Homeಮುಖಪುಟಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

- Advertisement -
- Advertisement -

ಮಾರ್ಚ್ 24  ರಂದು ಭಾರತದಾದ್ಯಂತ ಘೋಷಿಸಲ್ಪಟ್ಟ ಯಾವುದೇ ಪೂರ್ವ ನಿರ್ಧರಿತವಲ್ಲದ ಲಾಕ್‌ಡೌನ್‌ನಿಂದಾಗಿ, ವಿಶ್ವದ ಎರಡು ದೊಡ್ಡ ಮಕ್ಕಳ ಪೋಷಣೆ ಕಾರ್ಯಕ್ರಮಗಳಾದ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್ಮೆಂಟ್ ಸ್ಕೀಮ್(ಐಸಿಡಿಎಸ್) ಮತ್ತು ವಿಡ್‌ ಡೆ ಮೀಲ್ (ಅಕ್ಷರ ದಾಸೋಹ) ದಂತಹ ಕಾರ್ಯಕ್ರಮವು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸಿವೆ.

ಪ್ರಸ್ತುತ 1 ರಿಂದ 8 ತರಗತಿಗಳಲ್ಲಿ ಕಲಿಯುತ್ತಿರುವ ಅಂದಾಜು 12 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತಿರುವ ಮಧ್ಯಾಹ್ನದ ಊಟದ ಕಾರ್ಯಕ್ರಮದ ಆಹಾರ ಧಾನ್ಯಗಳು ಲಾಕ್‌ಡೌನ್‌ನಿಂದಾಗಿ 335 ಟನ್‌ಗಳಿಂದ ಕೇವಲ 109 ಟನ್‌ಗಳಿಗೆ ಕುಸಿದಿದೆ. ಇದು ಕಳೆದ ವರ್ಷ ಇದೇ ಅವಧಿಗಿಂತ ಮೂರನೇ ಒಂದು ಭಾಗದಷ್ಟು ಕಡಿಮೆಯಾಗಿದೆ.

ಐಸಿಡಿಎಸ್ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಕಾರ್ಯಕ್ರಮದ ಆಹಾರ ಧಾನ್ಯದ ಸೇವನೆಯು ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ 238,000 ಟನ್‌ಗಳಿದಿದ್ದು, ಈ ವರ್ಷ 97,000 ಟನ್‌ಗಳಿಗೆ ಇಳಿದಿದೆ. ಈ ಅಂಗನವಾಡಿ ಕೇಂದ್ರಗಳು 0-6 ವರ್ಷದೊಳಗಿನ ಸುಮಾರು 14 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತವೆ ಎಂದು ಅಂದಾಜಿಸಲಾಗಿದೆ.

ಅಷ್ಟೇ ಅಲ್ಲದೆ, ಮಧ್ಯಾಹ್ನ ಊಟವು ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ ಹಾಗೂ ಹದಿಹರೆಯದ ಹುಡುಗಿಯರಿಗೆ ಪೂರಕ ಪೌಷ್ಠಿಕಾಂಶವನ್ನು ಒದಗಿಸುತ್ತದೆ.

ಈ ಮಾಹಿತಿಯೂ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಮಾಸಿಕ ಬುಲೆಟಿನ್‌ ನಲ್ಲಿ ಕಾಣಬಹುದಾಗಿದೆ.

ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯಲ್ಲಿ (ಎನ್‌ಎಫ್‌ಹೆಚ್‌ಎಸ್) ವರದಿಯಾದಂತೆ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಕಡಿಮೆ ತೂಕ ಹೊಂದಿದ್ದಾರೆ ಮತ್ತು ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.

ಪ್ರಸ್ತುತ ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ಸಿಗುತ್ತಿಲ್ಲವಾದ್ದರಿಂದ ಭವಿಷ್ಯದಲ್ಲಿ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎನ್ನಲಾಗಿದೆ.

ಯಾಕೆ ಹೀಗಾಯಿತು?

ಯಾವುದೆ ಪೂರ್ವನಿರ್ಧರಿವಲ್ಲದೆ ದೇಶದಾದ್ಯಂತ ಘೋಷಿಸಲಾದ ಲಾಕ್‌ಡೌನ್‌ನಿಂದಾಗಿ ಈ ಮಕ್ಕಳ ಕಾರ್ಯಕ್ರಮಗಳಿಗಾಗಿ ಯೋಜಿಸಿದ್ದ ಆಹಾರ ಧಾನ್ಯಗಳು ರೈಲ್ವೇ ಹಾಗೂ ರಸ್ತೆ ಮೂಲಕ ಗೊತ್ತು ಪಡಿಸಿದ ಸ್ಥಳಗಳಿಗೆ ಸಾಗಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಈ ಕಾರ್ಯಕ್ರಮಗಳನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ಯಾವುದೇ ಸ್ಪಷ್ಟ ನಿರ್ದೇಶನಗಳನ್ನು ನೀಡಿಲ್ಲ, ಇದರಿಂದಾಗಿ ನೌಕರರು ಮತ್ತು ಲಕ್ಷಾಂತರ ಮಕ್ಕಳು ತತ್ತರಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ಎರಡು ದೊಡ್ಡ ಕಾರ್ಯಕ್ರಮಗಳಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಮಿಕರು ಮತ್ತು ಸಹಾಯಕಿಯರು ಹಾಗೂ 29 ಲಕ್ಷಕ್ಕೂ ಹೆಚ್ಚು ಅಡುಗೆಯವರು / ಸಹಾಯಕರು ಅಕ್ಷರಶಃ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ.

ಅವರಲ್ಲಿ ಹೆಚ್ಚಿನವರು ಸಾಂಕ್ರಾಮಿಕ ಸಂಬಂಧಿತ ಕಾರ್ಯಗಳಲ್ಲಿ ರಕ್ಷಣಾತ್ಮಕ ಸಾಧನಗಳಿಲ್ಲದೆ ಕೆಲಸ ಮಾಡಿದ್ದಾರೆ. ಅನೇಕರು ತಮಗೆ ಸಿಗುವ ಅಲ್ಪ ವೇತನವನ್ನು ಪಡೆದಿಲ್ಲ ಹಾಗೂ ಈ ಕಠಿಣ ಪರಿಸ್ಥಿತಿಗಳಲ್ಲಿ ಅವರ  ಬದುಕು ತುಂಬಾ ಕಷ್ಟಕರವಾಗಿದೆ.


ಓದಿ: ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...