Homeಅಂತರಾಷ್ಟ್ರೀಯಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

- Advertisement -
- Advertisement -

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಹೇಳಲಾಗಿತ್ತು. ಈಗ, ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನ ಕತ್ತು ಹಿಸುಕಲಾಗಿದೆ ಎಂದು ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ವೀಕ್ಷಿಸಿದ್ದ ವೈದ್ಯರೊಬ್ಬರು ಹೇಳಿಕೆ ನೀಡಿದ್ದಾರೆ.

ಬಾಲಕಿಯರು- ಮಕ್ಕಳು ಸೇರಿದಂತೆ ಹಲವಾರು ಮಹಿಳೆಯರನ್ನು ತನ್ನ ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡಿದ್ದ ಮತ್ತು ಪ್ರಭಾವಿ ನಾಯಕರ ಲೈಂಗಿಕ ತೃಷೆಗಾಗಿ ಹೆಣ್ಣುಮಕ್ಕಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲೈಂಗಿಕ ಅಪರಾಧಿ ಎಪ್ಸ್ಟೀನ್‌ನನ್ನು ಅಮೆರಿಕ ಪೊಲೀಸರು ಬಂಧಿಸಿದ್ದರು. 

ಆತನಿಗೆ, 2017ರಲ್ಲಿ ಶಿಕ್ಷೆ ವಿಧಿಸಿ, ನ್ಯೂಯಾರ್ಕ್‌ನಲ್ಲಿ ಇರಿಸಲಾಗಿತ್ತು. ಆತ, 2019ರ ಆಗಸ್ಟ್‌ 10ರಂದು ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದ. ಇತ್ತೀಚೆಗೆ, ಎಪ್ಸ್ಟೀನ್‌ಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅಮೆರಿಕ ನ್ಯಾಯ ಮಂಡಳಿ ಬಿಡುಗಡೆ ಮಾಡಿದೆ. ಅದರಲ್ಲಿ, ಪ್ರಧಾನಿ ಮೋದಿ ಸೇರಿದಂತೆ ಕೆಲ ರಾಷ್ಟ್ರಗಳ ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿವೆ. ಇದೇ ಹೊತ್ತಿನಲ್ಲಿ ಅತನ ಸಾವಿನ ಕುರಿತಾದ ಚರ್ಚೆಯೂ ನಡೆಯುತ್ತಿದೆ.

ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ಆತನ ಕುಟುಂಬದ ಪರವಾಗಿ ವೀಕ್ಷಿಸಿದ್ದ ವಿಧಿವಿಜ್ಞಾನ ರೋಗಶಾಸ್ತ್ರಜ್ಞ ಡಾ. ಮೈಕೆಲ್ ಬಾಡೆನ್ ಅವರು ದಿ ಟೆಲಿಗ್ರಾಫ್ ಪತ್ರಿಕೆಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ, ಎಪ್ಸ್ಟೀನ್‌ ಆತ್ಮಹತ್ಯೆ ವರದಿಯ ಬಗ್ಗೆ ಅನುಮಾನವನ್ನು ಪುನರುಚ್ಚರಿಸಿದ್ದಾರೆ.

“ಎಪ್ಸ್ಟೀನ್ ನೇಣು ಹಾಕಿಕೊಂಡು ಮೃತಪಟ್ಟಿಲ್ಲ. ಆತನ ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ. ಈಗ ಲಭ್ಯವಿರುವ ಎಲ್ಲ ವಿವರಗಳನ್ನು ಸಮಗ್ರವಾಗಿ ಪರಿಗಣಿಸಿ, ಪರಿಶೀಲಿಸಿ ಆತನ ಸಾವಿನ ನಿಖರ ಕಾರಣದ ಕುರಿತು ಇನ್ನಷ್ಟು ಆಳವಾದ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

2019ರಲ್ಲಿಯೂ ಬಾಡೆನ್‌ ಅವರು ಪರೀಕ್ಷೆಯ ವರದಿಗಳು ಮತ್ತು ಸಾಕ್ಷ್ಯಗಳು ಇದು ಆತ್ಮಹತ್ಯೆಗಿಂತ ಕೊಲೆಯೆಂದು ಸೂಚಿಸುತ್ತದೆ ಎಂದೇ ಹೇಳಿದ್ದರು. ಆರಂಭಿಕ ಪರೀಕ್ಷೆ ವೇಳೆ ಇನ್ನೂ ಹೆಚ್ಚಿನ ಪರೀಕ್ಷೆಗಳ ಅಗತ್ಯವಿದೆ ಎಂದು ಮರಣೋತ್ತರ ಪರೀಕ್ಷೆಯನ್ನು ಬಾಕಿ ಇಡಲಾಗಿತ್ತು. ಆದರೆ, ಕೇವಲ ಐದು ದಿನಗಳಲ್ಲಿಯೇ ಅಂದಿನ ಮುಖ್ಯ ವೈದ್ಯಕೀಯ ಪರೀಕ್ಷಕ ಡಾ. ಬಾರ್ಬರಾ ಸ್ಯಾಂಪ್ಸನ್ ಅವರು ಮರಣ ಪ್ರಮಾಣಪತ್ರದಲ್ಲಿ ಆತ್ಮಹತ್ಯೆ ಎಂದು ದಾಖಲಿಸಿದ್ದರು. ಸ್ಯಾಂಪ್ಸನ್ ಅವರು ಸಂಪೂರ್ಣ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಆ ಸಮಯದಲ್ಲಿ ತಾವು ಹಾಜರಿರಲಿಲ್ಲವೆಂದು ಬಾಡೆನ್‌ ಈಗ ಹೇಳಿದ್ದಾರೆ.

“ಅಧಿಕೃತ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಎಪ್ಸ್ಟೀನ್‌ನ ಕುತ್ತಿಗೆಯಲ್ಲಿ ಮೂರು ಮುರಿತಗಳು ದಾಖಲಾಗಿದ್ದವು. ಥೈರಾಯ್ಡ್ ಕಾರ್ಟಿಲೇಜ್ ಮೇಲೆ ಎರಡು ಮುರಿತ ಕಂಡು ಬಂದಿತ್ತು. ನನ್ನ 50 ವರ್ಷದ ವೃತ್ತಿಜೀವನದಲ್ಲಿ ನ್ಯೂಯಾರ್ಕ್ ಜೈಲಿನ ಖೈದಿಗಳನ್ನು ಸೇರಿದಂತೆ, ನೇಣು ಬಿಗಿದುಕೊಂಡ ಆತ್ಮಹತ್ಯೆ ಪ್ರಕರಣದಲ್ಲಿ ಮೂರು ಕುತ್ತಿಗೆ ಮುರಿತಗಳನ್ನು ಎಂದಿಗೂ ನೋಡಿಲ್ಲ” ಎಂದು ಬಾಡೆನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...