Homeಮುಖಪುಟಲೈಂಗಿಕ ಸಿಡಿ ಹಗರಣ: ಅಡಕತ್ತರಿಯಲ್ಲಿ ತನಿಖೆ, ಸಚಿವ ಸ್ಥಾನದ ಆಸೆಯಲ್ಲಿ ರಮೇಶ್ ಜಾರಕಿಹೊಳಿ

ಲೈಂಗಿಕ ಸಿಡಿ ಹಗರಣ: ಅಡಕತ್ತರಿಯಲ್ಲಿ ತನಿಖೆ, ಸಚಿವ ಸ್ಥಾನದ ಆಸೆಯಲ್ಲಿ ರಮೇಶ್ ಜಾರಕಿಹೊಳಿ

- Advertisement -
- Advertisement -

ಒಂದು ಕಡೆ ಸುಪ್ರೀಂ ಕೋರ್ಟ್‌ನ ಖ್ಯಾತ ವಕೀಲೆ ಇಂದಿರಾ ಜೈಸಿಂಗ್‌ ಅವರು ‘ಜಾರಕಿಹೊಳಿ ಸಿಡಿ ಹಗರಣ’ದಲ್ಲಿ ಸಂತ್ರಸ್ತೆ ಯುವತಿಯ ಪರ ವಕಾಲತು ನಡೆಸಲು ಒಪ್ಪಿಕೊಂಡಿದ್ದಾರೆ. ಇನ್ನೊಂದು ಕಡೆ ಮಾಜಿ ಸಚಿವ, ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿದ್ದಾರೆ. ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ರಾಜ್ಯ ರಾಜಕಾರಣವನ್ನು ಅಲ್ಲೋಲ ಕಲ್ಲೋಲ ಮಾಡಿದ್ದ ಈ ಲೈಂಗಿಕ ಹಗರಣದಲ್ಲಿ, ನೀರಾವರಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮೇಲೆ ಅತ್ಯಾಚಾರ ಆರೋಪ ಹೊರಿಸಲಾಗಿದೆ. ಇದರಿಂದಾಗಿ ಅವರು ತಮ್ಮ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡುವಂತಾಗಿತ್ತು. ರಮೇಶ್ ಜಾರಕಿಹೊಳಿ ಕೂಡಾ ಯುವತಿಯ ವಿರುದ್ದ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರಕರಣದ ಕಾವು ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರ ಪ್ರಕರಣವನ್ನು SIT ಗೆ ವಹಿಸಿತ್ತು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ಪ್ರಕರಣ ಬೆಳಕಿಗೆ ಬಂದಿದ್ದ ಸಮಯದಲ್ಲಿ ವಿಡಿಯೊದಲ್ಲಿ ಇರುವುದು ತಾನಲ್ಲ ಎಂದು ಹೇಳಿದ್ದ ಜಾರಕಿಹೊಳಿ, ಇತ್ತೀಚೆಗೆ ಎಸ್‌ಐಟಿ ಮುಂದೆ ವಿಡಿಯೊದಲ್ಲಿ ಇರುವುದು ತಾನೆ ಎಂದು ಒಪ್ಪಿಕೊಂಡಿದ್ದರು. ಆದರೆ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಆರೋಪಿ ಜಾರಕಿಹೊಳಿಯನ್ನು ಇದುವರೆಗೂ ಬಂಧಿಸಿಲ್ಲ. ಇದು ಸಂತ್ರಸ್ತೆ ಯುವತಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದರು.

ಕಾನೂನು ತಜ್ಞರು, “ಪ್ರಕರಣದ ತನಿಖೆ ಮುಂದುವರೆಯಬೇಕಾದರೆ, ಅತ್ಯಾಚಾರ ಆರೋಪಿಯ ವೈದ್ಯಕೀಯ ಸಾಕ್ಷ್ಯಗಳನ್ನು ಸಂಗ್ರಹಿಸುವ ಹಾಗೂ ಅತ್ಯಾಚಾರ ಆರೋಪಿಯ ಗಂಡಸುತನದ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿ ಆಗಲೇಬೇಕಿದೆ. ಈ ಕಾರಣದಿಂದ ತನಿಖಾಧಿಕಾರಿಯು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯರ ಮುಂದೆ ಹಾಜರು ಪಡಿಸಬೇಕಿರುತ್ತದೆ. ಆದರೆ ಪ್ರಕರಣವು ರಾಜ್ಯದ ಪ್ರಭಾವಿ ರಾಜಕೀಯ ನಾಯಕನ ವಿರುದ್ದವೇ ಇರುವುದರಿಂದ ಈ ಪ್ರಕ್ರಿಯೆ ನಡೆಯುತ್ತಿಲ್ಲ” ಎಂದು ಅಭಿಪ್ರಾಯಪಡುತ್ತಾರೆ.

ಇನ್ನು ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥರು ರಜೆ ಮೇಲೆ ತೆರಳಿ, ತನಿಖೆ ಸ್ಥಗಿತಗೊಂಡಿರುವುದರಿಂದ, ಹೈಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆಯನ್ನು ಮುಂದುವರೆಸಬೇಕು ಹಾಗೂ ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು.

ಇದನ್ನೂ ಓದಿ: ರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿ ಎಂದು ‘ಒಂಟೆ ಸವಾರಿ’ ಮಾಡಿ ಪ್ರತಿಭಟನೆ

ಈ ನಡುವೆ ರಮೇಶ್ ಜಾರಕಿಹೊಳಿ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ವೇಳೆ ಪ್ರಕರಣವನ್ನು ಮುಗಿಸಲು ಮತ್ತು ತನಗೆ ಸಚಿವ ಸ್ಥಾನ ಕೊಡಿಸುವಂತೆ ಜಾರಕಿಹೊಳಿ ಕೇಳಿಕೊಂಡಿದ್ದು, ಆದರೆ ಫಡ್ನವಿಸ್ ಮಾತ್ರ ಕರ್ನಾಟಕ ರಾಜಕೀಯದಲ್ಲಿ ತಾನು ತಲೆ ಹಾಕುವುದಿಲ್ಲ ಆದರೆ ತಮ್ಮ ಬೇಡಿಕೆಯನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆಂದು ವರದಿಯಾಗಿದೆ.

ರಮೇಶ್ ಜಾರಕಿಹೊಳಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಮ್ಮ ಆಪ್ತರೊಂದಿಗೆ ಹೇಳಿಕೊಂಡಿದ್ದಾರೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ. ಇದು ತನಗೆ ಸಚಿವ ಸ್ಥಾನ ಸಿಗದೆ ಇರುವ ಹಿನ್ನಲೆಯಲ್ಲಿ ಸರ್ಕಾರವನ್ನು ಬೆದರಿಸುತ್ತಿರುವ ತಂತ್ರ ಕೂಡಾ ಆಗಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಇಂದಿರಾ ಜೈಸಿಂಗ್ ವಕಾಲತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...