Homeಮುಖಪುಟಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

- Advertisement -
- Advertisement -

”ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಭಾರತದಲ್ಲಿ ಮಹಿಳೆಯರಿಗೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣ ಗೋಪಾಲ್ ಭಾನುವಾರ ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೃಷ್ಣ ಗೋಪಾಲ್, ”ಇಸ್ಲಾಮಿಕ್ ರಾಜರುಗಳ ಆಕ್ರಮಣಕ್ಕಿಂತ ಮೊದಲು, ‘ಸತಿ’ ಪದ್ಧತಿಯು ಅಸ್ತಿತ್ವದಲ್ಲಿರಲಿಲ್ಲ ಮತ್ತು ವಿಧವೆ ಪುನರ್ವಿವಾಹಗಳ ಮೇಲೆ ಯಾವುದೇ ನಿರ್ಬಂಧಗಳಿರಲಿಲ್ಲ” ಎಂದು ಅವರು ಪ್ರತಿಪಾದಿಸಿದರು.

”1829ರಲ್ಲಿ ಮಹಿಳೆಯರನ್ನು ತಮ್ಮ ಗಂಡನ ಅಂತ್ಯಕ್ರಿಯೆಯ ಚಿತಾಗಾರದಲ್ಲಿ ಜೀವಂತವಾಗಿ ಸುಡುವಂತಹ ಪದ್ದತಿ ಜಾರಿ ಬಂದಿದೆ. ನಾವು ಮಧ್ಯಯುಗಕ್ಕೆ ಬರೋಣ, ಇಡೀ ದೇಶವು ಅಧೀನತೆಯೊಂದಿಗೆ ಹೋರಾಡುತ್ತಿರುವ ಅತ್ಯಂತ ಕಷ್ಟಕರ ಸಮಯವಾಗಿತ್ತು. ದೇವಾಲಯಗಳನ್ನು ಒಡೆಯಲಾಯಿತು, ವಿಶ್ವವಿದ್ಯಾನಿಲಯಗಳನ್ನು ನಾಶಪಡಿಸಲಾಯಿತು ಮತ್ತು ಮಹಿಳೆಯರು ಅಪಾಯದಲ್ಲಿದ್ದರು. ಲಕ್ಷಗಟ್ಟಲೆ ಮಹಿಳೆಯರನ್ನು ಅಪಹರಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ” ಎಂದೂ ಹೇಳಿದರು.

”ಅಹ್ಮದ್ ಷಾ, ಮೊಹಮ್ಮದ್ ಘೌರಿ ಮತ್ತು ಮಹಮೂದ್ ಗಜ್ನಿ ಎಲ್ಲರೂ ಇಲ್ಲಿಂದ ಮಹಿಳೆಯರನ್ನು ಕರೆದೊಯ್ದು ಮಾರಾಟ ಮಾಡಿದ್ದಾರೆ. ಅದೊಂದು ಮಹಾ ಅವಮಾನದ ಯುಗ. ಆದ್ದರಿಂದ, ನಮ್ಮ ಮಹಿಳೆಯರನ್ನು ರಕ್ಷಿಸಲು, ನಮ್ಮದೇ ಸಮಾಜವು ಅವರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ” ಎಂದು ಸಮರ್ಥನೆ ಮಾಡಿಕೊಂಡರು.

”ತುರ್ತು ಪರಿಸ್ಥಿತಿ”ಯನ್ನು ಎದುರಿಸಲು ಈ ನಿರ್ಬಂಧಗಳು ಕ್ರಮಗಳಾಗಿವೆ ಎಂದು ಗೋಪಾಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದ ವಿರುದ್ಧ ಮಹಿಳೆಯರಿಗೆ ಎಚ್ಚರಿಕೆ ನೀಡಿದ ಗೋಪಾಲ್ ಅವರು, ”ತಮ್ಮ ಆಯ್ಕೆಯ ವೃತ್ತಿಯನ್ನು ಅನುಸರಿಸಬೇಕು, ಆದರೆ ಮಹಿಳೆಯಾಗಿ ತಮ್ಮ ಗುರುತನ್ನು ಕಳೆದುಕೊಳ್ಳಬಾರದು” ಎಂದು ಹೇಳಿದರು.

”ನೀವು ತಂತ್ರಜ್ಞಾನವನ್ನು ಬಳಸುತ್ತೀರಿ, ವಿಮಾನಗಳನ್ನು ಹಾರಿಸುತ್ತೀರಿ, ಹಡಗುಗಳನ್ನು ನಡೆಸುತ್ತೀರಿ, ಇಸ್ರೋಗೆ [ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ] ಹೋಗಿ, ವಿಜ್ಞಾನಿ, ವೈದ್ಯ ಅಥವಾ ಇಂಜಿನಿಯರ್ ಆಗಿ ನೀವು ಇಷ್ಟಪಡುವದನ್ನು ಮಾಡಿ ಆದರೆ ಮಹಿಳೆಯಾಗಿ ಉಳಿಯಿರಿ. ಹೆಣ್ಣು ಮನೆಯ ಮುಖ್ಯ ಕೇಂದ್ರ, ಅದನ್ನು ನೆನಪಿಡಿ. ಮಕ್ಕಳಿಗೆ ಮತ್ತು ಕುಟುಂಬಕ್ಕೆ ಮೌಲ್ಯಗಳನ್ನು ನೀಡುವವಳು ಮಹಿಳೆ” ಎಂದು ಗೋಪಾಲ್ ಹೇಳಿದರು.

”ಇಂದು ಮಹಿಳೆಯರು, ‘ಅಡುಗೆ ಮಾಡುವುದು ನಮ್ಮ ಕೆಲಸವೇ?’ ಎಂದು ಕೇಳುತ್ತಾರೆ. ಆದರೆ ಮಹಿಳೆಯರು ಅಡುಗೆ ಮಾಡುವುದರಿಂದ ಮಕ್ಕಳು ನಿಮ್ಮೊಂದಿಗೆ ಇರುತ್ತಾರೆ, ಅವರು ತಾಯಿಯ ಪ್ರೀತಿಯನ್ನು ಅನುಭವಿಸುತ್ತಾರೆ. ಇಂದಿರಾಜಿ [ಮಾಜಿ ಪ್ರಧಾನಿ ಇಂದಿರಾಗಾಂಧಿ] ತಮ್ಮ ಅಡುಗೆ ಮನೆಯನ್ನು ತಾವೇ ನಿರ್ವಹಿಸುತ್ತಿದ್ದರು ಎಂದು ನಿಮಗೆ ತಿಳಿದಿದೆಯೇ? [ಜವಾಹರಲಾಲ್] ನೆಹರೂಜಿ ಪ್ರಧಾನಿಯಾಗಿದ್ದಾಗ, ಇಂದಿರಾಜಿ ಅಡುಗೆಮನೆಯನ್ನು ನಿಯಂತ್ರಿಸುತ್ತಿದ್ದರು” ಎಂದು ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುವ ಮಾತುಗಳನ್ನು ಕೃಷ್ಣ ಗೋಪಾಲ್ ಆಡಿದ್ದಾರೆ.

ಇದನ್ನೂ ಓದಿ: ಆರ್‌ಎಸ್ಎಸ್ ಆಳ ಮತ್ತು ಅಗಲ: ಭಾರತೀಯ ಜಾತ್ಯತೀತ ಹೋರಾಟಕ್ಕೆ ಹೊಸ ದೇವನೂರ ಭಾಷೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...