Homeಮುಖಪುಟಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

- Advertisement -
- Advertisement -

ಮಾರ್ಚ್ 24  ರಂದು ಭಾರತದಾದ್ಯಂತ ಘೋಷಿಸಲ್ಪಟ್ಟ ಯಾವುದೇ ಪೂರ್ವ ನಿರ್ಧರಿತವಲ್ಲದ ಲಾಕ್‌ಡೌನ್‌ನಿಂದಾಗಿ, ವಿಶ್ವದ ಎರಡು ದೊಡ್ಡ ಮಕ್ಕಳ ಪೋಷಣೆ ಕಾರ್ಯಕ್ರಮಗಳಾದ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್ಮೆಂಟ್ ಸ್ಕೀಮ್(ಐಸಿಡಿಎಸ್) ಮತ್ತು ವಿಡ್‌ ಡೆ ಮೀಲ್ (ಅಕ್ಷರ ದಾಸೋಹ) ದಂತಹ ಕಾರ್ಯಕ್ರಮವು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸಿವೆ.

ಪ್ರಸ್ತುತ 1 ರಿಂದ 8 ತರಗತಿಗಳಲ್ಲಿ ಕಲಿಯುತ್ತಿರುವ ಅಂದಾಜು 12 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತಿರುವ ಮಧ್ಯಾಹ್ನದ ಊಟದ ಕಾರ್ಯಕ್ರಮದ ಆಹಾರ ಧಾನ್ಯಗಳು ಲಾಕ್‌ಡೌನ್‌ನಿಂದಾಗಿ 335 ಟನ್‌ಗಳಿಂದ ಕೇವಲ 109 ಟನ್‌ಗಳಿಗೆ ಕುಸಿದಿದೆ. ಇದು ಕಳೆದ ವರ್ಷ ಇದೇ ಅವಧಿಗಿಂತ ಮೂರನೇ ಒಂದು ಭಾಗದಷ್ಟು ಕಡಿಮೆಯಾಗಿದೆ.

ಐಸಿಡಿಎಸ್ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಕಾರ್ಯಕ್ರಮದ ಆಹಾರ ಧಾನ್ಯದ ಸೇವನೆಯು ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ 238,000 ಟನ್‌ಗಳಿದಿದ್ದು, ಈ ವರ್ಷ 97,000 ಟನ್‌ಗಳಿಗೆ ಇಳಿದಿದೆ. ಈ ಅಂಗನವಾಡಿ ಕೇಂದ್ರಗಳು 0-6 ವರ್ಷದೊಳಗಿನ ಸುಮಾರು 14 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತವೆ ಎಂದು ಅಂದಾಜಿಸಲಾಗಿದೆ.

ಅಷ್ಟೇ ಅಲ್ಲದೆ, ಮಧ್ಯಾಹ್ನ ಊಟವು ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ ಹಾಗೂ ಹದಿಹರೆಯದ ಹುಡುಗಿಯರಿಗೆ ಪೂರಕ ಪೌಷ್ಠಿಕಾಂಶವನ್ನು ಒದಗಿಸುತ್ತದೆ.

ಈ ಮಾಹಿತಿಯೂ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಮಾಸಿಕ ಬುಲೆಟಿನ್‌ ನಲ್ಲಿ ಕಾಣಬಹುದಾಗಿದೆ.

ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯಲ್ಲಿ (ಎನ್‌ಎಫ್‌ಹೆಚ್‌ಎಸ್) ವರದಿಯಾದಂತೆ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಕಡಿಮೆ ತೂಕ ಹೊಂದಿದ್ದಾರೆ ಮತ್ತು ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.

ಪ್ರಸ್ತುತ ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ಸಿಗುತ್ತಿಲ್ಲವಾದ್ದರಿಂದ ಭವಿಷ್ಯದಲ್ಲಿ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎನ್ನಲಾಗಿದೆ.

ಯಾಕೆ ಹೀಗಾಯಿತು?

ಯಾವುದೆ ಪೂರ್ವನಿರ್ಧರಿವಲ್ಲದೆ ದೇಶದಾದ್ಯಂತ ಘೋಷಿಸಲಾದ ಲಾಕ್‌ಡೌನ್‌ನಿಂದಾಗಿ ಈ ಮಕ್ಕಳ ಕಾರ್ಯಕ್ರಮಗಳಿಗಾಗಿ ಯೋಜಿಸಿದ್ದ ಆಹಾರ ಧಾನ್ಯಗಳು ರೈಲ್ವೇ ಹಾಗೂ ರಸ್ತೆ ಮೂಲಕ ಗೊತ್ತು ಪಡಿಸಿದ ಸ್ಥಳಗಳಿಗೆ ಸಾಗಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಈ ಕಾರ್ಯಕ್ರಮಗಳನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ಯಾವುದೇ ಸ್ಪಷ್ಟ ನಿರ್ದೇಶನಗಳನ್ನು ನೀಡಿಲ್ಲ, ಇದರಿಂದಾಗಿ ನೌಕರರು ಮತ್ತು ಲಕ್ಷಾಂತರ ಮಕ್ಕಳು ತತ್ತರಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ಎರಡು ದೊಡ್ಡ ಕಾರ್ಯಕ್ರಮಗಳಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಮಿಕರು ಮತ್ತು ಸಹಾಯಕಿಯರು ಹಾಗೂ 29 ಲಕ್ಷಕ್ಕೂ ಹೆಚ್ಚು ಅಡುಗೆಯವರು / ಸಹಾಯಕರು ಅಕ್ಷರಶಃ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ.

ಅವರಲ್ಲಿ ಹೆಚ್ಚಿನವರು ಸಾಂಕ್ರಾಮಿಕ ಸಂಬಂಧಿತ ಕಾರ್ಯಗಳಲ್ಲಿ ರಕ್ಷಣಾತ್ಮಕ ಸಾಧನಗಳಿಲ್ಲದೆ ಕೆಲಸ ಮಾಡಿದ್ದಾರೆ. ಅನೇಕರು ತಮಗೆ ಸಿಗುವ ಅಲ್ಪ ವೇತನವನ್ನು ಪಡೆದಿಲ್ಲ ಹಾಗೂ ಈ ಕಠಿಣ ಪರಿಸ್ಥಿತಿಗಳಲ್ಲಿ ಅವರ  ಬದುಕು ತುಂಬಾ ಕಷ್ಟಕರವಾಗಿದೆ.


ಓದಿ: ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...