Homeಅಂತರಾಷ್ಟ್ರೀಯಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

- Advertisement -
- Advertisement -

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಹೇಳಲಾಗಿತ್ತು. ಈಗ, ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನ ಕತ್ತು ಹಿಸುಕಲಾಗಿದೆ ಎಂದು ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ವೀಕ್ಷಿಸಿದ್ದ ವೈದ್ಯರೊಬ್ಬರು ಹೇಳಿಕೆ ನೀಡಿದ್ದಾರೆ.

ಬಾಲಕಿಯರು- ಮಕ್ಕಳು ಸೇರಿದಂತೆ ಹಲವಾರು ಮಹಿಳೆಯರನ್ನು ತನ್ನ ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡಿದ್ದ ಮತ್ತು ಪ್ರಭಾವಿ ನಾಯಕರ ಲೈಂಗಿಕ ತೃಷೆಗಾಗಿ ಹೆಣ್ಣುಮಕ್ಕಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲೈಂಗಿಕ ಅಪರಾಧಿ ಎಪ್ಸ್ಟೀನ್‌ನನ್ನು ಅಮೆರಿಕ ಪೊಲೀಸರು ಬಂಧಿಸಿದ್ದರು. 

ಆತನಿಗೆ, 2017ರಲ್ಲಿ ಶಿಕ್ಷೆ ವಿಧಿಸಿ, ನ್ಯೂಯಾರ್ಕ್‌ನಲ್ಲಿ ಇರಿಸಲಾಗಿತ್ತು. ಆತ, 2019ರ ಆಗಸ್ಟ್‌ 10ರಂದು ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದ. ಇತ್ತೀಚೆಗೆ, ಎಪ್ಸ್ಟೀನ್‌ಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅಮೆರಿಕ ನ್ಯಾಯ ಮಂಡಳಿ ಬಿಡುಗಡೆ ಮಾಡಿದೆ. ಅದರಲ್ಲಿ, ಪ್ರಧಾನಿ ಮೋದಿ ಸೇರಿದಂತೆ ಕೆಲ ರಾಷ್ಟ್ರಗಳ ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿವೆ. ಇದೇ ಹೊತ್ತಿನಲ್ಲಿ ಅತನ ಸಾವಿನ ಕುರಿತಾದ ಚರ್ಚೆಯೂ ನಡೆಯುತ್ತಿದೆ.

ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ಆತನ ಕುಟುಂಬದ ಪರವಾಗಿ ವೀಕ್ಷಿಸಿದ್ದ ವಿಧಿವಿಜ್ಞಾನ ರೋಗಶಾಸ್ತ್ರಜ್ಞ ಡಾ. ಮೈಕೆಲ್ ಬಾಡೆನ್ ಅವರು ದಿ ಟೆಲಿಗ್ರಾಫ್ ಪತ್ರಿಕೆಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ, ಎಪ್ಸ್ಟೀನ್‌ ಆತ್ಮಹತ್ಯೆ ವರದಿಯ ಬಗ್ಗೆ ಅನುಮಾನವನ್ನು ಪುನರುಚ್ಚರಿಸಿದ್ದಾರೆ.

“ಎಪ್ಸ್ಟೀನ್ ನೇಣು ಹಾಕಿಕೊಂಡು ಮೃತಪಟ್ಟಿಲ್ಲ. ಆತನ ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ. ಈಗ ಲಭ್ಯವಿರುವ ಎಲ್ಲ ವಿವರಗಳನ್ನು ಸಮಗ್ರವಾಗಿ ಪರಿಗಣಿಸಿ, ಪರಿಶೀಲಿಸಿ ಆತನ ಸಾವಿನ ನಿಖರ ಕಾರಣದ ಕುರಿತು ಇನ್ನಷ್ಟು ಆಳವಾದ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

2019ರಲ್ಲಿಯೂ ಬಾಡೆನ್‌ ಅವರು ಪರೀಕ್ಷೆಯ ವರದಿಗಳು ಮತ್ತು ಸಾಕ್ಷ್ಯಗಳು ಇದು ಆತ್ಮಹತ್ಯೆಗಿಂತ ಕೊಲೆಯೆಂದು ಸೂಚಿಸುತ್ತದೆ ಎಂದೇ ಹೇಳಿದ್ದರು. ಆರಂಭಿಕ ಪರೀಕ್ಷೆ ವೇಳೆ ಇನ್ನೂ ಹೆಚ್ಚಿನ ಪರೀಕ್ಷೆಗಳ ಅಗತ್ಯವಿದೆ ಎಂದು ಮರಣೋತ್ತರ ಪರೀಕ್ಷೆಯನ್ನು ಬಾಕಿ ಇಡಲಾಗಿತ್ತು. ಆದರೆ, ಕೇವಲ ಐದು ದಿನಗಳಲ್ಲಿಯೇ ಅಂದಿನ ಮುಖ್ಯ ವೈದ್ಯಕೀಯ ಪರೀಕ್ಷಕ ಡಾ. ಬಾರ್ಬರಾ ಸ್ಯಾಂಪ್ಸನ್ ಅವರು ಮರಣ ಪ್ರಮಾಣಪತ್ರದಲ್ಲಿ ಆತ್ಮಹತ್ಯೆ ಎಂದು ದಾಖಲಿಸಿದ್ದರು. ಸ್ಯಾಂಪ್ಸನ್ ಅವರು ಸಂಪೂರ್ಣ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಆ ಸಮಯದಲ್ಲಿ ತಾವು ಹಾಜರಿರಲಿಲ್ಲವೆಂದು ಬಾಡೆನ್‌ ಈಗ ಹೇಳಿದ್ದಾರೆ.

“ಅಧಿಕೃತ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಎಪ್ಸ್ಟೀನ್‌ನ ಕುತ್ತಿಗೆಯಲ್ಲಿ ಮೂರು ಮುರಿತಗಳು ದಾಖಲಾಗಿದ್ದವು. ಥೈರಾಯ್ಡ್ ಕಾರ್ಟಿಲೇಜ್ ಮೇಲೆ ಎರಡು ಮುರಿತ ಕಂಡು ಬಂದಿತ್ತು. ನನ್ನ 50 ವರ್ಷದ ವೃತ್ತಿಜೀವನದಲ್ಲಿ ನ್ಯೂಯಾರ್ಕ್ ಜೈಲಿನ ಖೈದಿಗಳನ್ನು ಸೇರಿದಂತೆ, ನೇಣು ಬಿಗಿದುಕೊಂಡ ಆತ್ಮಹತ್ಯೆ ಪ್ರಕರಣದಲ್ಲಿ ಮೂರು ಕುತ್ತಿಗೆ ಮುರಿತಗಳನ್ನು ಎಂದಿಗೂ ನೋಡಿಲ್ಲ” ಎಂದು ಬಾಡೆನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...