Homeಮುಖಪುಟಹಸಿವನ್ನು 'ಯುದ್ಧ ಅಸ್ತ್ರ'ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ 'ನರಕಸದೃಶ'

ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

- Advertisement -
- Advertisement -

ಇಸ್ರೇಲ್‌ ಸರ್ಕಾರವು  ಗಾಝಾ ಪಟ್ಟಿಯಲ್ಲಿ ನಾಗರಿಕರನ್ನು ಹಸಿವಿನಿಂದ ಸಾಯುವಂತೆ ಪ್ರೇರೇಪಿಸುತ್ತಿದ್ದು, ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ. ಇಸ್ರೇಲ್‌ ಪಡೆಗಳು ಗಾಝಾದ ಜನರಿಗೆ ಉದ್ದೇಶಪೂರ್ವಕವಾಗಿ ನೀರು, ಆಹಾರ ಮತ್ತು ಇಂಧನದ ವಿತರಣೆಯ ಮೇಲೆ ನಿರ್ಬಂಧ ವಿಧಿಸುತ್ತಿದೆ, ಮಾನವೀಯ ಸಹಾಯಕ್ಕೆ ಅಡ್ಡಿಪಡಿಸುತ್ತಿದೆ. ಕೃಷಿ ಪ್ರದೇಶಗಳನ್ನು ನೆಲಸಮ ಮಾಡುತ್ತಿದೆ, ನೀರಿನ ಮೂಲಗಳನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರ ಉಳಿವಿಗೆ ಅನಿವಾರ್ಯವಾದ ಎಲ್ಲಾ ವಸ್ತುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಉದ್ದೇಶಪೂರ್ವಕವಾಗಿರುವ ಈ ಕೃತ್ಯವು ಯುದ್ಧ ಅಪರಾಧವಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಅಡ್ಡಿ ಹಿನ್ನೆಲೆ ಆಹಾರಗಳ ‘ಗಂಭೀರ ಕೊರತೆಯಿದ್ದರೂ’ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಗೆ ಆಹಾರವನ್ನು ತಲುಪಿಸಲು ಸಾಧ್ಯವಾಗಲಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಉತ್ತರ ಗಾಝಾಕ್ಕೆ ಆಹಾರ ನೆರವು ತಲುಪಿದಾಗ ಜನ ಸಂದಣಿ ಕೂಡಿತ್ತು. ಈ ಆಹಾರಕ್ಕಾಗಿ ನಡೆದ ನೂಕಾಟ-ತಳ್ಳಾಟದಲ್ಲಿ ಇಬ್ಬರು ಉಸಿರುಗಟ್ಟಿ ಸಾಯುವುದನ್ನು ನಾನು ನೋಡಿದೆ ಎಂದು ಪರಿಹಾರ ಸಾಮಾಗ್ರಿಯನ್ನು ರಾವನಿಸುತ್ತಿದ್ದ ಕಾರ್ಯಕರ್ತೆಯೋರ್ವರು ಹೇಳಿದ್ದಾರೆ.

ಅಕ್ಟೋಬರ್ 7, 2023ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಇಸ್ರೇಲ್‌ ಅಧಿಕಾರಿಗಳು ಗಾಝಾದಲ್ಲಿ ಆಹಾರ, ನೀರು ಮತ್ತು ಇಂಧನವನ್ನು ತಡೆದಿದ್ದಾರೆ. ಯುಎನ್‌ನ ಮಾನವೀಯ ವ್ಯವಹಾರಗಳ ಸೆಕ್ರೆಟರಿ ಜನರಲ್ ಮಾರ್ಟಿನ್ ಗ್ರಿಫಿತ್ಸ್, ಪ್ಯಾಲೇಸ್ತೀನ್‌ಗೆ ನೆರವನ್ನು ನಿಲ್ಲಿಸಿರುವುದನ್ನು ಗಾಝಾ ಪಟ್ಟಿಯಲ್ಲಿರುವ ಸಹಾಯ ವ್ಯವಸ್ಥೆಯ ಪತನಕ್ಕೆ ಕಾರಣವಾಗುತ್ತದೆ. ಪಾಶ್ಚಿಮಾತ್ಯ ದೇಶಗಳು ಘೋಷಿಸಿರುವ ನೆರವನ್ನು  ಯುಎನ್‌ಆರ್‌ಡಬ್ಲ್ಯೂಎಯಿಂದ ಹಿಂತೆಗೆದುಕೊಳ್ಳವ ನಿರ್ಧಾರವು ಅಪಾಯಕಾರಿ ಮತ್ತು ಇದು ದೂರಗಾಮಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಜಗತ್ತು ಗಾಝಾದ ಜನರನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ಗ್ರಿಫಿತ್ಸ್ ಮಂಗಳವಾರ ಇತರ ಮಾನವೀಯ ಸಂಘಟನೆಯ ನಾಯಕರೊಂದಿಗೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಆಕ್ರಮಿತ ವೆಸ್ಟ್‌ ಬ್ಯಾಂಕ್‌ನಲ್ಲಿ ಪ್ಯಾಲೆಸ್ತೀನಿಯನ್ನರ ಕಾನೂನುಬಾಹಿರ ಹತ್ಯೆಯನ್ನು ತಕ್ಷಣವೇ ಕೊನೆಗೊಳಿಸಬೇಕು ಎಂದು UN ಮಾನವ ಹಕ್ಕುಗಳ ಕಚೇರಿ ಹೇಳಿದೆ.

UNRWAಗಾಗಿ ನೆರವಿನ ನಿಧಿಯನ್ನು ನಿಲ್ಲಿಸುವ ವಿವಿಧ ಸದಸ್ಯ ರಾಷ್ಟ್ರಗಳ ನಿರ್ಧಾರಗಳು ಗಾಝಾದ 2.2 ಮಿಲಿಯನ್ ಜನರಿಗೆ ದುರಂತ ಪರಿಣಾಮಗಳನ್ನು ಉಂಟುಮಾಡುತ್ತವೆ. ಈ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನಾವು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಸುಮಾರು ಹನ್ನೆರಡು ಪಾಶ್ಚಿಮಾತ್ಯ ದೇಶಗಳು UNRWAಗೆ ಧನಸಹಾಯವನ್ನು ಸ್ಥಗಿತಗೊಳಿಸಿವೆ. 12 ಮಾಜಿ ಸಿಬ್ಬಂದಿಗಳು ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿತ್ತು. ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿತ್ತು.ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ. ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ್ದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದರು.

ರಾಫಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ;  ದಕ್ಷಿಣ ಗಾಝಾದ ರಾಫಾದಲ್ಲಿ ಇಸ್ರೇಲ್‌ ಮಿಲಿಟರಿಯಿಂದ ಹತ್ಯೆಗೀಡಾದ ಪ್ಯಾಲೆಸ್ತೀನ್‌ ನಾಗರಿಕರ ಮೃತದೇಹವನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಗಿದೆ. ನಾಪತ್ತೆಯಾದವರ ಸಂಬಂಧಿಕರು ಸಮಾಧಿ ಸ್ಥಳಕ್ಕೆ ಆಗಮಿಸಿದ್ದರೂ, ಮೃತರ ದೇಹಗಳನ್ನು ಗುರುತಿಸಲು ಸಾಧ್ಯವಾಗದೆ ಹಿಂತಿರುಗಿದ್ದಾರೆ.

ಅಕ್ಟೋಬರ್ 7ರಿಂದ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯ ಬಳಿಕ ಗಾಝಾದಲ್ಲಿ ಕನಿಷ್ಠ 26,751 ಜನರು ಸಾವನ್ನಪ್ಪಿದ್ದಾರೆ ಮತ್ತು 65,636 ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಮನೆಗಳು ನೆಲಸಮಗೊಳಿಸಲಾಗಿದೆ.

ಇದನ್ನು ಓದಿ: ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...