Homeಮುಖಪುಟಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

- Advertisement -
- Advertisement -

‘ಸೆಕ್ಸ್ ವರ್ಕರ್‌ ಒಬ್ಬಳ ಆತ್ಮಕಥನ’ದ ಮೂಲಕ ಪರಿಚಿತರಾಗಿರುವ ಕೇರಳಾದ ಲೇಖಕಿ ನಳಿನಿ ಜಮೀಲಾ ಅವರು ಪ್ರತಿಷ್ಠಿತ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ಕೇರಳ ಸರ್ಕಾರವು ಪ್ರಶಸ್ತಿಗಳನ್ನು ಘೋಷಿಸಿದ್ದು, ವಿಶೇಷ ತೀರ್ಪುಗಾರರ ಪ್ರಶಸ್ತಿಯಡಿಯಲ್ಲಿ ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

‘ರಾಜ್ಯ ಪ್ರಶಸ್ತಿ ನಿಜವಾಗಿಯೂ ಅನಿರೀಕ್ಷಿತವಾದುದ್ದು. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಸಿನಿಮಾಕ್ಕಾಗಿ ವಸ್ತ್ರವಿನ್ಯಾಸವನ್ನು ಮಾಡಿದ್ದೇನೆ. ಈ ಗೌರವವನ್ನು ನನ್ನ ಜೀವನದ ಒಂದು ದೊಡ್ಡ ಸಾಧನೆಯೆಂದು ಗೌರವಿಸುತ್ತೇನೆ” ಎಂದು ಜಮೀಲಾ ಪ್ರಶಸ್ತಿ ಪಡೆದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಅನುಭವಗಳು ವ್ಯಕ್ತಿಯನ್ನು ಧೈರ್ಯಶಾಲಿಯನ್ನಾಗಿ ಮಾಡುತ್ತವೆ. ಜೀವನದಲ್ಲಾದ ಅನಿರೀಕ್ಷಿತ ತಿರುವು, ಲೈಂಗಿಕ ಕಾರ್ಯಕರ್ತೆಯಾಗಿ ಆರಂಭಿಕ ಜೀವನದಿಂದ ಕಲಿತ ಪಾಠಗಳು ಎಲ್ಲಾ ಸಮಸ್ಯೆಗಳ ವಿರುದ್ಧ ಹೋರಾಡಲು ಮತ್ತು ಜೀವನದ ಈ ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

’ಭಾರತಪುಳ’ವು ಮಹಿಳಾ ಕೇಂದ್ರಿತ ಸಿನಿಮಾವಾಗಿದ್ದು, ಮಧ್ಯ ಕೇರಳದ ತ್ರಿಶೂರ್‌ ಜಿಲ್ಲೆಯಿಂದ ಬಂದಿರುವ 33 ವರ್ಷದ ಲೈಂಗಿಕ ಕಾರ್ಯಕರ್ತೆ ಸುಗಂಧಿಯ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಜೆಂಡರ್‌ ಇಷ್ಯೂಗಳನ್ನು ಮುನ್ನೆಲೆಗೆ ತಂದಿದ್ದು, ನಟಿ ಸಿಜಿ ಪ್ರದೀಪ್‌ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

“ಸಿನಿಮಾದ ನಾಯಕಿ ಪಾತ್ರಕ್ಕಾಗಿ ವೇಷಭೂಷಣಗಳನ್ನು ಆರಿಸುವಾಗ, ಅವಳಲ್ಲಿ ನನ್ನನ್ನು ನೋಡಿದ್ದೆ. ಲೈಂಗಿಕ ಕಾರ್ಯಕರ್ತೆಯಾಗಿದ್ದಾಗಿನ ದಿನಗಳವು. ನಾನು ಎಂದಿಗೂ ದುಬಾರಿ ಸೀರೆ ಅಥವಾ ಆಭರಣಗಳನ್ನು ಬಳಸಿಲ್ಲ. ಹಣೆಬೊಟ್ಟು ಇಡುವುದನ್ನು ನಾನು ಇಷ್ಟ ಪಡುವುದಿಲ್ಲ. ನಾನು ಆ ಎಲ್ಲಾ ಗುಣಲಕ್ಷಣಗಳನ್ನು ನಾಯಕಿಯ ದೈಹಿಕ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿಸಲು ಪ್ರಯತ್ನಿಸಿದ್ದೆ” ಎಂದು ಜಮೀಲಾ ತಿಳಿಸಿದ್ದಾರೆ.

ಉಡುಪುಗಳನ್ನು ವಿನ್ಯಾಸಗೊಳಿಸುವಾಗ ಲೈಂಗಿಕ ಕಾರ್ಯಕರ್ತರ ನಡವಳಿಕೆ ದೇಹಭಾಷೆ ಹೇಗಿರಬೇಕು ಎಂಬುದನ್ನು ನಾಯಕಿಗೆ ಹೇಳುತ್ತಿದ್ದಾಗ, ಗತದ ಭಯಾನಕ ನೆನಪುಗಳು ಮರುಕಳಿಸುತ್ತಿದ್ದವು ಎಂದು ನೆನಪಿಸಿಕೊಂಡಿದ್ದಾರೆ.

3ನೇ ತರಗತಿಗೆ ಶಾಲೆ ಬಿಟ್ಟಿದ್ದ ಜಮೀಲಾ ಅವರ ಗಂಡ ಕ್ಯಾನ್ಸರ್‌ನಿಂದ ಸಾವಿಗೀಡಾದರು. ಗಂಡನ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬದ ನಿರ್ವಹಣೆ ಮಾಡಲು ಬೇರೆ ದಾರಿಯಿಲ್ಲದೇ ಅವರು ಲೈಂಗಿಕ ಕಾರ್ಯಕರ್ತೆಯಾಗಿ ವೃತ್ತಿ ಆರಂಭಿಸಿದರು. ಲೈಂಗಿಕ ಕಾರ್ಯಕರ್ತೆಯಾಗಿ ಇವರು ಅನುಭವಿಸಿದ ಪೊಲೀಸರ ದೌರ್ಜನ್ಯ, ಗೂಂಡಾಗಳ ದಾಳಿ, ದೈಹಿಕ ಹಿಂಸೆ ಇವೆಲ್ಲವೂ ಲೈಂಗಿಕ ಕಾರ್ಯಕರ್ತರ ಪರವಾಗಿ ಹೋರಾಡುವಂತೆ ಶಕ್ತಿ ನೀಡಿತು.

2005ರಲ್ಲಿ ವೇಶ್ಯಾವಾಟಿಕೆಯಿಂದ ನಿವೃತ್ತರಾದ ನಳಿನಿ ಅವರು ಅದೇ ವರ್ಷ ‘ಸೆಕ್ಸ್‌ ವರ್ಕರ್‌ ಒಬ್ಬಳ ಆತ್ಮಕಥನ’ವನ್ನು ಪ್ರಕಟಿಸಿದರು. ಈ ಕೃತಿಯು ಇಡೀ ರಾಜ್ಯದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. ವೇಶ್ಯಾವಾಟಿಕೆಯಲ್ಲಿರುವ ಅಸಹಾಯಕ ಸಮುದಾಯಗಳ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಇಂಗ್ಲಿಷ್‌, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಈ ಕೃತಿಯು ಅನುವಾದಗೊಂಡಿದೆ.


ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...