Homeಮುಖಪುಟಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

- Advertisement -
- Advertisement -

”ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಭಾರತದಲ್ಲಿ ಮಹಿಳೆಯರಿಗೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣ ಗೋಪಾಲ್ ಭಾನುವಾರ ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೃಷ್ಣ ಗೋಪಾಲ್, ”ಇಸ್ಲಾಮಿಕ್ ರಾಜರುಗಳ ಆಕ್ರಮಣಕ್ಕಿಂತ ಮೊದಲು, ‘ಸತಿ’ ಪದ್ಧತಿಯು ಅಸ್ತಿತ್ವದಲ್ಲಿರಲಿಲ್ಲ ಮತ್ತು ವಿಧವೆ ಪುನರ್ವಿವಾಹಗಳ ಮೇಲೆ ಯಾವುದೇ ನಿರ್ಬಂಧಗಳಿರಲಿಲ್ಲ” ಎಂದು ಅವರು ಪ್ರತಿಪಾದಿಸಿದರು.

”1829ರಲ್ಲಿ ಮಹಿಳೆಯರನ್ನು ತಮ್ಮ ಗಂಡನ ಅಂತ್ಯಕ್ರಿಯೆಯ ಚಿತಾಗಾರದಲ್ಲಿ ಜೀವಂತವಾಗಿ ಸುಡುವಂತಹ ಪದ್ದತಿ ಜಾರಿ ಬಂದಿದೆ. ನಾವು ಮಧ್ಯಯುಗಕ್ಕೆ ಬರೋಣ, ಇಡೀ ದೇಶವು ಅಧೀನತೆಯೊಂದಿಗೆ ಹೋರಾಡುತ್ತಿರುವ ಅತ್ಯಂತ ಕಷ್ಟಕರ ಸಮಯವಾಗಿತ್ತು. ದೇವಾಲಯಗಳನ್ನು ಒಡೆಯಲಾಯಿತು, ವಿಶ್ವವಿದ್ಯಾನಿಲಯಗಳನ್ನು ನಾಶಪಡಿಸಲಾಯಿತು ಮತ್ತು ಮಹಿಳೆಯರು ಅಪಾಯದಲ್ಲಿದ್ದರು. ಲಕ್ಷಗಟ್ಟಲೆ ಮಹಿಳೆಯರನ್ನು ಅಪಹರಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ” ಎಂದೂ ಹೇಳಿದರು.

”ಅಹ್ಮದ್ ಷಾ, ಮೊಹಮ್ಮದ್ ಘೌರಿ ಮತ್ತು ಮಹಮೂದ್ ಗಜ್ನಿ ಎಲ್ಲರೂ ಇಲ್ಲಿಂದ ಮಹಿಳೆಯರನ್ನು ಕರೆದೊಯ್ದು ಮಾರಾಟ ಮಾಡಿದ್ದಾರೆ. ಅದೊಂದು ಮಹಾ ಅವಮಾನದ ಯುಗ. ಆದ್ದರಿಂದ, ನಮ್ಮ ಮಹಿಳೆಯರನ್ನು ರಕ್ಷಿಸಲು, ನಮ್ಮದೇ ಸಮಾಜವು ಅವರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ” ಎಂದು ಸಮರ್ಥನೆ ಮಾಡಿಕೊಂಡರು.

”ತುರ್ತು ಪರಿಸ್ಥಿತಿ”ಯನ್ನು ಎದುರಿಸಲು ಈ ನಿರ್ಬಂಧಗಳು ಕ್ರಮಗಳಾಗಿವೆ ಎಂದು ಗೋಪಾಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದ ವಿರುದ್ಧ ಮಹಿಳೆಯರಿಗೆ ಎಚ್ಚರಿಕೆ ನೀಡಿದ ಗೋಪಾಲ್ ಅವರು, ”ತಮ್ಮ ಆಯ್ಕೆಯ ವೃತ್ತಿಯನ್ನು ಅನುಸರಿಸಬೇಕು, ಆದರೆ ಮಹಿಳೆಯಾಗಿ ತಮ್ಮ ಗುರುತನ್ನು ಕಳೆದುಕೊಳ್ಳಬಾರದು” ಎಂದು ಹೇಳಿದರು.

”ನೀವು ತಂತ್ರಜ್ಞಾನವನ್ನು ಬಳಸುತ್ತೀರಿ, ವಿಮಾನಗಳನ್ನು ಹಾರಿಸುತ್ತೀರಿ, ಹಡಗುಗಳನ್ನು ನಡೆಸುತ್ತೀರಿ, ಇಸ್ರೋಗೆ [ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ] ಹೋಗಿ, ವಿಜ್ಞಾನಿ, ವೈದ್ಯ ಅಥವಾ ಇಂಜಿನಿಯರ್ ಆಗಿ ನೀವು ಇಷ್ಟಪಡುವದನ್ನು ಮಾಡಿ ಆದರೆ ಮಹಿಳೆಯಾಗಿ ಉಳಿಯಿರಿ. ಹೆಣ್ಣು ಮನೆಯ ಮುಖ್ಯ ಕೇಂದ್ರ, ಅದನ್ನು ನೆನಪಿಡಿ. ಮಕ್ಕಳಿಗೆ ಮತ್ತು ಕುಟುಂಬಕ್ಕೆ ಮೌಲ್ಯಗಳನ್ನು ನೀಡುವವಳು ಮಹಿಳೆ” ಎಂದು ಗೋಪಾಲ್ ಹೇಳಿದರು.

”ಇಂದು ಮಹಿಳೆಯರು, ‘ಅಡುಗೆ ಮಾಡುವುದು ನಮ್ಮ ಕೆಲಸವೇ?’ ಎಂದು ಕೇಳುತ್ತಾರೆ. ಆದರೆ ಮಹಿಳೆಯರು ಅಡುಗೆ ಮಾಡುವುದರಿಂದ ಮಕ್ಕಳು ನಿಮ್ಮೊಂದಿಗೆ ಇರುತ್ತಾರೆ, ಅವರು ತಾಯಿಯ ಪ್ರೀತಿಯನ್ನು ಅನುಭವಿಸುತ್ತಾರೆ. ಇಂದಿರಾಜಿ [ಮಾಜಿ ಪ್ರಧಾನಿ ಇಂದಿರಾಗಾಂಧಿ] ತಮ್ಮ ಅಡುಗೆ ಮನೆಯನ್ನು ತಾವೇ ನಿರ್ವಹಿಸುತ್ತಿದ್ದರು ಎಂದು ನಿಮಗೆ ತಿಳಿದಿದೆಯೇ? [ಜವಾಹರಲಾಲ್] ನೆಹರೂಜಿ ಪ್ರಧಾನಿಯಾಗಿದ್ದಾಗ, ಇಂದಿರಾಜಿ ಅಡುಗೆಮನೆಯನ್ನು ನಿಯಂತ್ರಿಸುತ್ತಿದ್ದರು” ಎಂದು ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುವ ಮಾತುಗಳನ್ನು ಕೃಷ್ಣ ಗೋಪಾಲ್ ಆಡಿದ್ದಾರೆ.

ಇದನ್ನೂ ಓದಿ: ಆರ್‌ಎಸ್ಎಸ್ ಆಳ ಮತ್ತು ಅಗಲ: ಭಾರತೀಯ ಜಾತ್ಯತೀತ ಹೋರಾಟಕ್ಕೆ ಹೊಸ ದೇವನೂರ ಭಾಷೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...