Homeಮುಖಪುಟಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

- Advertisement -
- Advertisement -

ಮಾರ್ಚ್ 24  ರಂದು ಭಾರತದಾದ್ಯಂತ ಘೋಷಿಸಲ್ಪಟ್ಟ ಯಾವುದೇ ಪೂರ್ವ ನಿರ್ಧರಿತವಲ್ಲದ ಲಾಕ್‌ಡೌನ್‌ನಿಂದಾಗಿ, ವಿಶ್ವದ ಎರಡು ದೊಡ್ಡ ಮಕ್ಕಳ ಪೋಷಣೆ ಕಾರ್ಯಕ್ರಮಗಳಾದ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್ಮೆಂಟ್ ಸ್ಕೀಮ್(ಐಸಿಡಿಎಸ್) ಮತ್ತು ವಿಡ್‌ ಡೆ ಮೀಲ್ (ಅಕ್ಷರ ದಾಸೋಹ) ದಂತಹ ಕಾರ್ಯಕ್ರಮವು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸಿವೆ.

ಪ್ರಸ್ತುತ 1 ರಿಂದ 8 ತರಗತಿಗಳಲ್ಲಿ ಕಲಿಯುತ್ತಿರುವ ಅಂದಾಜು 12 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತಿರುವ ಮಧ್ಯಾಹ್ನದ ಊಟದ ಕಾರ್ಯಕ್ರಮದ ಆಹಾರ ಧಾನ್ಯಗಳು ಲಾಕ್‌ಡೌನ್‌ನಿಂದಾಗಿ 335 ಟನ್‌ಗಳಿಂದ ಕೇವಲ 109 ಟನ್‌ಗಳಿಗೆ ಕುಸಿದಿದೆ. ಇದು ಕಳೆದ ವರ್ಷ ಇದೇ ಅವಧಿಗಿಂತ ಮೂರನೇ ಒಂದು ಭಾಗದಷ್ಟು ಕಡಿಮೆಯಾಗಿದೆ.

ಐಸಿಡಿಎಸ್ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಕಾರ್ಯಕ್ರಮದ ಆಹಾರ ಧಾನ್ಯದ ಸೇವನೆಯು ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ 238,000 ಟನ್‌ಗಳಿದಿದ್ದು, ಈ ವರ್ಷ 97,000 ಟನ್‌ಗಳಿಗೆ ಇಳಿದಿದೆ. ಈ ಅಂಗನವಾಡಿ ಕೇಂದ್ರಗಳು 0-6 ವರ್ಷದೊಳಗಿನ ಸುಮಾರು 14 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತವೆ ಎಂದು ಅಂದಾಜಿಸಲಾಗಿದೆ.

ಅಷ್ಟೇ ಅಲ್ಲದೆ, ಮಧ್ಯಾಹ್ನ ಊಟವು ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ ಹಾಗೂ ಹದಿಹರೆಯದ ಹುಡುಗಿಯರಿಗೆ ಪೂರಕ ಪೌಷ್ಠಿಕಾಂಶವನ್ನು ಒದಗಿಸುತ್ತದೆ.

ಈ ಮಾಹಿತಿಯೂ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಮಾಸಿಕ ಬುಲೆಟಿನ್‌ ನಲ್ಲಿ ಕಾಣಬಹುದಾಗಿದೆ.

ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯಲ್ಲಿ (ಎನ್‌ಎಫ್‌ಹೆಚ್‌ಎಸ್) ವರದಿಯಾದಂತೆ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಕಡಿಮೆ ತೂಕ ಹೊಂದಿದ್ದಾರೆ ಮತ್ತು ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.

ಪ್ರಸ್ತುತ ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ಸಿಗುತ್ತಿಲ್ಲವಾದ್ದರಿಂದ ಭವಿಷ್ಯದಲ್ಲಿ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎನ್ನಲಾಗಿದೆ.

ಯಾಕೆ ಹೀಗಾಯಿತು?

ಯಾವುದೆ ಪೂರ್ವನಿರ್ಧರಿವಲ್ಲದೆ ದೇಶದಾದ್ಯಂತ ಘೋಷಿಸಲಾದ ಲಾಕ್‌ಡೌನ್‌ನಿಂದಾಗಿ ಈ ಮಕ್ಕಳ ಕಾರ್ಯಕ್ರಮಗಳಿಗಾಗಿ ಯೋಜಿಸಿದ್ದ ಆಹಾರ ಧಾನ್ಯಗಳು ರೈಲ್ವೇ ಹಾಗೂ ರಸ್ತೆ ಮೂಲಕ ಗೊತ್ತು ಪಡಿಸಿದ ಸ್ಥಳಗಳಿಗೆ ಸಾಗಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಈ ಕಾರ್ಯಕ್ರಮಗಳನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ಯಾವುದೇ ಸ್ಪಷ್ಟ ನಿರ್ದೇಶನಗಳನ್ನು ನೀಡಿಲ್ಲ, ಇದರಿಂದಾಗಿ ನೌಕರರು ಮತ್ತು ಲಕ್ಷಾಂತರ ಮಕ್ಕಳು ತತ್ತರಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ಎರಡು ದೊಡ್ಡ ಕಾರ್ಯಕ್ರಮಗಳಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಮಿಕರು ಮತ್ತು ಸಹಾಯಕಿಯರು ಹಾಗೂ 29 ಲಕ್ಷಕ್ಕೂ ಹೆಚ್ಚು ಅಡುಗೆಯವರು / ಸಹಾಯಕರು ಅಕ್ಷರಶಃ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ.

ಅವರಲ್ಲಿ ಹೆಚ್ಚಿನವರು ಸಾಂಕ್ರಾಮಿಕ ಸಂಬಂಧಿತ ಕಾರ್ಯಗಳಲ್ಲಿ ರಕ್ಷಣಾತ್ಮಕ ಸಾಧನಗಳಿಲ್ಲದೆ ಕೆಲಸ ಮಾಡಿದ್ದಾರೆ. ಅನೇಕರು ತಮಗೆ ಸಿಗುವ ಅಲ್ಪ ವೇತನವನ್ನು ಪಡೆದಿಲ್ಲ ಹಾಗೂ ಈ ಕಠಿಣ ಪರಿಸ್ಥಿತಿಗಳಲ್ಲಿ ಅವರ  ಬದುಕು ತುಂಬಾ ಕಷ್ಟಕರವಾಗಿದೆ.


ಓದಿ: ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...