Homeಮುಖಪುಟಹಸಿವನ್ನು 'ಯುದ್ಧ ಅಸ್ತ್ರ'ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ 'ನರಕಸದೃಶ'

ಹಸಿವನ್ನು ‘ಯುದ್ಧ ಅಸ್ತ್ರ’ವನ್ನಾಗಿಸಿದ ಇಸ್ರೇಲ್‌: ಗಾಝಾದಲ್ಲಿ ಪರಿಸ್ಥಿತಿ ‘ನರಕಸದೃಶ’

- Advertisement -
- Advertisement -

ಇಸ್ರೇಲ್‌ ಸರ್ಕಾರವು  ಗಾಝಾ ಪಟ್ಟಿಯಲ್ಲಿ ನಾಗರಿಕರನ್ನು ಹಸಿವಿನಿಂದ ಸಾಯುವಂತೆ ಪ್ರೇರೇಪಿಸುತ್ತಿದ್ದು, ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುತ್ತಿದೆ. ಇಸ್ರೇಲ್‌ ಪಡೆಗಳು ಗಾಝಾದ ಜನರಿಗೆ ಉದ್ದೇಶಪೂರ್ವಕವಾಗಿ ನೀರು, ಆಹಾರ ಮತ್ತು ಇಂಧನದ ವಿತರಣೆಯ ಮೇಲೆ ನಿರ್ಬಂಧ ವಿಧಿಸುತ್ತಿದೆ, ಮಾನವೀಯ ಸಹಾಯಕ್ಕೆ ಅಡ್ಡಿಪಡಿಸುತ್ತಿದೆ. ಕೃಷಿ ಪ್ರದೇಶಗಳನ್ನು ನೆಲಸಮ ಮಾಡುತ್ತಿದೆ, ನೀರಿನ ಮೂಲಗಳನ್ನು ಕಲುಷಿತಗೊಳಿಸುತ್ತಿದೆ ಮತ್ತು ನಾಗರಿಕರ ಉಳಿವಿಗೆ ಅನಿವಾರ್ಯವಾದ ಎಲ್ಲಾ ವಸ್ತುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಉದ್ದೇಶಪೂರ್ವಕವಾಗಿರುವ ಈ ಕೃತ್ಯವು ಯುದ್ಧ ಅಪರಾಧವಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಅಡ್ಡಿ ಹಿನ್ನೆಲೆ ಆಹಾರಗಳ ‘ಗಂಭೀರ ಕೊರತೆಯಿದ್ದರೂ’ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಗೆ ಆಹಾರವನ್ನು ತಲುಪಿಸಲು ಸಾಧ್ಯವಾಗಲಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಉತ್ತರ ಗಾಝಾಕ್ಕೆ ಆಹಾರ ನೆರವು ತಲುಪಿದಾಗ ಜನ ಸಂದಣಿ ಕೂಡಿತ್ತು. ಈ ಆಹಾರಕ್ಕಾಗಿ ನಡೆದ ನೂಕಾಟ-ತಳ್ಳಾಟದಲ್ಲಿ ಇಬ್ಬರು ಉಸಿರುಗಟ್ಟಿ ಸಾಯುವುದನ್ನು ನಾನು ನೋಡಿದೆ ಎಂದು ಪರಿಹಾರ ಸಾಮಾಗ್ರಿಯನ್ನು ರಾವನಿಸುತ್ತಿದ್ದ ಕಾರ್ಯಕರ್ತೆಯೋರ್ವರು ಹೇಳಿದ್ದಾರೆ.

ಅಕ್ಟೋಬರ್ 7, 2023ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಇಸ್ರೇಲ್‌ ಅಧಿಕಾರಿಗಳು ಗಾಝಾದಲ್ಲಿ ಆಹಾರ, ನೀರು ಮತ್ತು ಇಂಧನವನ್ನು ತಡೆದಿದ್ದಾರೆ. ಯುಎನ್‌ನ ಮಾನವೀಯ ವ್ಯವಹಾರಗಳ ಸೆಕ್ರೆಟರಿ ಜನರಲ್ ಮಾರ್ಟಿನ್ ಗ್ರಿಫಿತ್ಸ್, ಪ್ಯಾಲೇಸ್ತೀನ್‌ಗೆ ನೆರವನ್ನು ನಿಲ್ಲಿಸಿರುವುದನ್ನು ಗಾಝಾ ಪಟ್ಟಿಯಲ್ಲಿರುವ ಸಹಾಯ ವ್ಯವಸ್ಥೆಯ ಪತನಕ್ಕೆ ಕಾರಣವಾಗುತ್ತದೆ. ಪಾಶ್ಚಿಮಾತ್ಯ ದೇಶಗಳು ಘೋಷಿಸಿರುವ ನೆರವನ್ನು  ಯುಎನ್‌ಆರ್‌ಡಬ್ಲ್ಯೂಎಯಿಂದ ಹಿಂತೆಗೆದುಕೊಳ್ಳವ ನಿರ್ಧಾರವು ಅಪಾಯಕಾರಿ ಮತ್ತು ಇದು ದೂರಗಾಮಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಜಗತ್ತು ಗಾಝಾದ ಜನರನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ಗ್ರಿಫಿತ್ಸ್ ಮಂಗಳವಾರ ಇತರ ಮಾನವೀಯ ಸಂಘಟನೆಯ ನಾಯಕರೊಂದಿಗೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಆಕ್ರಮಿತ ವೆಸ್ಟ್‌ ಬ್ಯಾಂಕ್‌ನಲ್ಲಿ ಪ್ಯಾಲೆಸ್ತೀನಿಯನ್ನರ ಕಾನೂನುಬಾಹಿರ ಹತ್ಯೆಯನ್ನು ತಕ್ಷಣವೇ ಕೊನೆಗೊಳಿಸಬೇಕು ಎಂದು UN ಮಾನವ ಹಕ್ಕುಗಳ ಕಚೇರಿ ಹೇಳಿದೆ.

UNRWAಗಾಗಿ ನೆರವಿನ ನಿಧಿಯನ್ನು ನಿಲ್ಲಿಸುವ ವಿವಿಧ ಸದಸ್ಯ ರಾಷ್ಟ್ರಗಳ ನಿರ್ಧಾರಗಳು ಗಾಝಾದ 2.2 ಮಿಲಿಯನ್ ಜನರಿಗೆ ದುರಂತ ಪರಿಣಾಮಗಳನ್ನು ಉಂಟುಮಾಡುತ್ತವೆ. ಈ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ನಾವು ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಸುಮಾರು ಹನ್ನೆರಡು ಪಾಶ್ಚಿಮಾತ್ಯ ದೇಶಗಳು UNRWAಗೆ ಧನಸಹಾಯವನ್ನು ಸ್ಥಗಿತಗೊಳಿಸಿವೆ. 12 ಮಾಜಿ ಸಿಬ್ಬಂದಿಗಳು ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ದಾಳಿಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿತ್ತು. ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿತ್ತು.ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ. ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ್ದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದರು.

ರಾಫಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ;  ದಕ್ಷಿಣ ಗಾಝಾದ ರಾಫಾದಲ್ಲಿ ಇಸ್ರೇಲ್‌ ಮಿಲಿಟರಿಯಿಂದ ಹತ್ಯೆಗೀಡಾದ ಪ್ಯಾಲೆಸ್ತೀನ್‌ ನಾಗರಿಕರ ಮೃತದೇಹವನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಗಿದೆ. ನಾಪತ್ತೆಯಾದವರ ಸಂಬಂಧಿಕರು ಸಮಾಧಿ ಸ್ಥಳಕ್ಕೆ ಆಗಮಿಸಿದ್ದರೂ, ಮೃತರ ದೇಹಗಳನ್ನು ಗುರುತಿಸಲು ಸಾಧ್ಯವಾಗದೆ ಹಿಂತಿರುಗಿದ್ದಾರೆ.

ಅಕ್ಟೋಬರ್ 7ರಿಂದ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯ ಬಳಿಕ ಗಾಝಾದಲ್ಲಿ ಕನಿಷ್ಠ 26,751 ಜನರು ಸಾವನ್ನಪ್ಪಿದ್ದಾರೆ ಮತ್ತು 65,636 ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಲಕ್ಷಾಂತರ ಮನೆಗಳು ನೆಲಸಮಗೊಳಿಸಲಾಗಿದೆ.

ಇದನ್ನು ಓದಿ: ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...