Homeಮುಖಪುಟಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

- Advertisement -
- Advertisement -

ಮಾರ್ಚ್ 24  ರಂದು ಭಾರತದಾದ್ಯಂತ ಘೋಷಿಸಲ್ಪಟ್ಟ ಯಾವುದೇ ಪೂರ್ವ ನಿರ್ಧರಿತವಲ್ಲದ ಲಾಕ್‌ಡೌನ್‌ನಿಂದಾಗಿ, ವಿಶ್ವದ ಎರಡು ದೊಡ್ಡ ಮಕ್ಕಳ ಪೋಷಣೆ ಕಾರ್ಯಕ್ರಮಗಳಾದ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್ಮೆಂಟ್ ಸ್ಕೀಮ್(ಐಸಿಡಿಎಸ್) ಮತ್ತು ವಿಡ್‌ ಡೆ ಮೀಲ್ (ಅಕ್ಷರ ದಾಸೋಹ) ದಂತಹ ಕಾರ್ಯಕ್ರಮವು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸಿವೆ.

ಪ್ರಸ್ತುತ 1 ರಿಂದ 8 ತರಗತಿಗಳಲ್ಲಿ ಕಲಿಯುತ್ತಿರುವ ಅಂದಾಜು 12 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತಿರುವ ಮಧ್ಯಾಹ್ನದ ಊಟದ ಕಾರ್ಯಕ್ರಮದ ಆಹಾರ ಧಾನ್ಯಗಳು ಲಾಕ್‌ಡೌನ್‌ನಿಂದಾಗಿ 335 ಟನ್‌ಗಳಿಂದ ಕೇವಲ 109 ಟನ್‌ಗಳಿಗೆ ಕುಸಿದಿದೆ. ಇದು ಕಳೆದ ವರ್ಷ ಇದೇ ಅವಧಿಗಿಂತ ಮೂರನೇ ಒಂದು ಭಾಗದಷ್ಟು ಕಡಿಮೆಯಾಗಿದೆ.

ಐಸಿಡಿಎಸ್ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಕಾರ್ಯಕ್ರಮದ ಆಹಾರ ಧಾನ್ಯದ ಸೇವನೆಯು ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ 238,000 ಟನ್‌ಗಳಿದಿದ್ದು, ಈ ವರ್ಷ 97,000 ಟನ್‌ಗಳಿಗೆ ಇಳಿದಿದೆ. ಈ ಅಂಗನವಾಡಿ ಕೇಂದ್ರಗಳು 0-6 ವರ್ಷದೊಳಗಿನ ಸುಮಾರು 14 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತವೆ ಎಂದು ಅಂದಾಜಿಸಲಾಗಿದೆ.

ಅಷ್ಟೇ ಅಲ್ಲದೆ, ಮಧ್ಯಾಹ್ನ ಊಟವು ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ ಹಾಗೂ ಹದಿಹರೆಯದ ಹುಡುಗಿಯರಿಗೆ ಪೂರಕ ಪೌಷ್ಠಿಕಾಂಶವನ್ನು ಒದಗಿಸುತ್ತದೆ.

ಈ ಮಾಹಿತಿಯೂ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಮಾಸಿಕ ಬುಲೆಟಿನ್‌ ನಲ್ಲಿ ಕಾಣಬಹುದಾಗಿದೆ.

ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯಲ್ಲಿ (ಎನ್‌ಎಫ್‌ಹೆಚ್‌ಎಸ್) ವರದಿಯಾದಂತೆ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಕಡಿಮೆ ತೂಕ ಹೊಂದಿದ್ದಾರೆ ಮತ್ತು ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.

ಪ್ರಸ್ತುತ ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ಸಿಗುತ್ತಿಲ್ಲವಾದ್ದರಿಂದ ಭವಿಷ್ಯದಲ್ಲಿ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎನ್ನಲಾಗಿದೆ.

ಯಾಕೆ ಹೀಗಾಯಿತು?

ಯಾವುದೆ ಪೂರ್ವನಿರ್ಧರಿವಲ್ಲದೆ ದೇಶದಾದ್ಯಂತ ಘೋಷಿಸಲಾದ ಲಾಕ್‌ಡೌನ್‌ನಿಂದಾಗಿ ಈ ಮಕ್ಕಳ ಕಾರ್ಯಕ್ರಮಗಳಿಗಾಗಿ ಯೋಜಿಸಿದ್ದ ಆಹಾರ ಧಾನ್ಯಗಳು ರೈಲ್ವೇ ಹಾಗೂ ರಸ್ತೆ ಮೂಲಕ ಗೊತ್ತು ಪಡಿಸಿದ ಸ್ಥಳಗಳಿಗೆ ಸಾಗಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಈ ಕಾರ್ಯಕ್ರಮಗಳನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ಯಾವುದೇ ಸ್ಪಷ್ಟ ನಿರ್ದೇಶನಗಳನ್ನು ನೀಡಿಲ್ಲ, ಇದರಿಂದಾಗಿ ನೌಕರರು ಮತ್ತು ಲಕ್ಷಾಂತರ ಮಕ್ಕಳು ತತ್ತರಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ಎರಡು ದೊಡ್ಡ ಕಾರ್ಯಕ್ರಮಗಳಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಮಿಕರು ಮತ್ತು ಸಹಾಯಕಿಯರು ಹಾಗೂ 29 ಲಕ್ಷಕ್ಕೂ ಹೆಚ್ಚು ಅಡುಗೆಯವರು / ಸಹಾಯಕರು ಅಕ್ಷರಶಃ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ.

ಅವರಲ್ಲಿ ಹೆಚ್ಚಿನವರು ಸಾಂಕ್ರಾಮಿಕ ಸಂಬಂಧಿತ ಕಾರ್ಯಗಳಲ್ಲಿ ರಕ್ಷಣಾತ್ಮಕ ಸಾಧನಗಳಿಲ್ಲದೆ ಕೆಲಸ ಮಾಡಿದ್ದಾರೆ. ಅನೇಕರು ತಮಗೆ ಸಿಗುವ ಅಲ್ಪ ವೇತನವನ್ನು ಪಡೆದಿಲ್ಲ ಹಾಗೂ ಈ ಕಠಿಣ ಪರಿಸ್ಥಿತಿಗಳಲ್ಲಿ ಅವರ  ಬದುಕು ತುಂಬಾ ಕಷ್ಟಕರವಾಗಿದೆ.


ಓದಿ: ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...