Homeಮುಖಪುಟಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

- Advertisement -
- Advertisement -

‘ಸೆಕ್ಸ್ ವರ್ಕರ್‌ ಒಬ್ಬಳ ಆತ್ಮಕಥನ’ದ ಮೂಲಕ ಪರಿಚಿತರಾಗಿರುವ ಕೇರಳಾದ ಲೇಖಕಿ ನಳಿನಿ ಜಮೀಲಾ ಅವರು ಪ್ರತಿಷ್ಠಿತ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ಕೇರಳ ಸರ್ಕಾರವು ಪ್ರಶಸ್ತಿಗಳನ್ನು ಘೋಷಿಸಿದ್ದು, ವಿಶೇಷ ತೀರ್ಪುಗಾರರ ಪ್ರಶಸ್ತಿಯಡಿಯಲ್ಲಿ ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

‘ರಾಜ್ಯ ಪ್ರಶಸ್ತಿ ನಿಜವಾಗಿಯೂ ಅನಿರೀಕ್ಷಿತವಾದುದ್ದು. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಸಿನಿಮಾಕ್ಕಾಗಿ ವಸ್ತ್ರವಿನ್ಯಾಸವನ್ನು ಮಾಡಿದ್ದೇನೆ. ಈ ಗೌರವವನ್ನು ನನ್ನ ಜೀವನದ ಒಂದು ದೊಡ್ಡ ಸಾಧನೆಯೆಂದು ಗೌರವಿಸುತ್ತೇನೆ” ಎಂದು ಜಮೀಲಾ ಪ್ರಶಸ್ತಿ ಪಡೆದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಅನುಭವಗಳು ವ್ಯಕ್ತಿಯನ್ನು ಧೈರ್ಯಶಾಲಿಯನ್ನಾಗಿ ಮಾಡುತ್ತವೆ. ಜೀವನದಲ್ಲಾದ ಅನಿರೀಕ್ಷಿತ ತಿರುವು, ಲೈಂಗಿಕ ಕಾರ್ಯಕರ್ತೆಯಾಗಿ ಆರಂಭಿಕ ಜೀವನದಿಂದ ಕಲಿತ ಪಾಠಗಳು ಎಲ್ಲಾ ಸಮಸ್ಯೆಗಳ ವಿರುದ್ಧ ಹೋರಾಡಲು ಮತ್ತು ಜೀವನದ ಈ ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

’ಭಾರತಪುಳ’ವು ಮಹಿಳಾ ಕೇಂದ್ರಿತ ಸಿನಿಮಾವಾಗಿದ್ದು, ಮಧ್ಯ ಕೇರಳದ ತ್ರಿಶೂರ್‌ ಜಿಲ್ಲೆಯಿಂದ ಬಂದಿರುವ 33 ವರ್ಷದ ಲೈಂಗಿಕ ಕಾರ್ಯಕರ್ತೆ ಸುಗಂಧಿಯ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಜೆಂಡರ್‌ ಇಷ್ಯೂಗಳನ್ನು ಮುನ್ನೆಲೆಗೆ ತಂದಿದ್ದು, ನಟಿ ಸಿಜಿ ಪ್ರದೀಪ್‌ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

“ಸಿನಿಮಾದ ನಾಯಕಿ ಪಾತ್ರಕ್ಕಾಗಿ ವೇಷಭೂಷಣಗಳನ್ನು ಆರಿಸುವಾಗ, ಅವಳಲ್ಲಿ ನನ್ನನ್ನು ನೋಡಿದ್ದೆ. ಲೈಂಗಿಕ ಕಾರ್ಯಕರ್ತೆಯಾಗಿದ್ದಾಗಿನ ದಿನಗಳವು. ನಾನು ಎಂದಿಗೂ ದುಬಾರಿ ಸೀರೆ ಅಥವಾ ಆಭರಣಗಳನ್ನು ಬಳಸಿಲ್ಲ. ಹಣೆಬೊಟ್ಟು ಇಡುವುದನ್ನು ನಾನು ಇಷ್ಟ ಪಡುವುದಿಲ್ಲ. ನಾನು ಆ ಎಲ್ಲಾ ಗುಣಲಕ್ಷಣಗಳನ್ನು ನಾಯಕಿಯ ದೈಹಿಕ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿಸಲು ಪ್ರಯತ್ನಿಸಿದ್ದೆ” ಎಂದು ಜಮೀಲಾ ತಿಳಿಸಿದ್ದಾರೆ.

ಉಡುಪುಗಳನ್ನು ವಿನ್ಯಾಸಗೊಳಿಸುವಾಗ ಲೈಂಗಿಕ ಕಾರ್ಯಕರ್ತರ ನಡವಳಿಕೆ ದೇಹಭಾಷೆ ಹೇಗಿರಬೇಕು ಎಂಬುದನ್ನು ನಾಯಕಿಗೆ ಹೇಳುತ್ತಿದ್ದಾಗ, ಗತದ ಭಯಾನಕ ನೆನಪುಗಳು ಮರುಕಳಿಸುತ್ತಿದ್ದವು ಎಂದು ನೆನಪಿಸಿಕೊಂಡಿದ್ದಾರೆ.

3ನೇ ತರಗತಿಗೆ ಶಾಲೆ ಬಿಟ್ಟಿದ್ದ ಜಮೀಲಾ ಅವರ ಗಂಡ ಕ್ಯಾನ್ಸರ್‌ನಿಂದ ಸಾವಿಗೀಡಾದರು. ಗಂಡನ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬದ ನಿರ್ವಹಣೆ ಮಾಡಲು ಬೇರೆ ದಾರಿಯಿಲ್ಲದೇ ಅವರು ಲೈಂಗಿಕ ಕಾರ್ಯಕರ್ತೆಯಾಗಿ ವೃತ್ತಿ ಆರಂಭಿಸಿದರು. ಲೈಂಗಿಕ ಕಾರ್ಯಕರ್ತೆಯಾಗಿ ಇವರು ಅನುಭವಿಸಿದ ಪೊಲೀಸರ ದೌರ್ಜನ್ಯ, ಗೂಂಡಾಗಳ ದಾಳಿ, ದೈಹಿಕ ಹಿಂಸೆ ಇವೆಲ್ಲವೂ ಲೈಂಗಿಕ ಕಾರ್ಯಕರ್ತರ ಪರವಾಗಿ ಹೋರಾಡುವಂತೆ ಶಕ್ತಿ ನೀಡಿತು.

2005ರಲ್ಲಿ ವೇಶ್ಯಾವಾಟಿಕೆಯಿಂದ ನಿವೃತ್ತರಾದ ನಳಿನಿ ಅವರು ಅದೇ ವರ್ಷ ‘ಸೆಕ್ಸ್‌ ವರ್ಕರ್‌ ಒಬ್ಬಳ ಆತ್ಮಕಥನ’ವನ್ನು ಪ್ರಕಟಿಸಿದರು. ಈ ಕೃತಿಯು ಇಡೀ ರಾಜ್ಯದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. ವೇಶ್ಯಾವಾಟಿಕೆಯಲ್ಲಿರುವ ಅಸಹಾಯಕ ಸಮುದಾಯಗಳ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಇಂಗ್ಲಿಷ್‌, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಈ ಕೃತಿಯು ಅನುವಾದಗೊಂಡಿದೆ.


ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...