತಿಯನ್ನು ಹೊರಗೆಡವುತ್ತಿಲ್ಲ. ಆದರೆ ಒಂದು ವಾರದ ಅಂತರದಲ್ಲಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು 2 ಸಾರಿ ಭೇಟಿಯಾಗಿದ್ದಾರೆ. ಇದರ ಹಿಂದೆ ತೃತೀಯ ರಂಗದ ಲೆಕ್ಕಾಚಾರಗಳಿವೆ ಎಂದು ಅನೇಕ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಆದರೆ ಪ್ರಶಾಂತ್ ಕಿಶೋರ್ ಮಾತ್ರ ಶರದ್ ಪವಾರ್ ಭೇಟಿಯ ಹಿಂದೆ ಯಾವುದೇ ರಾಜಕೀಯ ಲೆಕ್ಕಾಚಾರಗಳಿಲ್ಲ. ತೃತೀಯ ಚತುರ್ಥ ರಂಗಗಳ ರಚನೆಯ ಉದ್ಧೇಶವೂ ಇಲ್ಲ ಎಂದು ಹೆಳುತ್ತಲೆ ಬಂದಿದ್ದಾರೆ. ತೃತೀಯ, ಚತುರ್ಥ ರಂಗಗಳಿಂದ,  2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವುದು ಸಾಧ್ಯವಿಲ್ಲ. ಏನಿದ್ದರೂ ಬಿಜೆಪಿಗೆ ವಿರುದ್ಧವಾಗಿ ಎಲ್ಲಾ ಪಕ್ಷಗಳೂ ಒಗ್ಗೂಡಿ ಚುನಾವಣೆ ಎದುರಿಸಬೇಕು ಎಂದಿದ್ದಾರೆ.

ಶರದ್ ಪವಾರ್ ಅವರೊಂದಿಗಿನ ಭೇಟಿಯಲ್ಲಿ ತೃತೀಯ ರಂಗದ ಚರ್ಚೆಯಾಗಿಲ್ಲ. ಯಾವ ತಂತ್ರಗಳಿಂದ ಬಿಜೆಪಿಯನ್ನು ಕಟ್ಟಿಹಾಕಬಹುದು ಎಂದು ಅಗತ್ಯವಾಗಿ ಚರ್ಚಿಸಿದ್ದೇವೆ. ಆದರೆ ಯಾವುದೇ ರಾಜಕೀಯ ಪಕ್ಷಗಳ ಒಕ್ಕೂಟಗಳ ರಚನೆ ವಿಷಯ ಸದ್ಯಕ್ಕೆ ತಮ್ಮ ಮುಂದೆ ಇಲ್ಲ ಎಂದು ಕೂಡ ಪ್ರಶಾಂತ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಹೇಳಿಕೆಗಳ ನಡುವೆಯೂ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ. ಕೇಂದ್ರದ ಮಾಜಿ ಸಚಿವ ಯಶವಂತ್‌ ಸಿನ್ಹಾ, ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ, ಶಿವಸೇನೆಯ ಸಂಜಯ್ ರಾವತ್, ನ್ಯಾಷನಲ್ ಕಾನ್ಫರೆನ್ಸ್‌ ಅಧ್ಯಕ್ಷ ಓಮರ್ ಅಬ್ದುಲ್ಲಾ, ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಗುಪ್ತಾ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಈ ಸಭೆಯು ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆಯ ಒಂದು ಕಾರ್ಯಕ್ರಮವಾಗಿದೆ. ಇಲ್ಲಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ. ದೇಶದ ಆರ್ಥಿಕತೆ, ಕೊರೋನಾ ವಿರುದ್ಧದ ಹೋರಾಟದ ಕುರಿತು ಚರ್ಚೆ ನಡೆಸಲು ಸೇರಿದ್ದೇವೆ ಎಂದು ಜೆಡಿಯು ಮಾಜಿ ಉಪಾಧ್ಯಕ್ಷ ಪವನ್ ವರ್ಮಾ ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿರುವ ಅನೇಕ ರಾಜಕೀಯರು ತಾವು ತಮ್ಮ ಪಕ್ಷದ ಪ್ರತಿನಿಧಿಗಳಾಗಿ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ಎಂದು ತಿಳಿಸಿದ್ದಾರೆ. ತಮ್ಮ ವಯಕ್ತಿಕ ಸ್ನೇಹದ ಕಾರಣಕ್ಕೆ ಸಮಾನ ಮನಸ್ಕ ವ್ಯಕ್ತಿಗಳು ಸೇರಿ ಯಶವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಸಂಘಟನೆ ಆಯೋಜಿಸಿದ ವಿಚಾರ ವಿನಿಮಯದಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.

ಸಭೆಗೆ ಆಹ್ವಾನಿತರಾಗಿದ್ದ ಡಿಎಂಕೆಯ ನಾಯಕ ಎ ರಾಜಾ ಅವರು ಸಭೆಯ ಅಜೆಂಡಾ ಕುರಿತು ಸ್ಪಷ್ಟತೆಯಿಲ್ಲದ ಕಾರಣ ಸಭೆಯಲ್ಲಿ ಭಾಗವಹಿಸಿಲ್ಲ.

ಇದನ್ನೂ ಓದಿ : ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌

ತೃತೀಯ ರಂಗದ ರಚನೆ ನಮ್ಮ ಮುಂದೆ ಇಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿರುವುದು ನಿಜವೇ ಆದರೆ ಇಂದು ವಿವಿಧ ಪಕ್ಷಗಳ ರಾಜಕೀಯ ನಾಯಕರು ಯಾವಕಾರಣಕ್ಕೆ ಸಭೆ ಸೇರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಒಂದು ವೇಳೆ ತೃತೀಯ ರಂಗದ ರಚನೆಯ ಕುರಿತಾದ ಚರ್ಚೆ ನಡೆಯುತ್ತಿರುವುದು ನಿಜವಾದರೆ ದೇಶದ ಬಹು ಮುಖ್ಯ ವಿರೋಧ ಪಕ್ಷಗಳಾದ ಡಿಎಂಕೆ, ಸಮಾಜವಾದಿ ಪಾರ್ಟಿ, CPI, RJD, BSP, TRS  ಮುಂತಾದ ಪಕ್ಷಗಳ ನಾಯಕರು ಸಭೆಗೆ ಹಾಜರಿರಲಿಲ್ಲ. ಜೊತೆಗೆ ಪ್ರಶಾಂತ್ ಕಿಶೋರ್ ತೃತೀಯ ರಂಗದ ಬದಲಾಗಿ ಸಂಯಕ್ತ ವಿರೋಧ ಪಕ್ಷಗಳ ಒಕ್ಕೂಟ ರಚನೆಯ ಕುರಿತು ಒತ್ತು ನೀಡುತ್ತಿದ್ದಾರೆ. ಆದರೆ ದೇಶದ ದೊಡ್ಡ ವಿರೋಧ ಪಕ್ಷವಾದ ಕಾಂಗ್ರೆಸ್ ಇತರ ವಿರೋಧ ಪಕ್ಷಗಳ ಜೊತೆಗಿನ ಮಾತುಕತೆಯ ಪ್ರಸ್ತಾಪಕ್ಕೆ ಇಂಗಿತವನ್ನು ಇದುವರೆಗೆ ವ್ಯಕ್ತಪಡಿಸಿಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳ ಪ್ರಬಲ ಶಕ್ತಿಯನ್ನು ಕಟ್ಟುವ ಶರದ್ ಪವಾರ್ ಅವರ ಪ್ರಯತ್ನಕ್ಕೆ ಹಿನ್ನಡೆಯಾಗುತ್ತಿದೆ ಎಂದು NCP ಯ ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಾಧ್ಯತೆಗಳೊಂದರ ಚರ್ಚೆಯನ್ನು ಹುಟ್ಟುಹಾಕಿವೆ. ಆದರೆ ಇದುವರೆಗೆ ಅನೇಕ ಸಾರಿ ದೇಶದಲ್ಲಿ ತೃತೀಯ ರಂಗದ ರಚನೆಯ ಚರ್ಚೆ ಅನೇಕಬಾರಿ ನಡೆದಿದೆ. 2019, 2014 ಹೀಗೆ ಹಿಂದಿನ ಲೋಕಸಭೆ ಚುನಾವಣೆಗಳ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೃತೀಯ ರಂಗದ ರಚನೆಯ ಪ್ರಯತ್ನವನ್ನು ನಡೆಸಿದ್ದಾರೆ. ಅದರೆ ತೃತೀಯ ರಂಗದ ರಾಷ್ಟ್ರವ್ಯಾಪಿ ರಾಜಕೀಯ ಸಂಘಟನೆ ಇದುವರೆಗೆ ಸಾಧ್ಯವಾಗಿಲ್ಲ.

ಇನ್ನೊಂದು ಕಡೆ 2019 ರ ಲೋಕಸಭೆ ಚುನಾವಣೆ ಸೋಲಿನ ನಂತರ ಕಾಂಗ್ರೆಸ್‌ ಪಕ್ಷದ ಅನೇಕ ನಾಯಕರುಗಳು ಕೂಡ ಸಂಯುಕ್ತ ವಿರೊಧ ಪಕ್ಷಗಳ ಒಕ್ಕೂಟದ ರಚನೆಯ ಅಗತ್ಯತೆ ಕುರಿತು ಮಾತನಾಡಿದ್ದರು. ಆದರೆ ಇದುವರೆಗೆ ಕಾಂಗ್ರೆಸ್‌ನ ಉನ್ನತ ನಾಯಕತ್ವ ಬಿಜೆಪಿ ವಿರುದ್ಧದ ವಿರೊಧ ಪಕ್ಷಗಳ ಪ್ರಬಲ ಸಂಘಟನೆಯ ಕಡೆ ಒಲವು ತೋರಿಲ್ಲ.

ಕಾಂಗ್ರೆಸ್‌ ಮತ್ತು ಇತರ ವಿರೋಧ ಪಕ್ಷಗಳ ನಡುವಿನ ಹೊಂದಾಣಿಕೆಯ ಕೊರತೆಗೆ ನಾಯಕತ್ವದ ವಿಚಾರ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ಒಂದು ವೇಳೆ ವಿರೋಧ ಪಕ್ಷಗಳ ಒಕ್ಕೂಟ ರಚನೆಯಾದರೆ ಅದು ಕಾಂಗ್ರೆಸ್‌ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಕಾಂಗ್ರೆಸ್‌ನ ಉನ್ನತ ನಾಯಕತ್ವ ಪಟ್ಟು ಹಿಡಿದಿರುವುದು ಕೂಡ ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಒಕ್ಕೂಟದ ರಚನೆಗೆ ಹಿನ್ನಡೆಯನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಲೇ ಕೆಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸೇತರ ತೃತಿಯ ರಂಗದ ರಚನೆಯ ಕಡೆಗೆ ಒಲವು ತೋರಿಸಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ UPA ಒಕ್ಕೂಟದ ಭಾಗವಾಗಿರುವ ಶರದ್ ಪವಾರ್ ಕಾಂಗ್ರೇಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರನ್ನು ಒಂದೇ ವೇದಿಕೆಗೆ ತರಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ತೃತೀಯ ರಂಗವೋ, ವಿರೋಧಪಕ್ಷಗಳ ಒಕ್ಕೂಟವೋ ಅಥವಾ ಸಮಾನ ಮನಸ್ಕ ನಾಯಕರ ಸಂವಾದವೋ ಒಟ್ಟಿನಲ್ಲಿ ಶರದ್ ಪವಾರ್ ಮಾತ್ರ ರಾಷ್ಟ್ರ ರಾಜಕಾರಣದಲ್ಲಿ  ಒಂದಷ್ಟು ಬಿಸಿಬಿಸಿ ರಾಜಕೀಯ ಚರ್ಚೆಗಳಿಗೆ ಆಸ್ಪದ ಮಾಡಿಕೊಟ್ಟಿದ್ದಾರೆ.

 -ರಾಜೇಶ್ ಹೆಬ್ಬಾರ್


ಇದನ್ನೂ ಓದಿ : ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...