Homeಮುಖಪುಟಲೈಂಗಿಕ ಸಿಡಿ ಹಗರಣ: ಅಡಕತ್ತರಿಯಲ್ಲಿ ತನಿಖೆ, ಸಚಿವ ಸ್ಥಾನದ ಆಸೆಯಲ್ಲಿ ರಮೇಶ್ ಜಾರಕಿಹೊಳಿ

ಲೈಂಗಿಕ ಸಿಡಿ ಹಗರಣ: ಅಡಕತ್ತರಿಯಲ್ಲಿ ತನಿಖೆ, ಸಚಿವ ಸ್ಥಾನದ ಆಸೆಯಲ್ಲಿ ರಮೇಶ್ ಜಾರಕಿಹೊಳಿ

- Advertisement -
- Advertisement -

ಒಂದು ಕಡೆ ಸುಪ್ರೀಂ ಕೋರ್ಟ್‌ನ ಖ್ಯಾತ ವಕೀಲೆ ಇಂದಿರಾ ಜೈಸಿಂಗ್‌ ಅವರು ‘ಜಾರಕಿಹೊಳಿ ಸಿಡಿ ಹಗರಣ’ದಲ್ಲಿ ಸಂತ್ರಸ್ತೆ ಯುವತಿಯ ಪರ ವಕಾಲತು ನಡೆಸಲು ಒಪ್ಪಿಕೊಂಡಿದ್ದಾರೆ. ಇನ್ನೊಂದು ಕಡೆ ಮಾಜಿ ಸಚಿವ, ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿದ್ದಾರೆ. ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ರಾಜ್ಯ ರಾಜಕಾರಣವನ್ನು ಅಲ್ಲೋಲ ಕಲ್ಲೋಲ ಮಾಡಿದ್ದ ಈ ಲೈಂಗಿಕ ಹಗರಣದಲ್ಲಿ, ನೀರಾವರಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಮೇಲೆ ಅತ್ಯಾಚಾರ ಆರೋಪ ಹೊರಿಸಲಾಗಿದೆ. ಇದರಿಂದಾಗಿ ಅವರು ತಮ್ಮ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡುವಂತಾಗಿತ್ತು. ರಮೇಶ್ ಜಾರಕಿಹೊಳಿ ಕೂಡಾ ಯುವತಿಯ ವಿರುದ್ದ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರಕರಣದ ಕಾವು ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರ ಪ್ರಕರಣವನ್ನು SIT ಗೆ ವಹಿಸಿತ್ತು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ಪ್ರಕರಣ ಬೆಳಕಿಗೆ ಬಂದಿದ್ದ ಸಮಯದಲ್ಲಿ ವಿಡಿಯೊದಲ್ಲಿ ಇರುವುದು ತಾನಲ್ಲ ಎಂದು ಹೇಳಿದ್ದ ಜಾರಕಿಹೊಳಿ, ಇತ್ತೀಚೆಗೆ ಎಸ್‌ಐಟಿ ಮುಂದೆ ವಿಡಿಯೊದಲ್ಲಿ ಇರುವುದು ತಾನೆ ಎಂದು ಒಪ್ಪಿಕೊಂಡಿದ್ದರು. ಆದರೆ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಆರೋಪಿ ಜಾರಕಿಹೊಳಿಯನ್ನು ಇದುವರೆಗೂ ಬಂಧಿಸಿಲ್ಲ. ಇದು ಸಂತ್ರಸ್ತೆ ಯುವತಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದರು.

ಕಾನೂನು ತಜ್ಞರು, “ಪ್ರಕರಣದ ತನಿಖೆ ಮುಂದುವರೆಯಬೇಕಾದರೆ, ಅತ್ಯಾಚಾರ ಆರೋಪಿಯ ವೈದ್ಯಕೀಯ ಸಾಕ್ಷ್ಯಗಳನ್ನು ಸಂಗ್ರಹಿಸುವ ಹಾಗೂ ಅತ್ಯಾಚಾರ ಆರೋಪಿಯ ಗಂಡಸುತನದ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿ ಆಗಲೇಬೇಕಿದೆ. ಈ ಕಾರಣದಿಂದ ತನಿಖಾಧಿಕಾರಿಯು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯರ ಮುಂದೆ ಹಾಜರು ಪಡಿಸಬೇಕಿರುತ್ತದೆ. ಆದರೆ ಪ್ರಕರಣವು ರಾಜ್ಯದ ಪ್ರಭಾವಿ ರಾಜಕೀಯ ನಾಯಕನ ವಿರುದ್ದವೇ ಇರುವುದರಿಂದ ಈ ಪ್ರಕ್ರಿಯೆ ನಡೆಯುತ್ತಿಲ್ಲ” ಎಂದು ಅಭಿಪ್ರಾಯಪಡುತ್ತಾರೆ.

ಇನ್ನು ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥರು ರಜೆ ಮೇಲೆ ತೆರಳಿ, ತನಿಖೆ ಸ್ಥಗಿತಗೊಂಡಿರುವುದರಿಂದ, ಹೈಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆಯನ್ನು ಮುಂದುವರೆಸಬೇಕು ಹಾಗೂ ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದರು.

ಇದನ್ನೂ ಓದಿ: ರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿ ಎಂದು ‘ಒಂಟೆ ಸವಾರಿ’ ಮಾಡಿ ಪ್ರತಿಭಟನೆ

ಈ ನಡುವೆ ರಮೇಶ್ ಜಾರಕಿಹೊಳಿ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ವೇಳೆ ಪ್ರಕರಣವನ್ನು ಮುಗಿಸಲು ಮತ್ತು ತನಗೆ ಸಚಿವ ಸ್ಥಾನ ಕೊಡಿಸುವಂತೆ ಜಾರಕಿಹೊಳಿ ಕೇಳಿಕೊಂಡಿದ್ದು, ಆದರೆ ಫಡ್ನವಿಸ್ ಮಾತ್ರ ಕರ್ನಾಟಕ ರಾಜಕೀಯದಲ್ಲಿ ತಾನು ತಲೆ ಹಾಕುವುದಿಲ್ಲ ಆದರೆ ತಮ್ಮ ಬೇಡಿಕೆಯನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆಂದು ವರದಿಯಾಗಿದೆ.

ರಮೇಶ್ ಜಾರಕಿಹೊಳಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಮ್ಮ ಆಪ್ತರೊಂದಿಗೆ ಹೇಳಿಕೊಂಡಿದ್ದಾರೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ. ಇದು ತನಗೆ ಸಚಿವ ಸ್ಥಾನ ಸಿಗದೆ ಇರುವ ಹಿನ್ನಲೆಯಲ್ಲಿ ಸರ್ಕಾರವನ್ನು ಬೆದರಿಸುತ್ತಿರುವ ತಂತ್ರ ಕೂಡಾ ಆಗಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಇಂದಿರಾ ಜೈಸಿಂಗ್ ವಕಾಲತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...