Homeಮುಖಪುಟಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

- Advertisement -
- Advertisement -

”ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಭಾರತದಲ್ಲಿ ಮಹಿಳೆಯರಿಗೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣ ಗೋಪಾಲ್ ಭಾನುವಾರ ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೃಷ್ಣ ಗೋಪಾಲ್, ”ಇಸ್ಲಾಮಿಕ್ ರಾಜರುಗಳ ಆಕ್ರಮಣಕ್ಕಿಂತ ಮೊದಲು, ‘ಸತಿ’ ಪದ್ಧತಿಯು ಅಸ್ತಿತ್ವದಲ್ಲಿರಲಿಲ್ಲ ಮತ್ತು ವಿಧವೆ ಪುನರ್ವಿವಾಹಗಳ ಮೇಲೆ ಯಾವುದೇ ನಿರ್ಬಂಧಗಳಿರಲಿಲ್ಲ” ಎಂದು ಅವರು ಪ್ರತಿಪಾದಿಸಿದರು.

”1829ರಲ್ಲಿ ಮಹಿಳೆಯರನ್ನು ತಮ್ಮ ಗಂಡನ ಅಂತ್ಯಕ್ರಿಯೆಯ ಚಿತಾಗಾರದಲ್ಲಿ ಜೀವಂತವಾಗಿ ಸುಡುವಂತಹ ಪದ್ದತಿ ಜಾರಿ ಬಂದಿದೆ. ನಾವು ಮಧ್ಯಯುಗಕ್ಕೆ ಬರೋಣ, ಇಡೀ ದೇಶವು ಅಧೀನತೆಯೊಂದಿಗೆ ಹೋರಾಡುತ್ತಿರುವ ಅತ್ಯಂತ ಕಷ್ಟಕರ ಸಮಯವಾಗಿತ್ತು. ದೇವಾಲಯಗಳನ್ನು ಒಡೆಯಲಾಯಿತು, ವಿಶ್ವವಿದ್ಯಾನಿಲಯಗಳನ್ನು ನಾಶಪಡಿಸಲಾಯಿತು ಮತ್ತು ಮಹಿಳೆಯರು ಅಪಾಯದಲ್ಲಿದ್ದರು. ಲಕ್ಷಗಟ್ಟಲೆ ಮಹಿಳೆಯರನ್ನು ಅಪಹರಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ” ಎಂದೂ ಹೇಳಿದರು.

”ಅಹ್ಮದ್ ಷಾ, ಮೊಹಮ್ಮದ್ ಘೌರಿ ಮತ್ತು ಮಹಮೂದ್ ಗಜ್ನಿ ಎಲ್ಲರೂ ಇಲ್ಲಿಂದ ಮಹಿಳೆಯರನ್ನು ಕರೆದೊಯ್ದು ಮಾರಾಟ ಮಾಡಿದ್ದಾರೆ. ಅದೊಂದು ಮಹಾ ಅವಮಾನದ ಯುಗ. ಆದ್ದರಿಂದ, ನಮ್ಮ ಮಹಿಳೆಯರನ್ನು ರಕ್ಷಿಸಲು, ನಮ್ಮದೇ ಸಮಾಜವು ಅವರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ” ಎಂದು ಸಮರ್ಥನೆ ಮಾಡಿಕೊಂಡರು.

”ತುರ್ತು ಪರಿಸ್ಥಿತಿ”ಯನ್ನು ಎದುರಿಸಲು ಈ ನಿರ್ಬಂಧಗಳು ಕ್ರಮಗಳಾಗಿವೆ ಎಂದು ಗೋಪಾಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದ ವಿರುದ್ಧ ಮಹಿಳೆಯರಿಗೆ ಎಚ್ಚರಿಕೆ ನೀಡಿದ ಗೋಪಾಲ್ ಅವರು, ”ತಮ್ಮ ಆಯ್ಕೆಯ ವೃತ್ತಿಯನ್ನು ಅನುಸರಿಸಬೇಕು, ಆದರೆ ಮಹಿಳೆಯಾಗಿ ತಮ್ಮ ಗುರುತನ್ನು ಕಳೆದುಕೊಳ್ಳಬಾರದು” ಎಂದು ಹೇಳಿದರು.

”ನೀವು ತಂತ್ರಜ್ಞಾನವನ್ನು ಬಳಸುತ್ತೀರಿ, ವಿಮಾನಗಳನ್ನು ಹಾರಿಸುತ್ತೀರಿ, ಹಡಗುಗಳನ್ನು ನಡೆಸುತ್ತೀರಿ, ಇಸ್ರೋಗೆ [ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ] ಹೋಗಿ, ವಿಜ್ಞಾನಿ, ವೈದ್ಯ ಅಥವಾ ಇಂಜಿನಿಯರ್ ಆಗಿ ನೀವು ಇಷ್ಟಪಡುವದನ್ನು ಮಾಡಿ ಆದರೆ ಮಹಿಳೆಯಾಗಿ ಉಳಿಯಿರಿ. ಹೆಣ್ಣು ಮನೆಯ ಮುಖ್ಯ ಕೇಂದ್ರ, ಅದನ್ನು ನೆನಪಿಡಿ. ಮಕ್ಕಳಿಗೆ ಮತ್ತು ಕುಟುಂಬಕ್ಕೆ ಮೌಲ್ಯಗಳನ್ನು ನೀಡುವವಳು ಮಹಿಳೆ” ಎಂದು ಗೋಪಾಲ್ ಹೇಳಿದರು.

”ಇಂದು ಮಹಿಳೆಯರು, ‘ಅಡುಗೆ ಮಾಡುವುದು ನಮ್ಮ ಕೆಲಸವೇ?’ ಎಂದು ಕೇಳುತ್ತಾರೆ. ಆದರೆ ಮಹಿಳೆಯರು ಅಡುಗೆ ಮಾಡುವುದರಿಂದ ಮಕ್ಕಳು ನಿಮ್ಮೊಂದಿಗೆ ಇರುತ್ತಾರೆ, ಅವರು ತಾಯಿಯ ಪ್ರೀತಿಯನ್ನು ಅನುಭವಿಸುತ್ತಾರೆ. ಇಂದಿರಾಜಿ [ಮಾಜಿ ಪ್ರಧಾನಿ ಇಂದಿರಾಗಾಂಧಿ] ತಮ್ಮ ಅಡುಗೆ ಮನೆಯನ್ನು ತಾವೇ ನಿರ್ವಹಿಸುತ್ತಿದ್ದರು ಎಂದು ನಿಮಗೆ ತಿಳಿದಿದೆಯೇ? [ಜವಾಹರಲಾಲ್] ನೆಹರೂಜಿ ಪ್ರಧಾನಿಯಾಗಿದ್ದಾಗ, ಇಂದಿರಾಜಿ ಅಡುಗೆಮನೆಯನ್ನು ನಿಯಂತ್ರಿಸುತ್ತಿದ್ದರು” ಎಂದು ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುವ ಮಾತುಗಳನ್ನು ಕೃಷ್ಣ ಗೋಪಾಲ್ ಆಡಿದ್ದಾರೆ.

ಇದನ್ನೂ ಓದಿ: ಆರ್‌ಎಸ್ಎಸ್ ಆಳ ಮತ್ತು ಅಗಲ: ಭಾರತೀಯ ಜಾತ್ಯತೀತ ಹೋರಾಟಕ್ಕೆ ಹೊಸ ದೇವನೂರ ಭಾಷೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...