Homeಮುಖಪುಟಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

- Advertisement -
- Advertisement -

‘ಸೆಕ್ಸ್ ವರ್ಕರ್‌ ಒಬ್ಬಳ ಆತ್ಮಕಥನ’ದ ಮೂಲಕ ಪರಿಚಿತರಾಗಿರುವ ಕೇರಳಾದ ಲೇಖಕಿ ನಳಿನಿ ಜಮೀಲಾ ಅವರು ಪ್ರತಿಷ್ಠಿತ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ಕೇರಳ ಸರ್ಕಾರವು ಪ್ರಶಸ್ತಿಗಳನ್ನು ಘೋಷಿಸಿದ್ದು, ವಿಶೇಷ ತೀರ್ಪುಗಾರರ ಪ್ರಶಸ್ತಿಯಡಿಯಲ್ಲಿ ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

‘ರಾಜ್ಯ ಪ್ರಶಸ್ತಿ ನಿಜವಾಗಿಯೂ ಅನಿರೀಕ್ಷಿತವಾದುದ್ದು. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಸಿನಿಮಾಕ್ಕಾಗಿ ವಸ್ತ್ರವಿನ್ಯಾಸವನ್ನು ಮಾಡಿದ್ದೇನೆ. ಈ ಗೌರವವನ್ನು ನನ್ನ ಜೀವನದ ಒಂದು ದೊಡ್ಡ ಸಾಧನೆಯೆಂದು ಗೌರವಿಸುತ್ತೇನೆ” ಎಂದು ಜಮೀಲಾ ಪ್ರಶಸ್ತಿ ಪಡೆದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಅನುಭವಗಳು ವ್ಯಕ್ತಿಯನ್ನು ಧೈರ್ಯಶಾಲಿಯನ್ನಾಗಿ ಮಾಡುತ್ತವೆ. ಜೀವನದಲ್ಲಾದ ಅನಿರೀಕ್ಷಿತ ತಿರುವು, ಲೈಂಗಿಕ ಕಾರ್ಯಕರ್ತೆಯಾಗಿ ಆರಂಭಿಕ ಜೀವನದಿಂದ ಕಲಿತ ಪಾಠಗಳು ಎಲ್ಲಾ ಸಮಸ್ಯೆಗಳ ವಿರುದ್ಧ ಹೋರಾಡಲು ಮತ್ತು ಜೀವನದ ಈ ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

’ಭಾರತಪುಳ’ವು ಮಹಿಳಾ ಕೇಂದ್ರಿತ ಸಿನಿಮಾವಾಗಿದ್ದು, ಮಧ್ಯ ಕೇರಳದ ತ್ರಿಶೂರ್‌ ಜಿಲ್ಲೆಯಿಂದ ಬಂದಿರುವ 33 ವರ್ಷದ ಲೈಂಗಿಕ ಕಾರ್ಯಕರ್ತೆ ಸುಗಂಧಿಯ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಜೆಂಡರ್‌ ಇಷ್ಯೂಗಳನ್ನು ಮುನ್ನೆಲೆಗೆ ತಂದಿದ್ದು, ನಟಿ ಸಿಜಿ ಪ್ರದೀಪ್‌ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

“ಸಿನಿಮಾದ ನಾಯಕಿ ಪಾತ್ರಕ್ಕಾಗಿ ವೇಷಭೂಷಣಗಳನ್ನು ಆರಿಸುವಾಗ, ಅವಳಲ್ಲಿ ನನ್ನನ್ನು ನೋಡಿದ್ದೆ. ಲೈಂಗಿಕ ಕಾರ್ಯಕರ್ತೆಯಾಗಿದ್ದಾಗಿನ ದಿನಗಳವು. ನಾನು ಎಂದಿಗೂ ದುಬಾರಿ ಸೀರೆ ಅಥವಾ ಆಭರಣಗಳನ್ನು ಬಳಸಿಲ್ಲ. ಹಣೆಬೊಟ್ಟು ಇಡುವುದನ್ನು ನಾನು ಇಷ್ಟ ಪಡುವುದಿಲ್ಲ. ನಾನು ಆ ಎಲ್ಲಾ ಗುಣಲಕ್ಷಣಗಳನ್ನು ನಾಯಕಿಯ ದೈಹಿಕ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿಸಲು ಪ್ರಯತ್ನಿಸಿದ್ದೆ” ಎಂದು ಜಮೀಲಾ ತಿಳಿಸಿದ್ದಾರೆ.

ಉಡುಪುಗಳನ್ನು ವಿನ್ಯಾಸಗೊಳಿಸುವಾಗ ಲೈಂಗಿಕ ಕಾರ್ಯಕರ್ತರ ನಡವಳಿಕೆ ದೇಹಭಾಷೆ ಹೇಗಿರಬೇಕು ಎಂಬುದನ್ನು ನಾಯಕಿಗೆ ಹೇಳುತ್ತಿದ್ದಾಗ, ಗತದ ಭಯಾನಕ ನೆನಪುಗಳು ಮರುಕಳಿಸುತ್ತಿದ್ದವು ಎಂದು ನೆನಪಿಸಿಕೊಂಡಿದ್ದಾರೆ.

3ನೇ ತರಗತಿಗೆ ಶಾಲೆ ಬಿಟ್ಟಿದ್ದ ಜಮೀಲಾ ಅವರ ಗಂಡ ಕ್ಯಾನ್ಸರ್‌ನಿಂದ ಸಾವಿಗೀಡಾದರು. ಗಂಡನ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬದ ನಿರ್ವಹಣೆ ಮಾಡಲು ಬೇರೆ ದಾರಿಯಿಲ್ಲದೇ ಅವರು ಲೈಂಗಿಕ ಕಾರ್ಯಕರ್ತೆಯಾಗಿ ವೃತ್ತಿ ಆರಂಭಿಸಿದರು. ಲೈಂಗಿಕ ಕಾರ್ಯಕರ್ತೆಯಾಗಿ ಇವರು ಅನುಭವಿಸಿದ ಪೊಲೀಸರ ದೌರ್ಜನ್ಯ, ಗೂಂಡಾಗಳ ದಾಳಿ, ದೈಹಿಕ ಹಿಂಸೆ ಇವೆಲ್ಲವೂ ಲೈಂಗಿಕ ಕಾರ್ಯಕರ್ತರ ಪರವಾಗಿ ಹೋರಾಡುವಂತೆ ಶಕ್ತಿ ನೀಡಿತು.

2005ರಲ್ಲಿ ವೇಶ್ಯಾವಾಟಿಕೆಯಿಂದ ನಿವೃತ್ತರಾದ ನಳಿನಿ ಅವರು ಅದೇ ವರ್ಷ ‘ಸೆಕ್ಸ್‌ ವರ್ಕರ್‌ ಒಬ್ಬಳ ಆತ್ಮಕಥನ’ವನ್ನು ಪ್ರಕಟಿಸಿದರು. ಈ ಕೃತಿಯು ಇಡೀ ರಾಜ್ಯದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. ವೇಶ್ಯಾವಾಟಿಕೆಯಲ್ಲಿರುವ ಅಸಹಾಯಕ ಸಮುದಾಯಗಳ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಇಂಗ್ಲಿಷ್‌, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಈ ಕೃತಿಯು ಅನುವಾದಗೊಂಡಿದೆ.


ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...