Homeಚಳವಳಿಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು: ಬಿ.ಟಿ ವೆಂಕಟೇಶ್

ಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು: ಬಿ.ಟಿ ವೆಂಕಟೇಶ್

ಲೈಂಗಿಕ ಕಾರ್ಯಕರ್ತೆಯರಿಗೂ ಕಾರ್ಮಿಕ ಕಾನೂನುಗಳ ಅಡಿ ಸೌಲಭ್ಯ ನೀಡಿ, ಉಚಿತ ವಸತಿ, ಶಿಕ್ಷಣ ಸೌಲಭ್ಯ ಕಲ್ಪಿಸಲು ಸಭೆಯಲ್ಲಿ ಆಗ್ರಹಿಸಲಾಯಿತು.

- Advertisement -
- Advertisement -

ಲೈಂಗಿಕ ಕೆಲಸವು ಸಹ ಒಂದು ಕೆಲಸವಾಗಿದೆ ಮತ್ತು ಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು ಎಂದು ಖ್ಯಾತ ವಕೀಲರು ಮತ್ತು ಮಾಜಿ ರಾಜ್ಯ ಸರಕಾರಿ ಅಭಿಯೋಜಕರಾದ ಬಿ.ಟಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ಲೈಂಗಿಕ ಕಾರ್ಯಕರ್ತೆಯರ ಪ್ರಸ್ತುತ ಸಮಸ್ಯೆಗಳ ಕುರಿತು ಬೆಂಗಳೂರಿನ ಎಸ್‌ಸಿಎಂ ಹೌಸ್‌ನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “ಲೈಂಗಿಕ ಕಾರ್ಯಕರ್ತರು ತಮ್ಮ ನ್ಯಾಯಬದ್ಧ ಹಕ್ಕುಗಳಿಗಾಗಿ 25 ವರ್ಷಗಳಿಂದ ಹೋರಾಡುತ್ತಿದ್ದಾರೆ. ಈಗ ಅವರ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಜಾರಿಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ” ಎಂದರು.

ಎಲ್ಲ ಅಂಚಿನಲ್ಲಿರುವ ಸಮುದಾಯಗಳಂತೆ ಲೈಂಗಿಕ ಕಾರ್ಯಕರ್ತೆಯರಿಗೂ ವಸತಿ ಸೌಲಭ್ಯ ಕಲ್ಪಿಸುವ ತುರ್ತು ಅಗತ್ಯವಿದ್ದು, ಲೈಂಗಿಕ ಕಾರ್ಯಕರ್ತೆಯರ ಮಕ್ಕಳಿಗೆ ಉಚಿತ ಮನೆ ಮತ್ತು ಶಿಕ್ಷಣ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಲು ನಾವು ಸಿದ್ಧರಿದ್ದೇವೆ ಎಂದು ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಎಂ.ಜಿ.ಪಾಲಿ ಹೇಳಿದರು.

ಲೈಂಗಿಕ ಕಾರ್ಯಕರ್ತೆಯರನ್ನು ಅಪರಾಧೀಕರಿಸುವ ಅನೈತಿಕ ಕಳ್ಳಸಾಗಣೆ ತಡೆ ಕಾಯಿದೆ (ITPA) ಅನ್ನು ರದ್ದುಗೊಳಿಸಬೇಕು, ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಲೈಂಗಿಕ ಕೆಲಸವನ್ನು ಗುರುತಿಸಿ ಮತ್ತು ಇತರ ಕಾರ್ಮಿಕರಿಗೆ ಲಭ್ಯವಿರುವ ಎಲ್ಲಾ ಹಕ್ಕುಗಳು ಮತ್ತು ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಲಾಯಿತು.

ಸ್ವಂತ ಮನೆ ಹೊಂದಿರದ ಲೈಂಗಿಕ ಕಾರ್ಯಕರ್ತರಿಗೆ ವಸತಿ ಒದಗಿಸುವುದು, ನಿವೃತ್ತ ಲೈಂಗಿಕ ಕಾರ್ಯಕರ್ತರಿಗೆ (40 ವರ್ಷಕ್ಕಿಂತ ಮೇಲ್ಪಟ್ಟವರು) ಪಿಂಚಣಿ ಮತ್ತು ಪರ್ಯಾಯ ಜೀವನೋಪಾಯವನ್ನು ಒದಗಿಸುವುದು, ಲೈಂಗಿಕ ಕಾರ್ಯಕರ್ತೆಯರ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯಗಳು, ಮಕ್ಕಳ ಆರೈಕೆ ಕೇಂದ್ರಗಳು ಮತ್ತು ವಿದ್ಯಾರ್ಥಿವೇತನ ಒದಗಿಸಬೇಕೆಂಬ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.

ಇದನ್ನೂ ಓದಿ: ಲೈಂಗಿಕ ಕೆಲಸಕ್ಕೆ ‘ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸಾಲಿಡಾರಿಟಿ ಫೌಂಡೇಶನ್, ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ ಮತ್ತು ಸಂಗಮ ಸಂಘಟನೆಯಳು ಕಾರ್ಯಕ್ರಮ ಆಯೋಜಿಸಿದ್ದವು. 18 ವಿವಿಧ ಎನ್‌ಜಿಒಗಳು, ಸಿಬಿಒಗಳು, ನಾಗರಿಕ ಸಮಾಜ ಸಂಘಟನೆಗಳು, ಪ್ರಗತಿಪರ ಚಳವಳಿಗಳು, ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಸಮಾಜಕಾರ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶುಕ್ರವಾರ ಸಂಜೆ 6 ಗಂಟೆಗೆ ನಗರದ ಫ್ರೀಂಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...