Homeಮುಖಪುಟಹಸಿವನ್ನು 'ಯುದ್ಧ ಅಸ್ತ್ರ'ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ 'ನರಕಸದೃಶ'

ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

- Advertisement -
- Advertisement -

ಇಸ್ರೇಲ್‌ ಸರ್ಕಾರವು  ಗಾಝಾ ಪಟ್ಟಿಯಲ್ಲಿ ನಾಗರಿಕರನ್ನು ಹಸಿವಿನಿಂದ ಸಾಯುವಂತೆ ಪ್ರೇರೇಪಿಸುತ್ತಿದ್ದು, ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ. ಇಸ್ರೇಲ್‌ ಪಡೆಗಳು ಗಾಝಾದ ಜನರಿಗೆ ಉದ್ದೇಶಪೂರ್ವಕವಾಗಿ ನೀರು, ಆಹಾರ ಮತ್ತು ಇಂಧನದ ವಿತರಣೆಯ ಮೇಲೆ ನಿರ್ಬಂಧ ವಿಧಿಸುತ್ತಿದೆ, ಮಾನವೀಯ ಸಹಾಯಕ್ಕೆ ಅಡ್ಡಿಪಡಿಸುತ್ತಿದೆ. ಕೃಷಿ ಪ್ರದೇಶಗಳನ್ನು ನೆಲಸಮ ಮಾಡುತ್ತಿದೆ, ನೀರಿನ ಮೂಲಗಳನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರ ಉಳಿವಿಗೆ ಅನಿವಾರ್ಯವಾದ ಎಲ್ಲಾ ವಸ್ತುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಉದ್ದೇಶಪೂರ್ವಕವಾಗಿರುವ ಈ ಕೃತ್ಯವು ಯುದ್ಧ ಅಪರಾಧವಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಅಡ್ಡಿ ಹಿನ್ನೆಲೆ ಆಹಾರಗಳ ‘ಗಂಭೀರ ಕೊರತೆಯಿದ್ದರೂ’ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಗೆ ಆಹಾರವನ್ನು ತಲುಪಿಸಲು ಸಾಧ್ಯವಾಗಲಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಉತ್ತರ ಗಾಝಾಕ್ಕೆ ಆಹಾರ ನೆರವು ತಲುಪಿದಾಗ ಜನ ಸಂದಣಿ ಕೂಡಿತ್ತು. ಈ ಆಹಾರಕ್ಕಾಗಿ ನಡೆದ ನೂಕಾಟ-ತಳ್ಳಾಟದಲ್ಲಿ ಇಬ್ಬರು ಉಸಿರುಗಟ್ಟಿ ಸಾಯುವುದನ್ನು ನಾನು ನೋಡಿದೆ ಎಂದು ಪರಿಹಾರ ಸಾಮಾಗ್ರಿಯನ್ನು ರಾವನಿಸುತ್ತಿದ್ದ ಕಾರ್ಯಕರ್ತೆಯೋರ್ವರು ಹೇಳಿದ್ದಾರೆ.

ಅಕ್ಟೋಬರ್ 7, 2023ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಇಸ್ರೇಲ್‌ ಅಧಿಕಾರಿಗಳು ಗಾಝಾದಲ್ಲಿ ಆಹಾರ, ನೀರು ಮತ್ತು ಇಂಧನವನ್ನು ತಡೆದಿದ್ದಾರೆ. ಯುಎನ್‌ನ ಮಾನವೀಯ ವ್ಯವಹಾರಗಳ ಸೆಕ್ರೆಟರಿ ಜನರಲ್ ಮಾರ್ಟಿನ್ ಗ್ರಿಫಿತ್ಸ್, ಪ್ಯಾಲೇಸ್ತೀನ್‌ಗೆ ನೆರವನ್ನು ನಿಲ್ಲಿಸಿರುವುದನ್ನು ಗಾಝಾ ಪಟ್ಟಿಯಲ್ಲಿರುವ ಸಹಾಯ ವ್ಯವಸ್ಥೆಯ ಪತನಕ್ಕೆ ಕಾರಣವಾಗುತ್ತದೆ. ಪಾಶ್ಚಿಮಾತ್ಯ ದೇಶಗಳು ಘೋಷಿಸಿರುವ ನೆರವನ್ನು  ಯುಎನ್‌ಆರ್‌ಡಬ್ಲ್ಯೂಎಯಿಂದ ಹಿಂತೆಗೆದುಕೊಳ್ಳವ ನಿರ್ಧಾರವು ಅಪಾಯಕಾರಿ ಮತ್ತು ಇದು ದೂರಗಾಮಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಜಗತ್ತು ಗಾಝಾದ ಜನರನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ಗ್ರಿಫಿತ್ಸ್ ಮಂಗಳವಾರ ಇತರ ಮಾನವೀಯ ಸಂಘಟನೆಯ ನಾಯಕರೊಂದಿಗೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಆಕ್ರಮಿತ ವೆಸ್ಟ್‌ ಬ್ಯಾಂಕ್‌ನಲ್ಲಿ ಪ್ಯಾಲೆಸ್ತೀನಿಯನ್ನರ ಕಾನೂನುಬಾಹಿರ ಹತ್ಯೆಯನ್ನು ತಕ್ಷಣವೇ ಕೊನೆಗೊಳಿಸಬೇಕು ಎಂದು UN ಮಾನವ ಹಕ್ಕುಗಳ ಕಚೇರಿ ಹೇಳಿದೆ.

UNRWAಗಾಗಿ ನೆರವಿನ ನಿಧಿಯನ್ನು ನಿಲ್ಲಿಸುವ ವಿವಿಧ ಸದಸ್ಯ ರಾಷ್ಟ್ರಗಳ ನಿರ್ಧಾರಗಳು ಗಾಝಾದ 2.2 ಮಿಲಿಯನ್ ಜನರಿಗೆ ದುರಂತ ಪರಿಣಾಮಗಳನ್ನು ಉಂಟುಮಾಡುತ್ತವೆ. ಈ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನಾವು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಸುಮಾರು ಹನ್ನೆರಡು ಪಾಶ್ಚಿಮಾತ್ಯ ದೇಶಗಳು UNRWAಗೆ ಧನಸಹಾಯವನ್ನು ಸ್ಥಗಿತಗೊಳಿಸಿವೆ. 12 ಮಾಜಿ ಸಿಬ್ಬಂದಿಗಳು ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿತ್ತು. ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿತ್ತು.ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ. ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ್ದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದರು.

ರಾಫಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ;  ದಕ್ಷಿಣ ಗಾಝಾದ ರಾಫಾದಲ್ಲಿ ಇಸ್ರೇಲ್‌ ಮಿಲಿಟರಿಯಿಂದ ಹತ್ಯೆಗೀಡಾದ ಪ್ಯಾಲೆಸ್ತೀನ್‌ ನಾಗರಿಕರ ಮೃತದೇಹವನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಗಿದೆ. ನಾಪತ್ತೆಯಾದವರ ಸಂಬಂಧಿಕರು ಸಮಾಧಿ ಸ್ಥಳಕ್ಕೆ ಆಗಮಿಸಿದ್ದರೂ, ಮೃತರ ದೇಹಗಳನ್ನು ಗುರುತಿಸಲು ಸಾಧ್ಯವಾಗದೆ ಹಿಂತಿರುಗಿದ್ದಾರೆ.

ಅಕ್ಟೋಬರ್ 7ರಿಂದ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯ ಬಳಿಕ ಗಾಝಾದಲ್ಲಿ ಕನಿಷ್ಠ 26,751 ಜನರು ಸಾವನ್ನಪ್ಪಿದ್ದಾರೆ ಮತ್ತು 65,636 ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಮನೆಗಳು ನೆಲಸಮಗೊಳಿಸಲಾಗಿದೆ.

ಇದನ್ನು ಓದಿ: ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...