Homeಮುಖಪುಟಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

- Advertisement -
- Advertisement -

‘ಸೆಕ್ಸ್ ವರ್ಕರ್‌ ಒಬ್ಬಳ ಆತ್ಮಕಥನ’ದ ಮೂಲಕ ಪರಿಚಿತರಾಗಿರುವ ಕೇರಳಾದ ಲೇಖಕಿ ನಳಿನಿ ಜಮೀಲಾ ಅವರು ಪ್ರತಿಷ್ಠಿತ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ಕೇರಳ ಸರ್ಕಾರವು ಪ್ರಶಸ್ತಿಗಳನ್ನು ಘೋಷಿಸಿದ್ದು, ವಿಶೇಷ ತೀರ್ಪುಗಾರರ ಪ್ರಶಸ್ತಿಯಡಿಯಲ್ಲಿ ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

‘ರಾಜ್ಯ ಪ್ರಶಸ್ತಿ ನಿಜವಾಗಿಯೂ ಅನಿರೀಕ್ಷಿತವಾದುದ್ದು. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಸಿನಿಮಾಕ್ಕಾಗಿ ವಸ್ತ್ರವಿನ್ಯಾಸವನ್ನು ಮಾಡಿದ್ದೇನೆ. ಈ ಗೌರವವನ್ನು ನನ್ನ ಜೀವನದ ಒಂದು ದೊಡ್ಡ ಸಾಧನೆಯೆಂದು ಗೌರವಿಸುತ್ತೇನೆ” ಎಂದು ಜಮೀಲಾ ಪ್ರಶಸ್ತಿ ಪಡೆದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಅನುಭವಗಳು ವ್ಯಕ್ತಿಯನ್ನು ಧೈರ್ಯಶಾಲಿಯನ್ನಾಗಿ ಮಾಡುತ್ತವೆ. ಜೀವನದಲ್ಲಾದ ಅನಿರೀಕ್ಷಿತ ತಿರುವು, ಲೈಂಗಿಕ ಕಾರ್ಯಕರ್ತೆಯಾಗಿ ಆರಂಭಿಕ ಜೀವನದಿಂದ ಕಲಿತ ಪಾಠಗಳು ಎಲ್ಲಾ ಸಮಸ್ಯೆಗಳ ವಿರುದ್ಧ ಹೋರಾಡಲು ಮತ್ತು ಜೀವನದ ಈ ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

’ಭಾರತಪುಳ’ವು ಮಹಿಳಾ ಕೇಂದ್ರಿತ ಸಿನಿಮಾವಾಗಿದ್ದು, ಮಧ್ಯ ಕೇರಳದ ತ್ರಿಶೂರ್‌ ಜಿಲ್ಲೆಯಿಂದ ಬಂದಿರುವ 33 ವರ್ಷದ ಲೈಂಗಿಕ ಕಾರ್ಯಕರ್ತೆ ಸುಗಂಧಿಯ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಜೆಂಡರ್‌ ಇಷ್ಯೂಗಳನ್ನು ಮುನ್ನೆಲೆಗೆ ತಂದಿದ್ದು, ನಟಿ ಸಿಜಿ ಪ್ರದೀಪ್‌ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

“ಸಿನಿಮಾದ ನಾಯಕಿ ಪಾತ್ರಕ್ಕಾಗಿ ವೇಷಭೂಷಣಗಳನ್ನು ಆರಿಸುವಾಗ, ಅವಳಲ್ಲಿ ನನ್ನನ್ನು ನೋಡಿದ್ದೆ. ಲೈಂಗಿಕ ಕಾರ್ಯಕರ್ತೆಯಾಗಿದ್ದಾಗಿನ ದಿನಗಳವು. ನಾನು ಎಂದಿಗೂ ದುಬಾರಿ ಸೀರೆ ಅಥವಾ ಆಭರಣಗಳನ್ನು ಬಳಸಿಲ್ಲ. ಹಣೆಬೊಟ್ಟು ಇಡುವುದನ್ನು ನಾನು ಇಷ್ಟ ಪಡುವುದಿಲ್ಲ. ನಾನು ಆ ಎಲ್ಲಾ ಗುಣಲಕ್ಷಣಗಳನ್ನು ನಾಯಕಿಯ ದೈಹಿಕ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿಸಲು ಪ್ರಯತ್ನಿಸಿದ್ದೆ” ಎಂದು ಜಮೀಲಾ ತಿಳಿಸಿದ್ದಾರೆ.

ಉಡುಪುಗಳನ್ನು ವಿನ್ಯಾಸಗೊಳಿಸುವಾಗ ಲೈಂಗಿಕ ಕಾರ್ಯಕರ್ತರ ನಡವಳಿಕೆ ದೇಹಭಾಷೆ ಹೇಗಿರಬೇಕು ಎಂಬುದನ್ನು ನಾಯಕಿಗೆ ಹೇಳುತ್ತಿದ್ದಾಗ, ಗತದ ಭಯಾನಕ ನೆನಪುಗಳು ಮರುಕಳಿಸುತ್ತಿದ್ದವು ಎಂದು ನೆನಪಿಸಿಕೊಂಡಿದ್ದಾರೆ.

3ನೇ ತರಗತಿಗೆ ಶಾಲೆ ಬಿಟ್ಟಿದ್ದ ಜಮೀಲಾ ಅವರ ಗಂಡ ಕ್ಯಾನ್ಸರ್‌ನಿಂದ ಸಾವಿಗೀಡಾದರು. ಗಂಡನ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬದ ನಿರ್ವಹಣೆ ಮಾಡಲು ಬೇರೆ ದಾರಿಯಿಲ್ಲದೇ ಅವರು ಲೈಂಗಿಕ ಕಾರ್ಯಕರ್ತೆಯಾಗಿ ವೃತ್ತಿ ಆರಂಭಿಸಿದರು. ಲೈಂಗಿಕ ಕಾರ್ಯಕರ್ತೆಯಾಗಿ ಇವರು ಅನುಭವಿಸಿದ ಪೊಲೀಸರ ದೌರ್ಜನ್ಯ, ಗೂಂಡಾಗಳ ದಾಳಿ, ದೈಹಿಕ ಹಿಂಸೆ ಇವೆಲ್ಲವೂ ಲೈಂಗಿಕ ಕಾರ್ಯಕರ್ತರ ಪರವಾಗಿ ಹೋರಾಡುವಂತೆ ಶಕ್ತಿ ನೀಡಿತು.

2005ರಲ್ಲಿ ವೇಶ್ಯಾವಾಟಿಕೆಯಿಂದ ನಿವೃತ್ತರಾದ ನಳಿನಿ ಅವರು ಅದೇ ವರ್ಷ ‘ಸೆಕ್ಸ್‌ ವರ್ಕರ್‌ ಒಬ್ಬಳ ಆತ್ಮಕಥನ’ವನ್ನು ಪ್ರಕಟಿಸಿದರು. ಈ ಕೃತಿಯು ಇಡೀ ರಾಜ್ಯದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. ವೇಶ್ಯಾವಾಟಿಕೆಯಲ್ಲಿರುವ ಅಸಹಾಯಕ ಸಮುದಾಯಗಳ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಇಂಗ್ಲಿಷ್‌, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಈ ಕೃತಿಯು ಅನುವಾದಗೊಂಡಿದೆ.


ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...