Homeಮುಖಪುಟಲೈಂಗಿಕ ಕೆಲಸಕ್ಕೆ 'ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೈಂಗಿಕ ಕೆಲಸಕ್ಕೆ ‘ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

"ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದು ಕೋರ್ಟ್ ಹೇಳಿದೆ.

- Advertisement -
- Advertisement -

ಲೈಂಗಿಕ ಕೆಲಸವನ್ನು “ವೃತ್ತಿ” ಎಂದು ಗುರುತಿಸುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ. ಈ ವೃತ್ತಿಯಲ್ಲಿರುವವರು ಘನತೆಯಿಂದ ಬದುಕುವುದಕ್ಕೆ, ಕಾನೂನಿನಡಿಯಲ್ಲಿ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದೆ.

ವಯಸ್ಕ ಮತ್ತು ಒಪ್ಪಿಗೆಯ ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

“ವೃತ್ತಿಯ ಹೊರತಾಗಿಯೂ, ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಗೌರವಯುತವಾದ ಜೀವನ ನಡೆಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಬೇಕಾಗಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ಕೆಲಸಕ್ಕೆ ವೃತ್ತಿ ಮಾನ್ಯತೆ

“ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ. ‘ವಯಸ್ಸು’ ಮತ್ತು ‘ಸಮ್ಮತಿಯ’ ಆಧಾರದ ಮೇಲೆ ಕ್ರಿಮಿನಲ್ ಕಾನೂನು ನಿರ್ಧರಿತವಾಗುತ್ತದೆ. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ ಇದರಲ್ಲಿ ತೊಡಗಿದ್ದಾರೆಂದು ಸ್ಪಷ್ಟವಾದಾಗ, ಪೊಲೀಸರು ಮಧ್ಯಪ್ರವೇಶಿಸುವಂತಿಲ್ಲ ಅಥವಾ ಯಾವುದೇ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳುವಂತಿಲ್ಲ” ಎಂದು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಆದೇಶ ಹೊರಡಿಸಿದೆ.

“ಯಾವುದೇ ವೇಶ್ಯಾಗೃಹದ ಮೇಲೆ ದಾಳಿ ನಡೆದಾಗ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಅಥವಾ ಬಲಿಪಶು ಮಾಡಬಾರದು. ಏಕೆಂದರೆ ಸ್ವಯಂಪ್ರೇರಿತ ಲೈಂಗಿಕ ಕೆಲಸ ಕಾನೂನುಬಾಹಿರವಲ್ಲ. ಆದರೆ ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರವಾಗಿದೆ” ಎಂದು ಕೋರ್ಟ್ ಹೇಳಿದೆ.

ಮಹಿಳೆಯೊಬ್ಬಳು ಲೈಂಗಿಕ ಕಾರ್ಯಕರ್ತೆಯಾಗಿದ್ದಾಳೆಂಬ ಕಾರಣಕ್ಕೆ ಆಕೆಯ ಮಗುವನ್ನು ತಾಯಿಯಿಂದ ಬೇರ್ಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ. “ಮಾನವನ ಸಭ್ಯತೆ ಮತ್ತು ಘನತೆಯ ಮೂಲಭೂತ ರಕ್ಷಣೆಯು ಲೈಂಗಿಕ ಕಾರ್ಯಕರ್ತರು ಹಾಗೂ ಅವರ ಮಕ್ಕಳಿಗೂ ವಿಸ್ತರಿಸುತ್ತದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದಲ್ಲದೆ, ಅಪ್ರಾಪ್ತ ವಯಸ್ಕ ಮಗು ವೇಶ್ಯಾಗೃಹದಲ್ಲಿ ಅಥವಾ ಲೈಂಗಿಕ ಕಾರ್ಯಕರ್ತರೊಂದಿಗೆ ವಾಸಿಸುತ್ತಿರುವುದು ಕಂಡುಬಂದರೆ, ಮಗುವನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಭಾವಿಸಬಾರದು ಎಂದು ಕೋರ್ಟ್ ತಿಳಿಸಿದೆ.

“ಒಂದು ವೇಳೆ ಲೈಂಗಿಕ ಕಾರ್ಯಕರ್ತೆಯು ತನ್ನ ಮಗ/ಮಗಳು ಎಂದು ಹೇಳಿಕೊಂಡರೆ, ಅವರು ಹೇಳುತ್ತಿರುವುದು ನಿಜವೇ ಎಂದು ನಿರ್ಧರಿಸಲು ಪರೀಕ್ಷೆಗಳನ್ನು ಮಾಡಬಹುದು. ನಿಜವಾಗಿದ್ದಲ್ಲಿ ಅಪ್ರಾಪ್ತ ಮಗುವನ್ನು ಬಲವಂತವಾಗಿ ಬೇರ್ಪಡಿಸಬಾರದು” ಎಂದು ನ್ಯಾಯಾಲಯ ಆದೇಶಿಸಿದೆ.

ವೈದ್ಯಕೀಯ-ಕಾನೂನು ಆರೈಕೆ

ವಿಶೇಷವಾಗಿ ಲೈಂಗಿಕ ಸ್ವರೂಪದ ಕ್ರಿಮಿನಲ್ ದೂರು ದಾಖಲಿಸುವ ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ತಾರತಮ್ಯ ಎಸಗಬಾರದು ಎಂದು ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಲೈಂಗಿಕ ಕಾರ್ಯಕರ್ತೆಯರಿಗೆ ತಕ್ಷಣದ ವೈದ್ಯಕೀಯ-ಕಾನೂನು ಆರೈಕೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿರಿ: ‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ…

ಕಾನೂನಿನ ಹೊರತಾಗಿಯೂ, ಟ್ರಾನ್ಸ್‌ಜೆಂಡರ್‌ ಸಮುದಾಯವು ತಾರತಮ್ಯ ಮತ್ತು ನಿಂದನೆಯನ್ನು ಎದುರಿಸುತ್ತಿದೆ ಎಂಬುದನ್ನು ಗಮನಿಸಿರುವ ಸರ್ವೋಚ್ಚ ನ್ಯಾಯಾಲಯ, “ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದಿದೆ.

“ಲೈಂಗಿಕ ಕಾರ್ಯಕರ್ತರ ಗುರುತನ್ನು ಬಹಿರಂಗ ಪಡಿಸಬಾರದು. ಬಂಧನ, ದಾಳಿ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಂದರ್ಭದಲ್ಲಿ ಬಲಿಪಶುಗಳ ಅಥವಾ ಆರೋಪಿಗಳ ಗುರುತನ್ನು ಬಹಿರಂಗಪಡಿಸಲು ಕಾರಣವಾಗುವ ಯಾವುದೇ ಫೋಟೋಗಳನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ ಮಾಧ್ಯಮಗಳು ಹೆಚ್ಚಿನ ಕಾಳಜಿ ವಹಿಸಬೇಕು” ಎಂದು ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಇರುವ ‘ವಾಯೂರಿಸಂ ಕ್ರಿಮಿನಲ್ ಅಪರಾಧ’ವನ್ನು ಕೋರ್ಟ್ ಉಲ್ಲೇಖಿಸಿದೆ.

ಕಾಂಡೋಮ್ ಬಳಕೆಯಂತಹ ಕ್ರಮಗಳನ್ನು ಪೊಲೀಸರು ಲೈಂಗಿಕ ಕಾರ್ಯಕರ್ತರ ‘ಅಪರಾಧ’ದ ಪುರಾವೆಯಾಗಿ ನೋಡುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಕಾನೂನುಗಳನ್ನು ಸುಧಾರಿಸಲು ಲೈಂಗಿಕ ಕಾರ್ಯಕರ್ತರು ಅಥವಾ ಅವರ ಪ್ರತಿನಿಧಿಗಳನ್ನು ಒಳಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...