Homeಮುಖಪುಟಹಸಿವನ್ನು 'ಯುದ್ಧ ಅಸ್ತ್ರ'ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ 'ನರಕಸದೃಶ'

ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

- Advertisement -
- Advertisement -

ಇಸ್ರೇಲ್‌ ಸರ್ಕಾರವು  ಗಾಝಾ ಪಟ್ಟಿಯಲ್ಲಿ ನಾಗರಿಕರನ್ನು ಹಸಿವಿನಿಂದ ಸಾಯುವಂತೆ ಪ್ರೇರೇಪಿಸುತ್ತಿದ್ದು, ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ. ಇಸ್ರೇಲ್‌ ಪಡೆಗಳು ಗಾಝಾದ ಜನರಿಗೆ ಉದ್ದೇಶಪೂರ್ವಕವಾಗಿ ನೀರು, ಆಹಾರ ಮತ್ತು ಇಂಧನದ ವಿತರಣೆಯ ಮೇಲೆ ನಿರ್ಬಂಧ ವಿಧಿಸುತ್ತಿದೆ, ಮಾನವೀಯ ಸಹಾಯಕ್ಕೆ ಅಡ್ಡಿಪಡಿಸುತ್ತಿದೆ. ಕೃಷಿ ಪ್ರದೇಶಗಳನ್ನು ನೆಲಸಮ ಮಾಡುತ್ತಿದೆ, ನೀರಿನ ಮೂಲಗಳನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರ ಉಳಿವಿಗೆ ಅನಿವಾರ್ಯವಾದ ಎಲ್ಲಾ ವಸ್ತುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಉದ್ದೇಶಪೂರ್ವಕವಾಗಿರುವ ಈ ಕೃತ್ಯವು ಯುದ್ಧ ಅಪರಾಧವಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಅಡ್ಡಿ ಹಿನ್ನೆಲೆ ಆಹಾರಗಳ ‘ಗಂಭೀರ ಕೊರತೆಯಿದ್ದರೂ’ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಗೆ ಆಹಾರವನ್ನು ತಲುಪಿಸಲು ಸಾಧ್ಯವಾಗಲಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಉತ್ತರ ಗಾಝಾಕ್ಕೆ ಆಹಾರ ನೆರವು ತಲುಪಿದಾಗ ಜನ ಸಂದಣಿ ಕೂಡಿತ್ತು. ಈ ಆಹಾರಕ್ಕಾಗಿ ನಡೆದ ನೂಕಾಟ-ತಳ್ಳಾಟದಲ್ಲಿ ಇಬ್ಬರು ಉಸಿರುಗಟ್ಟಿ ಸಾಯುವುದನ್ನು ನಾನು ನೋಡಿದೆ ಎಂದು ಪರಿಹಾರ ಸಾಮಾಗ್ರಿಯನ್ನು ರಾವನಿಸುತ್ತಿದ್ದ ಕಾರ್ಯಕರ್ತೆಯೋರ್ವರು ಹೇಳಿದ್ದಾರೆ.

ಅಕ್ಟೋಬರ್ 7, 2023ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಇಸ್ರೇಲ್‌ ಅಧಿಕಾರಿಗಳು ಗಾಝಾದಲ್ಲಿ ಆಹಾರ, ನೀರು ಮತ್ತು ಇಂಧನವನ್ನು ತಡೆದಿದ್ದಾರೆ. ಯುಎನ್‌ನ ಮಾನವೀಯ ವ್ಯವಹಾರಗಳ ಸೆಕ್ರೆಟರಿ ಜನರಲ್ ಮಾರ್ಟಿನ್ ಗ್ರಿಫಿತ್ಸ್, ಪ್ಯಾಲೇಸ್ತೀನ್‌ಗೆ ನೆರವನ್ನು ನಿಲ್ಲಿಸಿರುವುದನ್ನು ಗಾಝಾ ಪಟ್ಟಿಯಲ್ಲಿರುವ ಸಹಾಯ ವ್ಯವಸ್ಥೆಯ ಪತನಕ್ಕೆ ಕಾರಣವಾಗುತ್ತದೆ. ಪಾಶ್ಚಿಮಾತ್ಯ ದೇಶಗಳು ಘೋಷಿಸಿರುವ ನೆರವನ್ನು  ಯುಎನ್‌ಆರ್‌ಡಬ್ಲ್ಯೂಎಯಿಂದ ಹಿಂತೆಗೆದುಕೊಳ್ಳವ ನಿರ್ಧಾರವು ಅಪಾಯಕಾರಿ ಮತ್ತು ಇದು ದೂರಗಾಮಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಜಗತ್ತು ಗಾಝಾದ ಜನರನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ಗ್ರಿಫಿತ್ಸ್ ಮಂಗಳವಾರ ಇತರ ಮಾನವೀಯ ಸಂಘಟನೆಯ ನಾಯಕರೊಂದಿಗೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಆಕ್ರಮಿತ ವೆಸ್ಟ್‌ ಬ್ಯಾಂಕ್‌ನಲ್ಲಿ ಪ್ಯಾಲೆಸ್ತೀನಿಯನ್ನರ ಕಾನೂನುಬಾಹಿರ ಹತ್ಯೆಯನ್ನು ತಕ್ಷಣವೇ ಕೊನೆಗೊಳಿಸಬೇಕು ಎಂದು UN ಮಾನವ ಹಕ್ಕುಗಳ ಕಚೇರಿ ಹೇಳಿದೆ.

UNRWAಗಾಗಿ ನೆರವಿನ ನಿಧಿಯನ್ನು ನಿಲ್ಲಿಸುವ ವಿವಿಧ ಸದಸ್ಯ ರಾಷ್ಟ್ರಗಳ ನಿರ್ಧಾರಗಳು ಗಾಝಾದ 2.2 ಮಿಲಿಯನ್ ಜನರಿಗೆ ದುರಂತ ಪರಿಣಾಮಗಳನ್ನು ಉಂಟುಮಾಡುತ್ತವೆ. ಈ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನಾವು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಸುಮಾರು ಹನ್ನೆರಡು ಪಾಶ್ಚಿಮಾತ್ಯ ದೇಶಗಳು UNRWAಗೆ ಧನಸಹಾಯವನ್ನು ಸ್ಥಗಿತಗೊಳಿಸಿವೆ. 12 ಮಾಜಿ ಸಿಬ್ಬಂದಿಗಳು ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿತ್ತು. ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿತ್ತು.ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ. ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ್ದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದರು.

ರಾಫಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ;  ದಕ್ಷಿಣ ಗಾಝಾದ ರಾಫಾದಲ್ಲಿ ಇಸ್ರೇಲ್‌ ಮಿಲಿಟರಿಯಿಂದ ಹತ್ಯೆಗೀಡಾದ ಪ್ಯಾಲೆಸ್ತೀನ್‌ ನಾಗರಿಕರ ಮೃತದೇಹವನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಗಿದೆ. ನಾಪತ್ತೆಯಾದವರ ಸಂಬಂಧಿಕರು ಸಮಾಧಿ ಸ್ಥಳಕ್ಕೆ ಆಗಮಿಸಿದ್ದರೂ, ಮೃತರ ದೇಹಗಳನ್ನು ಗುರುತಿಸಲು ಸಾಧ್ಯವಾಗದೆ ಹಿಂತಿರುಗಿದ್ದಾರೆ.

ಅಕ್ಟೋಬರ್ 7ರಿಂದ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯ ಬಳಿಕ ಗಾಝಾದಲ್ಲಿ ಕನಿಷ್ಠ 26,751 ಜನರು ಸಾವನ್ನಪ್ಪಿದ್ದಾರೆ ಮತ್ತು 65,636 ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಮನೆಗಳು ನೆಲಸಮಗೊಳಿಸಲಾಗಿದೆ.

ಇದನ್ನು ಓದಿ: ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...