Homeಚಳವಳಿನೀರಿನ ಅಭಾವದ ವಿರುದ್ಧದ ಪ್ರತಿಭಟನೆಗೆ ತಡೆಯೊಡ್ಡಿದ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಹೇಳಿದ್ದೇನು ಗೊತ್ತೆ?

ನೀರಿನ ಅಭಾವದ ವಿರುದ್ಧದ ಪ್ರತಿಭಟನೆಗೆ ತಡೆಯೊಡ್ಡಿದ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಹೇಳಿದ್ದೇನು ಗೊತ್ತೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |
ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆಯ ವಿಚಾರದಲ್ಲಿ ಕೆಲಸ ಮಾಡಿರುವ ಸರ್ಕಾರೇತರ ಸಂಘಸಂಸ್ಥೆಗಳೊಂದಿಗೆ ತಮಿಳುನಾಡು ಸರ್ಕಾರ ಕೆಲಸ ಮಾಡಬೇಕು ಮತ್ತು ಸದ್ಯ ತಲೆದೋರಿರುವ ನೀರಿನ ಅಭಾವದ ಸಮಸ್ಯೆಗೆ ಪರಿಹಾರ ಕಂಡು ಹಿಡಿಬೇಕೆಂದು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ. ಜೊತೆಗೆ ನೀರಿನ ಅಭಾವದ ವಿರುದ್ಧದ ಪ್ರತಿಭಟನೆಗೆ ಯಾವುದೇ ಕಾರಣಕ್ಕೂ ತಡೆಯೊಡ್ಡಬೇಡಿ ಬದಲಿಗೆ ಬೆಂಬಲಿಸಿ ಎಂದು ತಾಕೀತು ಮಾಡಿದೆ.

ಜೂನ್ 30 ರಂದು ತಮಿಳುನಾಡಿನ ವಲ್ಲುವಾರುಕೊಟ್ಟಂ ಬಳಿ ನೀರಿನ ಸಮಸ್ಯೆಯ ಕುರಿತು ಪ್ರತಿಭಟನೆ ನಡೆಸಲು ಅರಪ್ಪೋರ್ ಐಕ್ಕಾಮ್ ಎಂಬ ಸಂಘಟನೆ ನಿರ್ಧರಿಸಿತ್ತು. ಆದರೆ ಚನ್ನೈ ಪೊಲೀಸ್ ಕಮಿಷನರ್ ಇದಕ್ಕೆ ಅವಕಾಶ ನೀಡಿರಲಿಲ್ಲ. ಇದನ್ನು ಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ವಿಚಾರಣೆ ನಡೆಸಿದ ಜಸ್ಟೀಸ್ ಎನ್.ಆನಂದ್ ವೆಂಕಟೇಶ್‍ರವರು ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯು ಬರ್ನಿಂಗ್ ಇಶ್ಯೂ ಸುತ್ತಾ ನಡೆಯುತ್ತಿದೆ. ಇದರ ಜಾಗೃತಿ ಸಾರ್ವಜನಿಕರಿಗೆ ಇರಲೇಬೇಕು. ಸರ್ಕಾರವು ನಗರದ ಮೂಲೆ ಮೂಲೆಗೆ ಸಮರ್ಪಕವಾಗಿ ನೀರು ತಲುಪುವಂತೆ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಯಾಕೆ ನೀರಿಗಾಗಿ ಈ ಪರಿಸ್ಥಿತಿ ಬಂತು ಎಂಬುದರ ಕುರಿತು ಚಿಂತಸಬೇಕು. ನಮ್ಮ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿರುವುದರಿಂದ ಮತ್ತು ನಿರೀನ ಸಮರ್ಪಕ ನಿರ್ವಹಣೆ ಮಾಡದಿರುವುದರಿಂದಲೇ ಈ ಸಮಸ್ಯೆ ತಲೆದೋರಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಈ ಸಮಸ್ಯೆಯ ಪರಿಹಾರಕ್ಕಾಗಿ ಜನರಲ್ಲಿ ಜಾಗೃತಿ ಬರುವುದು ಅತ್ಯಗತ್ಯವಾಗಿದೆ. ಇಂತಹ ಸಮಯದಲ್ಲಿ ಪ್ರತಿಭಟನೆಗೆ ತಡೆವೊಡ್ಡುವುದು ಬಿಟ್ಟು ಸರ್ಕಾರ ಸಹಕರಿಸಬೇಕಿದೆ. ಆಗ ಮಾತ್ರ ಇಡೀ ರಾಜ್ಯದ ಜನರಿಗೆ ವಾಸ್ತವವನ್ನು ಅರ್ಥ ಮಾಡಿಸಲು ಸಾಧ್ಯ. ಈ ವಿಚಾರದಲ್ಲಿ ಸಂಘ ಸಂಸ್ಥೆಗಳು ಮಹತ್ವದ ಕೆಲಸ ಮಾಡುತ್ತಿವೆ. ಹಾಗಾಗಿ ಸರ್ಕಾರ ಇನ್ನಿತರ ಸಂಘ ಸಂಸ್ಥೆಗಳ ಜೊತೆಸೇರಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನಪಡಬೇಕೆಂದು ಕೋರ್ಟ್ ಹೇಳಿದೆ.

ಜೂನ್ 20ರಂದೇ ಪ್ರತಿಭಟನೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಪೊಲೀಸ್ ಕಮಿಷನರ್ ಅವಕಾಶ ನಿರಾಕರಿಸಿದ್ದರು. ಹಾಗಾಗಿ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕಾಯ್ತು ಎನ್ನುವ ಅರ್ಜಿದಾರರು, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಮ್ಮ ಸಂವಿಧಾನ ಖಾತ್ರಿಗೊಳಿಸಿದೆ, ಹೋರಾಟ ಮಾಡುವುದು ನಮ್ಮ ಮೂಲಭೂ ಹಕ್ಕು ಎಂದು ಪ್ರತಿಪಾದಿಸಿದ್ದರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....