Homeಮುಖಪುಟಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

- Advertisement -
- Advertisement -

”ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಭಾರತದಲ್ಲಿ ಮಹಿಳೆಯರಿಗೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣ ಗೋಪಾಲ್ ಭಾನುವಾರ ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೃಷ್ಣ ಗೋಪಾಲ್, ”ಇಸ್ಲಾಮಿಕ್ ರಾಜರುಗಳ ಆಕ್ರಮಣಕ್ಕಿಂತ ಮೊದಲು, ‘ಸತಿ’ ಪದ್ಧತಿಯು ಅಸ್ತಿತ್ವದಲ್ಲಿರಲಿಲ್ಲ ಮತ್ತು ವಿಧವೆ ಪುನರ್ವಿವಾಹಗಳ ಮೇಲೆ ಯಾವುದೇ ನಿರ್ಬಂಧಗಳಿರಲಿಲ್ಲ” ಎಂದು ಅವರು ಪ್ರತಿಪಾದಿಸಿದರು.

”1829ರಲ್ಲಿ ಮಹಿಳೆಯರನ್ನು ತಮ್ಮ ಗಂಡನ ಅಂತ್ಯಕ್ರಿಯೆಯ ಚಿತಾಗಾರದಲ್ಲಿ ಜೀವಂತವಾಗಿ ಸುಡುವಂತಹ ಪದ್ದತಿ ಜಾರಿ ಬಂದಿದೆ. ನಾವು ಮಧ್ಯಯುಗಕ್ಕೆ ಬರೋಣ, ಇಡೀ ದೇಶವು ಅಧೀನತೆಯೊಂದಿಗೆ ಹೋರಾಡುತ್ತಿರುವ ಅತ್ಯಂತ ಕಷ್ಟಕರ ಸಮಯವಾಗಿತ್ತು. ದೇವಾಲಯಗಳನ್ನು ಒಡೆಯಲಾಯಿತು, ವಿಶ್ವವಿದ್ಯಾನಿಲಯಗಳನ್ನು ನಾಶಪಡಿಸಲಾಯಿತು ಮತ್ತು ಮಹಿಳೆಯರು ಅಪಾಯದಲ್ಲಿದ್ದರು. ಲಕ್ಷಗಟ್ಟಲೆ ಮಹಿಳೆಯರನ್ನು ಅಪಹರಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ” ಎಂದೂ ಹೇಳಿದರು.

”ಅಹ್ಮದ್ ಷಾ, ಮೊಹಮ್ಮದ್ ಘೌರಿ ಮತ್ತು ಮಹಮೂದ್ ಗಜ್ನಿ ಎಲ್ಲರೂ ಇಲ್ಲಿಂದ ಮಹಿಳೆಯರನ್ನು ಕರೆದೊಯ್ದು ಮಾರಾಟ ಮಾಡಿದ್ದಾರೆ. ಅದೊಂದು ಮಹಾ ಅವಮಾನದ ಯುಗ. ಆದ್ದರಿಂದ, ನಮ್ಮ ಮಹಿಳೆಯರನ್ನು ರಕ್ಷಿಸಲು, ನಮ್ಮದೇ ಸಮಾಜವು ಅವರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ” ಎಂದು ಸಮರ್ಥನೆ ಮಾಡಿಕೊಂಡರು.

”ತುರ್ತು ಪರಿಸ್ಥಿತಿ”ಯನ್ನು ಎದುರಿಸಲು ಈ ನಿರ್ಬಂಧಗಳು ಕ್ರಮಗಳಾಗಿವೆ ಎಂದು ಗೋಪಾಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದ ವಿರುದ್ಧ ಮಹಿಳೆಯರಿಗೆ ಎಚ್ಚರಿಕೆ ನೀಡಿದ ಗೋಪಾಲ್ ಅವರು, ”ತಮ್ಮ ಆಯ್ಕೆಯ ವೃತ್ತಿಯನ್ನು ಅನುಸರಿಸಬೇಕು, ಆದರೆ ಮಹಿಳೆಯಾಗಿ ತಮ್ಮ ಗುರುತನ್ನು ಕಳೆದುಕೊಳ್ಳಬಾರದು” ಎಂದು ಹೇಳಿದರು.

”ನೀವು ತಂತ್ರಜ್ಞಾನವನ್ನು ಬಳಸುತ್ತೀರಿ, ವಿಮಾನಗಳನ್ನು ಹಾರಿಸುತ್ತೀರಿ, ಹಡಗುಗಳನ್ನು ನಡೆಸುತ್ತೀರಿ, ಇಸ್ರೋಗೆ [ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ] ಹೋಗಿ, ವಿಜ್ಞಾನಿ, ವೈದ್ಯ ಅಥವಾ ಇಂಜಿನಿಯರ್ ಆಗಿ ನೀವು ಇಷ್ಟಪಡುವದನ್ನು ಮಾಡಿ ಆದರೆ ಮಹಿಳೆಯಾಗಿ ಉಳಿಯಿರಿ. ಹೆಣ್ಣು ಮನೆಯ ಮುಖ್ಯ ಕೇಂದ್ರ, ಅದನ್ನು ನೆನಪಿಡಿ. ಮಕ್ಕಳಿಗೆ ಮತ್ತು ಕುಟುಂಬಕ್ಕೆ ಮೌಲ್ಯಗಳನ್ನು ನೀಡುವವಳು ಮಹಿಳೆ” ಎಂದು ಗೋಪಾಲ್ ಹೇಳಿದರು.

”ಇಂದು ಮಹಿಳೆಯರು, ‘ಅಡುಗೆ ಮಾಡುವುದು ನಮ್ಮ ಕೆಲಸವೇ?’ ಎಂದು ಕೇಳುತ್ತಾರೆ. ಆದರೆ ಮಹಿಳೆಯರು ಅಡುಗೆ ಮಾಡುವುದರಿಂದ ಮಕ್ಕಳು ನಿಮ್ಮೊಂದಿಗೆ ಇರುತ್ತಾರೆ, ಅವರು ತಾಯಿಯ ಪ್ರೀತಿಯನ್ನು ಅನುಭವಿಸುತ್ತಾರೆ. ಇಂದಿರಾಜಿ [ಮಾಜಿ ಪ್ರಧಾನಿ ಇಂದಿರಾಗಾಂಧಿ] ತಮ್ಮ ಅಡುಗೆ ಮನೆಯನ್ನು ತಾವೇ ನಿರ್ವಹಿಸುತ್ತಿದ್ದರು ಎಂದು ನಿಮಗೆ ತಿಳಿದಿದೆಯೇ? [ಜವಾಹರಲಾಲ್] ನೆಹರೂಜಿ ಪ್ರಧಾನಿಯಾಗಿದ್ದಾಗ, ಇಂದಿರಾಜಿ ಅಡುಗೆಮನೆಯನ್ನು ನಿಯಂತ್ರಿಸುತ್ತಿದ್ದರು” ಎಂದು ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುವ ಮಾತುಗಳನ್ನು ಕೃಷ್ಣ ಗೋಪಾಲ್ ಆಡಿದ್ದಾರೆ.

ಇದನ್ನೂ ಓದಿ: ಆರ್‌ಎಸ್ಎಸ್ ಆಳ ಮತ್ತು ಅಗಲ: ಭಾರತೀಯ ಜಾತ್ಯತೀತ ಹೋರಾಟಕ್ಕೆ ಹೊಸ ದೇವನೂರ ಭಾಷೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...