Homeಮುಖಪುಟಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

- Advertisement -
- Advertisement -

‘ಸೆಕ್ಸ್ ವರ್ಕರ್‌ ಒಬ್ಬಳ ಆತ್ಮಕಥನ’ದ ಮೂಲಕ ಪರಿಚಿತರಾಗಿರುವ ಕೇರಳಾದ ಲೇಖಕಿ ನಳಿನಿ ಜಮೀಲಾ ಅವರು ಪ್ರತಿಷ್ಠಿತ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ಕೇರಳ ಸರ್ಕಾರವು ಪ್ರಶಸ್ತಿಗಳನ್ನು ಘೋಷಿಸಿದ್ದು, ವಿಶೇಷ ತೀರ್ಪುಗಾರರ ಪ್ರಶಸ್ತಿಯಡಿಯಲ್ಲಿ ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

‘ರಾಜ್ಯ ಪ್ರಶಸ್ತಿ ನಿಜವಾಗಿಯೂ ಅನಿರೀಕ್ಷಿತವಾದುದ್ದು. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಸಿನಿಮಾಕ್ಕಾಗಿ ವಸ್ತ್ರವಿನ್ಯಾಸವನ್ನು ಮಾಡಿದ್ದೇನೆ. ಈ ಗೌರವವನ್ನು ನನ್ನ ಜೀವನದ ಒಂದು ದೊಡ್ಡ ಸಾಧನೆಯೆಂದು ಗೌರವಿಸುತ್ತೇನೆ” ಎಂದು ಜಮೀಲಾ ಪ್ರಶಸ್ತಿ ಪಡೆದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಅನುಭವಗಳು ವ್ಯಕ್ತಿಯನ್ನು ಧೈರ್ಯಶಾಲಿಯನ್ನಾಗಿ ಮಾಡುತ್ತವೆ. ಜೀವನದಲ್ಲಾದ ಅನಿರೀಕ್ಷಿತ ತಿರುವು, ಲೈಂಗಿಕ ಕಾರ್ಯಕರ್ತೆಯಾಗಿ ಆರಂಭಿಕ ಜೀವನದಿಂದ ಕಲಿತ ಪಾಠಗಳು ಎಲ್ಲಾ ಸಮಸ್ಯೆಗಳ ವಿರುದ್ಧ ಹೋರಾಡಲು ಮತ್ತು ಜೀವನದ ಈ ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

’ಭಾರತಪುಳ’ವು ಮಹಿಳಾ ಕೇಂದ್ರಿತ ಸಿನಿಮಾವಾಗಿದ್ದು, ಮಧ್ಯ ಕೇರಳದ ತ್ರಿಶೂರ್‌ ಜಿಲ್ಲೆಯಿಂದ ಬಂದಿರುವ 33 ವರ್ಷದ ಲೈಂಗಿಕ ಕಾರ್ಯಕರ್ತೆ ಸುಗಂಧಿಯ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಜೆಂಡರ್‌ ಇಷ್ಯೂಗಳನ್ನು ಮುನ್ನೆಲೆಗೆ ತಂದಿದ್ದು, ನಟಿ ಸಿಜಿ ಪ್ರದೀಪ್‌ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

“ಸಿನಿಮಾದ ನಾಯಕಿ ಪಾತ್ರಕ್ಕಾಗಿ ವೇಷಭೂಷಣಗಳನ್ನು ಆರಿಸುವಾಗ, ಅವಳಲ್ಲಿ ನನ್ನನ್ನು ನೋಡಿದ್ದೆ. ಲೈಂಗಿಕ ಕಾರ್ಯಕರ್ತೆಯಾಗಿದ್ದಾಗಿನ ದಿನಗಳವು. ನಾನು ಎಂದಿಗೂ ದುಬಾರಿ ಸೀರೆ ಅಥವಾ ಆಭರಣಗಳನ್ನು ಬಳಸಿಲ್ಲ. ಹಣೆಬೊಟ್ಟು ಇಡುವುದನ್ನು ನಾನು ಇಷ್ಟ ಪಡುವುದಿಲ್ಲ. ನಾನು ಆ ಎಲ್ಲಾ ಗುಣಲಕ್ಷಣಗಳನ್ನು ನಾಯಕಿಯ ದೈಹಿಕ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿಸಲು ಪ್ರಯತ್ನಿಸಿದ್ದೆ” ಎಂದು ಜಮೀಲಾ ತಿಳಿಸಿದ್ದಾರೆ.

ಉಡುಪುಗಳನ್ನು ವಿನ್ಯಾಸಗೊಳಿಸುವಾಗ ಲೈಂಗಿಕ ಕಾರ್ಯಕರ್ತರ ನಡವಳಿಕೆ ದೇಹಭಾಷೆ ಹೇಗಿರಬೇಕು ಎಂಬುದನ್ನು ನಾಯಕಿಗೆ ಹೇಳುತ್ತಿದ್ದಾಗ, ಗತದ ಭಯಾನಕ ನೆನಪುಗಳು ಮರುಕಳಿಸುತ್ತಿದ್ದವು ಎಂದು ನೆನಪಿಸಿಕೊಂಡಿದ್ದಾರೆ.

3ನೇ ತರಗತಿಗೆ ಶಾಲೆ ಬಿಟ್ಟಿದ್ದ ಜಮೀಲಾ ಅವರ ಗಂಡ ಕ್ಯಾನ್ಸರ್‌ನಿಂದ ಸಾವಿಗೀಡಾದರು. ಗಂಡನ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬದ ನಿರ್ವಹಣೆ ಮಾಡಲು ಬೇರೆ ದಾರಿಯಿಲ್ಲದೇ ಅವರು ಲೈಂಗಿಕ ಕಾರ್ಯಕರ್ತೆಯಾಗಿ ವೃತ್ತಿ ಆರಂಭಿಸಿದರು. ಲೈಂಗಿಕ ಕಾರ್ಯಕರ್ತೆಯಾಗಿ ಇವರು ಅನುಭವಿಸಿದ ಪೊಲೀಸರ ದೌರ್ಜನ್ಯ, ಗೂಂಡಾಗಳ ದಾಳಿ, ದೈಹಿಕ ಹಿಂಸೆ ಇವೆಲ್ಲವೂ ಲೈಂಗಿಕ ಕಾರ್ಯಕರ್ತರ ಪರವಾಗಿ ಹೋರಾಡುವಂತೆ ಶಕ್ತಿ ನೀಡಿತು.

2005ರಲ್ಲಿ ವೇಶ್ಯಾವಾಟಿಕೆಯಿಂದ ನಿವೃತ್ತರಾದ ನಳಿನಿ ಅವರು ಅದೇ ವರ್ಷ ‘ಸೆಕ್ಸ್‌ ವರ್ಕರ್‌ ಒಬ್ಬಳ ಆತ್ಮಕಥನ’ವನ್ನು ಪ್ರಕಟಿಸಿದರು. ಈ ಕೃತಿಯು ಇಡೀ ರಾಜ್ಯದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. ವೇಶ್ಯಾವಾಟಿಕೆಯಲ್ಲಿರುವ ಅಸಹಾಯಕ ಸಮುದಾಯಗಳ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಇಂಗ್ಲಿಷ್‌, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಈ ಕೃತಿಯು ಅನುವಾದಗೊಂಡಿದೆ.


ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...