Homeಮುಖಪುಟಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

- Advertisement -
- Advertisement -

”ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಭಾರತದಲ್ಲಿ ಮಹಿಳೆಯರಿಗೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣ ಗೋಪಾಲ್ ಭಾನುವಾರ ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೃಷ್ಣ ಗೋಪಾಲ್, ”ಇಸ್ಲಾಮಿಕ್ ರಾಜರುಗಳ ಆಕ್ರಮಣಕ್ಕಿಂತ ಮೊದಲು, ‘ಸತಿ’ ಪದ್ಧತಿಯು ಅಸ್ತಿತ್ವದಲ್ಲಿರಲಿಲ್ಲ ಮತ್ತು ವಿಧವೆ ಪುನರ್ವಿವಾಹಗಳ ಮೇಲೆ ಯಾವುದೇ ನಿರ್ಬಂಧಗಳಿರಲಿಲ್ಲ” ಎಂದು ಅವರು ಪ್ರತಿಪಾದಿಸಿದರು.

”1829ರಲ್ಲಿ ಮಹಿಳೆಯರನ್ನು ತಮ್ಮ ಗಂಡನ ಅಂತ್ಯಕ್ರಿಯೆಯ ಚಿತಾಗಾರದಲ್ಲಿ ಜೀವಂತವಾಗಿ ಸುಡುವಂತಹ ಪದ್ದತಿ ಜಾರಿ ಬಂದಿದೆ. ನಾವು ಮಧ್ಯಯುಗಕ್ಕೆ ಬರೋಣ, ಇಡೀ ದೇಶವು ಅಧೀನತೆಯೊಂದಿಗೆ ಹೋರಾಡುತ್ತಿರುವ ಅತ್ಯಂತ ಕಷ್ಟಕರ ಸಮಯವಾಗಿತ್ತು. ದೇವಾಲಯಗಳನ್ನು ಒಡೆಯಲಾಯಿತು, ವಿಶ್ವವಿದ್ಯಾನಿಲಯಗಳನ್ನು ನಾಶಪಡಿಸಲಾಯಿತು ಮತ್ತು ಮಹಿಳೆಯರು ಅಪಾಯದಲ್ಲಿದ್ದರು. ಲಕ್ಷಗಟ್ಟಲೆ ಮಹಿಳೆಯರನ್ನು ಅಪಹರಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ” ಎಂದೂ ಹೇಳಿದರು.

”ಅಹ್ಮದ್ ಷಾ, ಮೊಹಮ್ಮದ್ ಘೌರಿ ಮತ್ತು ಮಹಮೂದ್ ಗಜ್ನಿ ಎಲ್ಲರೂ ಇಲ್ಲಿಂದ ಮಹಿಳೆಯರನ್ನು ಕರೆದೊಯ್ದು ಮಾರಾಟ ಮಾಡಿದ್ದಾರೆ. ಅದೊಂದು ಮಹಾ ಅವಮಾನದ ಯುಗ. ಆದ್ದರಿಂದ, ನಮ್ಮ ಮಹಿಳೆಯರನ್ನು ರಕ್ಷಿಸಲು, ನಮ್ಮದೇ ಸಮಾಜವು ಅವರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ” ಎಂದು ಸಮರ್ಥನೆ ಮಾಡಿಕೊಂಡರು.

”ತುರ್ತು ಪರಿಸ್ಥಿತಿ”ಯನ್ನು ಎದುರಿಸಲು ಈ ನಿರ್ಬಂಧಗಳು ಕ್ರಮಗಳಾಗಿವೆ ಎಂದು ಗೋಪಾಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದ ವಿರುದ್ಧ ಮಹಿಳೆಯರಿಗೆ ಎಚ್ಚರಿಕೆ ನೀಡಿದ ಗೋಪಾಲ್ ಅವರು, ”ತಮ್ಮ ಆಯ್ಕೆಯ ವೃತ್ತಿಯನ್ನು ಅನುಸರಿಸಬೇಕು, ಆದರೆ ಮಹಿಳೆಯಾಗಿ ತಮ್ಮ ಗುರುತನ್ನು ಕಳೆದುಕೊಳ್ಳಬಾರದು” ಎಂದು ಹೇಳಿದರು.

”ನೀವು ತಂತ್ರಜ್ಞಾನವನ್ನು ಬಳಸುತ್ತೀರಿ, ವಿಮಾನಗಳನ್ನು ಹಾರಿಸುತ್ತೀರಿ, ಹಡಗುಗಳನ್ನು ನಡೆಸುತ್ತೀರಿ, ಇಸ್ರೋಗೆ [ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ] ಹೋಗಿ, ವಿಜ್ಞಾನಿ, ವೈದ್ಯ ಅಥವಾ ಇಂಜಿನಿಯರ್ ಆಗಿ ನೀವು ಇಷ್ಟಪಡುವದನ್ನು ಮಾಡಿ ಆದರೆ ಮಹಿಳೆಯಾಗಿ ಉಳಿಯಿರಿ. ಹೆಣ್ಣು ಮನೆಯ ಮುಖ್ಯ ಕೇಂದ್ರ, ಅದನ್ನು ನೆನಪಿಡಿ. ಮಕ್ಕಳಿಗೆ ಮತ್ತು ಕುಟುಂಬಕ್ಕೆ ಮೌಲ್ಯಗಳನ್ನು ನೀಡುವವಳು ಮಹಿಳೆ” ಎಂದು ಗೋಪಾಲ್ ಹೇಳಿದರು.

”ಇಂದು ಮಹಿಳೆಯರು, ‘ಅಡುಗೆ ಮಾಡುವುದು ನಮ್ಮ ಕೆಲಸವೇ?’ ಎಂದು ಕೇಳುತ್ತಾರೆ. ಆದರೆ ಮಹಿಳೆಯರು ಅಡುಗೆ ಮಾಡುವುದರಿಂದ ಮಕ್ಕಳು ನಿಮ್ಮೊಂದಿಗೆ ಇರುತ್ತಾರೆ, ಅವರು ತಾಯಿಯ ಪ್ರೀತಿಯನ್ನು ಅನುಭವಿಸುತ್ತಾರೆ. ಇಂದಿರಾಜಿ [ಮಾಜಿ ಪ್ರಧಾನಿ ಇಂದಿರಾಗಾಂಧಿ] ತಮ್ಮ ಅಡುಗೆ ಮನೆಯನ್ನು ತಾವೇ ನಿರ್ವಹಿಸುತ್ತಿದ್ದರು ಎಂದು ನಿಮಗೆ ತಿಳಿದಿದೆಯೇ? [ಜವಾಹರಲಾಲ್] ನೆಹರೂಜಿ ಪ್ರಧಾನಿಯಾಗಿದ್ದಾಗ, ಇಂದಿರಾಜಿ ಅಡುಗೆಮನೆಯನ್ನು ನಿಯಂತ್ರಿಸುತ್ತಿದ್ದರು” ಎಂದು ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುವ ಮಾತುಗಳನ್ನು ಕೃಷ್ಣ ಗೋಪಾಲ್ ಆಡಿದ್ದಾರೆ.

ಇದನ್ನೂ ಓದಿ: ಆರ್‌ಎಸ್ಎಸ್ ಆಳ ಮತ್ತು ಅಗಲ: ಭಾರತೀಯ ಜಾತ್ಯತೀತ ಹೋರಾಟಕ್ಕೆ ಹೊಸ ದೇವನೂರ ಭಾಷೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...