Homeಮುಖಪುಟಲೈಂಗಿಕ ಕೆಲಸಕ್ಕೆ 'ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೈಂಗಿಕ ಕೆಲಸಕ್ಕೆ ‘ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

"ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದು ಕೋರ್ಟ್ ಹೇಳಿದೆ.

- Advertisement -
- Advertisement -

ಲೈಂಗಿಕ ಕೆಲಸವನ್ನು “ವೃತ್ತಿ” ಎಂದು ಗುರುತಿಸುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ. ಈ ವೃತ್ತಿಯಲ್ಲಿರುವವರು ಘನತೆಯಿಂದ ಬದುಕುವುದಕ್ಕೆ, ಕಾನೂನಿನಡಿಯಲ್ಲಿ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ ಎಂದು ತಿಳಿಸಿದೆ.

ವಯಸ್ಕ ಮತ್ತು ಒಪ್ಪಿಗೆಯ ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಮಧ್ಯಪ್ರವೇಶಿಸಬಾರದು ಅಥವಾ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

“ವೃತ್ತಿಯ ಹೊರತಾಗಿಯೂ, ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಗೌರವಯುತವಾದ ಜೀವನ ನಡೆಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಬೇಕಾಗಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೈಂಗಿಕ ಕೆಲಸಕ್ಕೆ ವೃತ್ತಿ ಮಾನ್ಯತೆ

“ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿದ್ದಾರೆ. ‘ವಯಸ್ಸು’ ಮತ್ತು ‘ಸಮ್ಮತಿಯ’ ಆಧಾರದ ಮೇಲೆ ಕ್ರಿಮಿನಲ್ ಕಾನೂನು ನಿರ್ಧರಿತವಾಗುತ್ತದೆ. ಲೈಂಗಿಕ ಕಾರ್ಯಕರ್ತೆಯರು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ ಇದರಲ್ಲಿ ತೊಡಗಿದ್ದಾರೆಂದು ಸ್ಪಷ್ಟವಾದಾಗ, ಪೊಲೀಸರು ಮಧ್ಯಪ್ರವೇಶಿಸುವಂತಿಲ್ಲ ಅಥವಾ ಯಾವುದೇ ಕ್ರಿಮಿನಲ್ ಕ್ರಮಗಳನ್ನು ತೆಗೆದುಕೊಳ್ಳುವಂತಿಲ್ಲ” ಎಂದು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಆದೇಶ ಹೊರಡಿಸಿದೆ.

“ಯಾವುದೇ ವೇಶ್ಯಾಗೃಹದ ಮೇಲೆ ದಾಳಿ ನಡೆದಾಗ ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಅಥವಾ ಬಲಿಪಶು ಮಾಡಬಾರದು. ಏಕೆಂದರೆ ಸ್ವಯಂಪ್ರೇರಿತ ಲೈಂಗಿಕ ಕೆಲಸ ಕಾನೂನುಬಾಹಿರವಲ್ಲ. ಆದರೆ ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರವಾಗಿದೆ” ಎಂದು ಕೋರ್ಟ್ ಹೇಳಿದೆ.

ಮಹಿಳೆಯೊಬ್ಬಳು ಲೈಂಗಿಕ ಕಾರ್ಯಕರ್ತೆಯಾಗಿದ್ದಾಳೆಂಬ ಕಾರಣಕ್ಕೆ ಆಕೆಯ ಮಗುವನ್ನು ತಾಯಿಯಿಂದ ಬೇರ್ಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ. “ಮಾನವನ ಸಭ್ಯತೆ ಮತ್ತು ಘನತೆಯ ಮೂಲಭೂತ ರಕ್ಷಣೆಯು ಲೈಂಗಿಕ ಕಾರ್ಯಕರ್ತರು ಹಾಗೂ ಅವರ ಮಕ್ಕಳಿಗೂ ವಿಸ್ತರಿಸುತ್ತದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದಲ್ಲದೆ, ಅಪ್ರಾಪ್ತ ವಯಸ್ಕ ಮಗು ವೇಶ್ಯಾಗೃಹದಲ್ಲಿ ಅಥವಾ ಲೈಂಗಿಕ ಕಾರ್ಯಕರ್ತರೊಂದಿಗೆ ವಾಸಿಸುತ್ತಿರುವುದು ಕಂಡುಬಂದರೆ, ಮಗುವನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಭಾವಿಸಬಾರದು ಎಂದು ಕೋರ್ಟ್ ತಿಳಿಸಿದೆ.

“ಒಂದು ವೇಳೆ ಲೈಂಗಿಕ ಕಾರ್ಯಕರ್ತೆಯು ತನ್ನ ಮಗ/ಮಗಳು ಎಂದು ಹೇಳಿಕೊಂಡರೆ, ಅವರು ಹೇಳುತ್ತಿರುವುದು ನಿಜವೇ ಎಂದು ನಿರ್ಧರಿಸಲು ಪರೀಕ್ಷೆಗಳನ್ನು ಮಾಡಬಹುದು. ನಿಜವಾಗಿದ್ದಲ್ಲಿ ಅಪ್ರಾಪ್ತ ಮಗುವನ್ನು ಬಲವಂತವಾಗಿ ಬೇರ್ಪಡಿಸಬಾರದು” ಎಂದು ನ್ಯಾಯಾಲಯ ಆದೇಶಿಸಿದೆ.

ವೈದ್ಯಕೀಯ-ಕಾನೂನು ಆರೈಕೆ

ವಿಶೇಷವಾಗಿ ಲೈಂಗಿಕ ಸ್ವರೂಪದ ಕ್ರಿಮಿನಲ್ ದೂರು ದಾಖಲಿಸುವ ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ತಾರತಮ್ಯ ಎಸಗಬಾರದು ಎಂದು ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಲೈಂಗಿಕ ಕಾರ್ಯಕರ್ತೆಯರಿಗೆ ತಕ್ಷಣದ ವೈದ್ಯಕೀಯ-ಕಾನೂನು ಆರೈಕೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿರಿ: ‘ದ್ವೇಷ ಭಾಷಣ’: ಕೇರಳದ ಮಾಜಿ ಶಾಸಕ ಪಿ ಸಿ ಜಾರ್ಜ್‌ಗೆ 14 ದಿನಗಳ ನ್ಯಾಯಾಂಗ…

ಕಾನೂನಿನ ಹೊರತಾಗಿಯೂ, ಟ್ರಾನ್ಸ್‌ಜೆಂಡರ್‌ ಸಮುದಾಯವು ತಾರತಮ್ಯ ಮತ್ತು ನಿಂದನೆಯನ್ನು ಎದುರಿಸುತ್ತಿದೆ ಎಂಬುದನ್ನು ಗಮನಿಸಿರುವ ಸರ್ವೋಚ್ಚ ನ್ಯಾಯಾಲಯ, “ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರ ವರ್ತನೆ ಸಾಮಾನ್ಯವಾಗಿ ಕ್ರೂರ ಮತ್ತು ಹಿಂಸಾತ್ಮಕವಾಗಿರುತ್ತದೆ” ಎಂದಿದೆ.

“ಲೈಂಗಿಕ ಕಾರ್ಯಕರ್ತರ ಗುರುತನ್ನು ಬಹಿರಂಗ ಪಡಿಸಬಾರದು. ಬಂಧನ, ದಾಳಿ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಂದರ್ಭದಲ್ಲಿ ಬಲಿಪಶುಗಳ ಅಥವಾ ಆರೋಪಿಗಳ ಗುರುತನ್ನು ಬಹಿರಂಗಪಡಿಸಲು ಕಾರಣವಾಗುವ ಯಾವುದೇ ಫೋಟೋಗಳನ್ನು ಪ್ರಕಟಿಸದಂತೆ ಅಥವಾ ಪ್ರಸಾರ ಮಾಡದಂತೆ ಮಾಧ್ಯಮಗಳು ಹೆಚ್ಚಿನ ಕಾಳಜಿ ವಹಿಸಬೇಕು” ಎಂದು ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಇರುವ ‘ವಾಯೂರಿಸಂ ಕ್ರಿಮಿನಲ್ ಅಪರಾಧ’ವನ್ನು ಕೋರ್ಟ್ ಉಲ್ಲೇಖಿಸಿದೆ.

ಕಾಂಡೋಮ್ ಬಳಕೆಯಂತಹ ಕ್ರಮಗಳನ್ನು ಪೊಲೀಸರು ಲೈಂಗಿಕ ಕಾರ್ಯಕರ್ತರ ‘ಅಪರಾಧ’ದ ಪುರಾವೆಯಾಗಿ ನೋಡುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಕಾನೂನುಗಳನ್ನು ಸುಧಾರಿಸಲು ಲೈಂಗಿಕ ಕಾರ್ಯಕರ್ತರು ಅಥವಾ ಅವರ ಪ್ರತಿನಿಧಿಗಳನ್ನು ಒಳಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...