Homeಅಂತರಾಷ್ಟ್ರೀಯಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

- Advertisement -
- Advertisement -

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಹೇಳಲಾಗಿತ್ತು. ಈಗ, ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆತನ ಕತ್ತು ಹಿಸುಕಲಾಗಿದೆ ಎಂದು ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ವೀಕ್ಷಿಸಿದ್ದ ವೈದ್ಯರೊಬ್ಬರು ಹೇಳಿಕೆ ನೀಡಿದ್ದಾರೆ.

ಬಾಲಕಿಯರು- ಮಕ್ಕಳು ಸೇರಿದಂತೆ ಹಲವಾರು ಮಹಿಳೆಯರನ್ನು ತನ್ನ ಲೈಂಗಿಕ ಕೃತ್ಯಗಳಿಗೆ ಬಳಸಿಕೊಂಡಿದ್ದ ಮತ್ತು ಪ್ರಭಾವಿ ನಾಯಕರ ಲೈಂಗಿಕ ತೃಷೆಗಾಗಿ ಹೆಣ್ಣುಮಕ್ಕಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಲೈಂಗಿಕ ಅಪರಾಧಿ ಎಪ್ಸ್ಟೀನ್‌ನನ್ನು ಅಮೆರಿಕ ಪೊಲೀಸರು ಬಂಧಿಸಿದ್ದರು. 

ಆತನಿಗೆ, 2017ರಲ್ಲಿ ಶಿಕ್ಷೆ ವಿಧಿಸಿ, ನ್ಯೂಯಾರ್ಕ್‌ನಲ್ಲಿ ಇರಿಸಲಾಗಿತ್ತು. ಆತ, 2019ರ ಆಗಸ್ಟ್‌ 10ರಂದು ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದ. ಇತ್ತೀಚೆಗೆ, ಎಪ್ಸ್ಟೀನ್‌ಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅಮೆರಿಕ ನ್ಯಾಯ ಮಂಡಳಿ ಬಿಡುಗಡೆ ಮಾಡಿದೆ. ಅದರಲ್ಲಿ, ಪ್ರಧಾನಿ ಮೋದಿ ಸೇರಿದಂತೆ ಕೆಲ ರಾಷ್ಟ್ರಗಳ ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿವೆ. ಇದೇ ಹೊತ್ತಿನಲ್ಲಿ ಅತನ ಸಾವಿನ ಕುರಿತಾದ ಚರ್ಚೆಯೂ ನಡೆಯುತ್ತಿದೆ.

ಎಪ್ಸ್ಟೀನ್‌ನ ಮರಣೋತ್ತರ ಪರೀಕ್ಷೆಯನ್ನು ಆತನ ಕುಟುಂಬದ ಪರವಾಗಿ ವೀಕ್ಷಿಸಿದ್ದ ವಿಧಿವಿಜ್ಞಾನ ರೋಗಶಾಸ್ತ್ರಜ್ಞ ಡಾ. ಮೈಕೆಲ್ ಬಾಡೆನ್ ಅವರು ದಿ ಟೆಲಿಗ್ರಾಫ್ ಪತ್ರಿಕೆಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ, ಎಪ್ಸ್ಟೀನ್‌ ಆತ್ಮಹತ್ಯೆ ವರದಿಯ ಬಗ್ಗೆ ಅನುಮಾನವನ್ನು ಪುನರುಚ್ಚರಿಸಿದ್ದಾರೆ.

“ಎಪ್ಸ್ಟೀನ್ ನೇಣು ಹಾಕಿಕೊಂಡು ಮೃತಪಟ್ಟಿಲ್ಲ. ಆತನ ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ. ಈಗ ಲಭ್ಯವಿರುವ ಎಲ್ಲ ವಿವರಗಳನ್ನು ಸಮಗ್ರವಾಗಿ ಪರಿಗಣಿಸಿ, ಪರಿಶೀಲಿಸಿ ಆತನ ಸಾವಿನ ನಿಖರ ಕಾರಣದ ಕುರಿತು ಇನ್ನಷ್ಟು ಆಳವಾದ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು” ಎಂದು ಹೇಳಿದ್ದಾರೆ.

2019ರಲ್ಲಿಯೂ ಬಾಡೆನ್‌ ಅವರು ಪರೀಕ್ಷೆಯ ವರದಿಗಳು ಮತ್ತು ಸಾಕ್ಷ್ಯಗಳು ಇದು ಆತ್ಮಹತ್ಯೆಗಿಂತ ಕೊಲೆಯೆಂದು ಸೂಚಿಸುತ್ತದೆ ಎಂದೇ ಹೇಳಿದ್ದರು. ಆರಂಭಿಕ ಪರೀಕ್ಷೆ ವೇಳೆ ಇನ್ನೂ ಹೆಚ್ಚಿನ ಪರೀಕ್ಷೆಗಳ ಅಗತ್ಯವಿದೆ ಎಂದು ಮರಣೋತ್ತರ ಪರೀಕ್ಷೆಯನ್ನು ಬಾಕಿ ಇಡಲಾಗಿತ್ತು. ಆದರೆ, ಕೇವಲ ಐದು ದಿನಗಳಲ್ಲಿಯೇ ಅಂದಿನ ಮುಖ್ಯ ವೈದ್ಯಕೀಯ ಪರೀಕ್ಷಕ ಡಾ. ಬಾರ್ಬರಾ ಸ್ಯಾಂಪ್ಸನ್ ಅವರು ಮರಣ ಪ್ರಮಾಣಪತ್ರದಲ್ಲಿ ಆತ್ಮಹತ್ಯೆ ಎಂದು ದಾಖಲಿಸಿದ್ದರು. ಸ್ಯಾಂಪ್ಸನ್ ಅವರು ಸಂಪೂರ್ಣ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಆ ಸಮಯದಲ್ಲಿ ತಾವು ಹಾಜರಿರಲಿಲ್ಲವೆಂದು ಬಾಡೆನ್‌ ಈಗ ಹೇಳಿದ್ದಾರೆ.

“ಅಧಿಕೃತ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಎಪ್ಸ್ಟೀನ್‌ನ ಕುತ್ತಿಗೆಯಲ್ಲಿ ಮೂರು ಮುರಿತಗಳು ದಾಖಲಾಗಿದ್ದವು. ಥೈರಾಯ್ಡ್ ಕಾರ್ಟಿಲೇಜ್ ಮೇಲೆ ಎರಡು ಮುರಿತ ಕಂಡು ಬಂದಿತ್ತು. ನನ್ನ 50 ವರ್ಷದ ವೃತ್ತಿಜೀವನದಲ್ಲಿ ನ್ಯೂಯಾರ್ಕ್ ಜೈಲಿನ ಖೈದಿಗಳನ್ನು ಸೇರಿದಂತೆ, ನೇಣು ಬಿಗಿದುಕೊಂಡ ಆತ್ಮಹತ್ಯೆ ಪ್ರಕರಣದಲ್ಲಿ ಮೂರು ಕುತ್ತಿಗೆ ಮುರಿತಗಳನ್ನು ಎಂದಿಗೂ ನೋಡಿಲ್ಲ” ಎಂದು ಬಾಡೆನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...