Homeಮುಖಪುಟಹಸಿವನ್ನು 'ಯುದ್ಧ ಅಸ್ತ್ರ'ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ 'ನರಕಸದೃಶ'

ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

- Advertisement -
- Advertisement -

ಇಸ್ರೇಲ್‌ ಸರ್ಕಾರವು  ಗಾಝಾ ಪಟ್ಟಿಯಲ್ಲಿ ನಾಗರಿಕರನ್ನು ಹಸಿವಿನಿಂದ ಸಾಯುವಂತೆ ಪ್ರೇರೇಪಿಸುತ್ತಿದ್ದು, ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ. ಇಸ್ರೇಲ್‌ ಪಡೆಗಳು ಗಾಝಾದ ಜನರಿಗೆ ಉದ್ದೇಶಪೂರ್ವಕವಾಗಿ ನೀರು, ಆಹಾರ ಮತ್ತು ಇಂಧನದ ವಿತರಣೆಯ ಮೇಲೆ ನಿರ್ಬಂಧ ವಿಧಿಸುತ್ತಿದೆ, ಮಾನವೀಯ ಸಹಾಯಕ್ಕೆ ಅಡ್ಡಿಪಡಿಸುತ್ತಿದೆ. ಕೃಷಿ ಪ್ರದೇಶಗಳನ್ನು ನೆಲಸಮ ಮಾಡುತ್ತಿದೆ, ನೀರಿನ ಮೂಲಗಳನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರ ಉಳಿವಿಗೆ ಅನಿವಾರ್ಯವಾದ ಎಲ್ಲಾ ವಸ್ತುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಉದ್ದೇಶಪೂರ್ವಕವಾಗಿರುವ ಈ ಕೃತ್ಯವು ಯುದ್ಧ ಅಪರಾಧವಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಅಡ್ಡಿ ಹಿನ್ನೆಲೆ ಆಹಾರಗಳ ‘ಗಂಭೀರ ಕೊರತೆಯಿದ್ದರೂ’ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಗೆ ಆಹಾರವನ್ನು ತಲುಪಿಸಲು ಸಾಧ್ಯವಾಗಲಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಉತ್ತರ ಗಾಝಾಕ್ಕೆ ಆಹಾರ ನೆರವು ತಲುಪಿದಾಗ ಜನ ಸಂದಣಿ ಕೂಡಿತ್ತು. ಈ ಆಹಾರಕ್ಕಾಗಿ ನಡೆದ ನೂಕಾಟ-ತಳ್ಳಾಟದಲ್ಲಿ ಇಬ್ಬರು ಉಸಿರುಗಟ್ಟಿ ಸಾಯುವುದನ್ನು ನಾನು ನೋಡಿದೆ ಎಂದು ಪರಿಹಾರ ಸಾಮಾಗ್ರಿಯನ್ನು ರಾವನಿಸುತ್ತಿದ್ದ ಕಾರ್ಯಕರ್ತೆಯೋರ್ವರು ಹೇಳಿದ್ದಾರೆ.

ಅಕ್ಟೋಬರ್ 7, 2023ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಇಸ್ರೇಲ್‌ ಅಧಿಕಾರಿಗಳು ಗಾಝಾದಲ್ಲಿ ಆಹಾರ, ನೀರು ಮತ್ತು ಇಂಧನವನ್ನು ತಡೆದಿದ್ದಾರೆ. ಯುಎನ್‌ನ ಮಾನವೀಯ ವ್ಯವಹಾರಗಳ ಸೆಕ್ರೆಟರಿ ಜನರಲ್ ಮಾರ್ಟಿನ್ ಗ್ರಿಫಿತ್ಸ್, ಪ್ಯಾಲೇಸ್ತೀನ್‌ಗೆ ನೆರವನ್ನು ನಿಲ್ಲಿಸಿರುವುದನ್ನು ಗಾಝಾ ಪಟ್ಟಿಯಲ್ಲಿರುವ ಸಹಾಯ ವ್ಯವಸ್ಥೆಯ ಪತನಕ್ಕೆ ಕಾರಣವಾಗುತ್ತದೆ. ಪಾಶ್ಚಿಮಾತ್ಯ ದೇಶಗಳು ಘೋಷಿಸಿರುವ ನೆರವನ್ನು  ಯುಎನ್‌ಆರ್‌ಡಬ್ಲ್ಯೂಎಯಿಂದ ಹಿಂತೆಗೆದುಕೊಳ್ಳವ ನಿರ್ಧಾರವು ಅಪಾಯಕಾರಿ ಮತ್ತು ಇದು ದೂರಗಾಮಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಜಗತ್ತು ಗಾಝಾದ ಜನರನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ಗ್ರಿಫಿತ್ಸ್ ಮಂಗಳವಾರ ಇತರ ಮಾನವೀಯ ಸಂಘಟನೆಯ ನಾಯಕರೊಂದಿಗೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಆಕ್ರಮಿತ ವೆಸ್ಟ್‌ ಬ್ಯಾಂಕ್‌ನಲ್ಲಿ ಪ್ಯಾಲೆಸ್ತೀನಿಯನ್ನರ ಕಾನೂನುಬಾಹಿರ ಹತ್ಯೆಯನ್ನು ತಕ್ಷಣವೇ ಕೊನೆಗೊಳಿಸಬೇಕು ಎಂದು UN ಮಾನವ ಹಕ್ಕುಗಳ ಕಚೇರಿ ಹೇಳಿದೆ.

UNRWAಗಾಗಿ ನೆರವಿನ ನಿಧಿಯನ್ನು ನಿಲ್ಲಿಸುವ ವಿವಿಧ ಸದಸ್ಯ ರಾಷ್ಟ್ರಗಳ ನಿರ್ಧಾರಗಳು ಗಾಝಾದ 2.2 ಮಿಲಿಯನ್ ಜನರಿಗೆ ದುರಂತ ಪರಿಣಾಮಗಳನ್ನು ಉಂಟುಮಾಡುತ್ತವೆ. ಈ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನಾವು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಸುಮಾರು ಹನ್ನೆರಡು ಪಾಶ್ಚಿಮಾತ್ಯ ದೇಶಗಳು UNRWAಗೆ ಧನಸಹಾಯವನ್ನು ಸ್ಥಗಿತಗೊಳಿಸಿವೆ. 12 ಮಾಜಿ ಸಿಬ್ಬಂದಿಗಳು ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿತ್ತು. ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿತ್ತು.ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ. ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ್ದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದರು.

ರಾಫಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ;  ದಕ್ಷಿಣ ಗಾಝಾದ ರಾಫಾದಲ್ಲಿ ಇಸ್ರೇಲ್‌ ಮಿಲಿಟರಿಯಿಂದ ಹತ್ಯೆಗೀಡಾದ ಪ್ಯಾಲೆಸ್ತೀನ್‌ ನಾಗರಿಕರ ಮೃತದೇಹವನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಗಿದೆ. ನಾಪತ್ತೆಯಾದವರ ಸಂಬಂಧಿಕರು ಸಮಾಧಿ ಸ್ಥಳಕ್ಕೆ ಆಗಮಿಸಿದ್ದರೂ, ಮೃತರ ದೇಹಗಳನ್ನು ಗುರುತಿಸಲು ಸಾಧ್ಯವಾಗದೆ ಹಿಂತಿರುಗಿದ್ದಾರೆ.

ಅಕ್ಟೋಬರ್ 7ರಿಂದ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯ ಬಳಿಕ ಗಾಝಾದಲ್ಲಿ ಕನಿಷ್ಠ 26,751 ಜನರು ಸಾವನ್ನಪ್ಪಿದ್ದಾರೆ ಮತ್ತು 65,636 ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಮನೆಗಳು ನೆಲಸಮಗೊಳಿಸಲಾಗಿದೆ.

ಇದನ್ನು ಓದಿ: ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...