Homeಕರ್ನಾಟಕ‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ಭಾರತ ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಜೀವನೋಪಾಯವನ್ನು ಆಯ್ಕೆ ಮಾಡುವ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ

- Advertisement -
- Advertisement -

ತಮ್ಮ ವಿರುದ್ಧದ ಪೊಲೀಸ್ ಹಿಂಸಾಚಾರವನ್ನು ವಿರೋಧಿಸಿ ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದ ಲೈಂಗಿಕ ಕಾರ್ಯಕರ್ತರು, ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

‘‘ಒಂದು ಕಡೆ ಮಹಿಳೆಯರನ್ನು ವೈಭವೀಕರಿಸಲಾಗುತ್ತಿದೆ. ಮತ್ತೊಂದೆಡೆ ಲೈಂಗಿಕ ಕಾರ್ಯಕರ್ತರನ್ನು ಪೊಲೀಸರು ಬೆಂಗಳೂರಿನ ಬೀದಿಗಳಲ್ಲಿ ಕ್ರೂರವಾಗಿ ಥಳಿಸುತ್ತಿದ್ದಾರೆ. ಲೈಂಗಿಕ ಕೆಲಸ ಅಪರಾಧ ಎಂಬ ನಂಬಿಕೆಯನ್ನು ಇಲ್ಲವಾಗಿಸುವ ಅವಶ್ಯಕತೆಯಿದೆ. ‘ಲೈಂಗಿಕ ಕೆಲಸ ಅಪರಾಧವಲ್ಲ’ ಎಂದು ಕಾನೂನು ಹೇಳುತ್ತದೆ. ಆದರೆ ಲೈಂಗಿಕ ಕಾರ್ಯಕರ್ತರನ್ನು ಅಪರಾಧೀಕರಿಸುವುದು ಮುಂದುವರಿಯುತ್ತಿದೆ. ನಾವು ಮನುಷ್ಯರಲ್ಲವೆ, ನಮಗೆ ಬದುಕುವ ಹಕ್ಕಿಲ್ಲವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆಗೆ ತನ್ನ ಜೀವನೋಪಾಯವನ್ನು ಆಯ್ಕೆ ಮಾಡುವ ಹಕ್ಕಿದೆ. ಲೈಂಗಿಕ ಕಾರ್ಯಕರ್ತ ಕೆಲಸದಲ್ಲಿರುವ ಮಹಿಳೆಯರೂ ಎಲ್ಲಾ ಕಾರ್ಮಿಕರಂತೆಯೇ. ಸುಪ್ರೀಂ ಕೋರ್ಟ್ ಪ್ರಕಾರ “ಲೈಂಗಿಕ ಕಾರ್ಯಕರ್ತರು ಅಪರಾಧಿಗಳಲ್ಲ, ಆದರೆ ಆರ್ಥಿಕ ಅವಶ್ಯಕತೆ ಮತ್ತು ಸಂದರ್ಭಗಳಿಗೆ ಬಲಿಯಾಗುತ್ತಾರೆ” ಎಂದು ಹೇಳಿದೆ. ಲೈಂಗಿಕ ಕಾರ್ಯಕರ್ತೆಯರ ಮೇಲಿನ ದೌರ್ಜನ್ಯವನ್ನು ನಿಷೇಧಿಸಿ ಕರ್ನಾಟಕ ಪೊಲೀಸ್ ಇಲಾಖೆ 2004 ರಲ್ಲಿ ಸುತ್ತೋಲೆಗಳನ್ನು ಹೊರಡಿಸಿತ್ತು ಎಂದು ಪ್ರತಿಭಟನಾಕಾರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಕಳೆದ ಎರಡು ವರ್ಷಗಳಲ್ಲಿ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ದೈಹಿಕ ಮತ್ತು ಮಾನಸಿಕ ಹಿಂಸೆ ಹೆಚ್ಚುತ್ತಿದೆ. ಲೈಂಗಿಕ ಕಾರ್ಯಕರ್ತೆಯರೊಂದಿಗೆ ಕೆಲಸ ಮಾಡುವ ಸಾಮಾಜಿಕ ಕಾರ್ಯಕರ್ತರನ್ನು ಸಹ ಗುರಿಯಾಗಿಸಲಾಗುತ್ತಿದ್ದು, ತೀವ್ರ ಪೊಲೀಸ್ ಹಿಂಸಾಚಾರ ನಡೆಸಿ, ಸಾರ್ವಜನಿಕವಾಗಿ ಅವಮಾನಿಸಲಾಗುತ್ತಿದೆ. ಆದರೆ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಮತ್ತು ಹಿಂಸಾಚಾರ ನಿತಂತರವಾಗಿ ಮುಂದುವರಿಯುತ್ತಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಪ್ರತಿಭಟನೆ ನಡೆಸಿದ ಲೈಂಗಿಕ ಕಾರ್ಯಕರ್ತೆಯರು, “ಲೈಂಗಿಕ ಕಾರ್ಯಕರ್ತೆಯರು ಮಹಿಳೆಯರಲ್ಲವೇ?
ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ? ಲೈಂಗಿಕ ಕೆಲಸ ಕಾನೂನುಬಾಹಿರವಲ್ಲದಿದ್ದಾಗ, ಲೈಂಗಿಕ ಕಾರ್ಯಕರ್ತರನ್ನ ಮೇಲೆ ಪ್ರತಿದಿನ ಪೊಲೀಸರು ಏಕೆ ಹಲ್ಲೆ ಮಾಡುತ್ತಾರೆ? ಲೈಂಗಿಕ ಕಾರ್ಯಕರ್ತರಿಗೆ ಜೀವನೋಪಾಯವನ್ನು ಗಳಿಸುವ ಹಕ್ಕಿಲ್ಲವೇ? ಲೈಂಗಿಕ ವೃತ್ತಿಯನ್ನು ಆಯ್ದುಕೊಳ್ಳುವಂತಹ ಪರಿಸ್ಥಿತಿಗೆ ದೂಡುವ ಸಾಮಾಜಿಕ ವ್ಯವಸ್ಥೆ ಹಾಗೂ ಅದನ್ನು ಪರಿಹರಿಸದ ರಾಜ್ಯದ ರಾಜಕೀಯ ವ್ಯವಸ್ಥೆಗೆ, ಲೈಂಗಿಕ ಕಾರ್ಯಕರ್ತೆಯರ ಜೀವನೋಪಾಯವನ್ನು ನಿರಾಕರಿಸಲು ಯಾವ ಹಕ್ಕಿದೆ?” ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಾಧನಾ ಮಹಿಳಾ ಸಂಘದ ಕಾರ್ಯದರ್ಶಿ ಗೀತಾ, “ಸಾರ್ವಜನಿಕವಾಗಿಯೆ ಪೊಲೀಸರು ಬೀದಿಗಳಲ್ಲಿ ದೌರ್ಜನ್ಯವನ್ನು ಎಸಗುತ್ತಾರೆ. ಲೈಂಗಿಕ ಕಾಯಕರ್ತೆಯರು ಮಹಿಳೆಯರಲ್ಲವೆ? ಅವರನ್ನು ಮನುಷ್ಯರಂತೆ ಪರಿಗಣಿಸಿ, ಅವರಿಗೂ ಹಕ್ಕುಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...