Homeಕರ್ನಾಟಕ‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ಭಾರತ ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಜೀವನೋಪಾಯವನ್ನು ಆಯ್ಕೆ ಮಾಡುವ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ

- Advertisement -
- Advertisement -

ತಮ್ಮ ವಿರುದ್ಧದ ಪೊಲೀಸ್ ಹಿಂಸಾಚಾರವನ್ನು ವಿರೋಧಿಸಿ ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದ ಲೈಂಗಿಕ ಕಾರ್ಯಕರ್ತರು, ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

‘‘ಒಂದು ಕಡೆ ಮಹಿಳೆಯರನ್ನು ವೈಭವೀಕರಿಸಲಾಗುತ್ತಿದೆ. ಮತ್ತೊಂದೆಡೆ ಲೈಂಗಿಕ ಕಾರ್ಯಕರ್ತರನ್ನು ಪೊಲೀಸರು ಬೆಂಗಳೂರಿನ ಬೀದಿಗಳಲ್ಲಿ ಕ್ರೂರವಾಗಿ ಥಳಿಸುತ್ತಿದ್ದಾರೆ. ಲೈಂಗಿಕ ಕೆಲಸ ಅಪರಾಧ ಎಂಬ ನಂಬಿಕೆಯನ್ನು ಇಲ್ಲವಾಗಿಸುವ ಅವಶ್ಯಕತೆಯಿದೆ. ‘ಲೈಂಗಿಕ ಕೆಲಸ ಅಪರಾಧವಲ್ಲ’ ಎಂದು ಕಾನೂನು ಹೇಳುತ್ತದೆ. ಆದರೆ ಲೈಂಗಿಕ ಕಾರ್ಯಕರ್ತರನ್ನು ಅಪರಾಧೀಕರಿಸುವುದು ಮುಂದುವರಿಯುತ್ತಿದೆ. ನಾವು ಮನುಷ್ಯರಲ್ಲವೆ, ನಮಗೆ ಬದುಕುವ ಹಕ್ಕಿಲ್ಲವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆಗೆ ತನ್ನ ಜೀವನೋಪಾಯವನ್ನು ಆಯ್ಕೆ ಮಾಡುವ ಹಕ್ಕಿದೆ. ಲೈಂಗಿಕ ಕಾರ್ಯಕರ್ತ ಕೆಲಸದಲ್ಲಿರುವ ಮಹಿಳೆಯರೂ ಎಲ್ಲಾ ಕಾರ್ಮಿಕರಂತೆಯೇ. ಸುಪ್ರೀಂ ಕೋರ್ಟ್ ಪ್ರಕಾರ “ಲೈಂಗಿಕ ಕಾರ್ಯಕರ್ತರು ಅಪರಾಧಿಗಳಲ್ಲ, ಆದರೆ ಆರ್ಥಿಕ ಅವಶ್ಯಕತೆ ಮತ್ತು ಸಂದರ್ಭಗಳಿಗೆ ಬಲಿಯಾಗುತ್ತಾರೆ” ಎಂದು ಹೇಳಿದೆ. ಲೈಂಗಿಕ ಕಾರ್ಯಕರ್ತೆಯರ ಮೇಲಿನ ದೌರ್ಜನ್ಯವನ್ನು ನಿಷೇಧಿಸಿ ಕರ್ನಾಟಕ ಪೊಲೀಸ್ ಇಲಾಖೆ 2004 ರಲ್ಲಿ ಸುತ್ತೋಲೆಗಳನ್ನು ಹೊರಡಿಸಿತ್ತು ಎಂದು ಪ್ರತಿಭಟನಾಕಾರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಕಳೆದ ಎರಡು ವರ್ಷಗಳಲ್ಲಿ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ದೈಹಿಕ ಮತ್ತು ಮಾನಸಿಕ ಹಿಂಸೆ ಹೆಚ್ಚುತ್ತಿದೆ. ಲೈಂಗಿಕ ಕಾರ್ಯಕರ್ತೆಯರೊಂದಿಗೆ ಕೆಲಸ ಮಾಡುವ ಸಾಮಾಜಿಕ ಕಾರ್ಯಕರ್ತರನ್ನು ಸಹ ಗುರಿಯಾಗಿಸಲಾಗುತ್ತಿದ್ದು, ತೀವ್ರ ಪೊಲೀಸ್ ಹಿಂಸಾಚಾರ ನಡೆಸಿ, ಸಾರ್ವಜನಿಕವಾಗಿ ಅವಮಾನಿಸಲಾಗುತ್ತಿದೆ. ಆದರೆ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಮತ್ತು ಹಿಂಸಾಚಾರ ನಿತಂತರವಾಗಿ ಮುಂದುವರಿಯುತ್ತಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಪ್ರತಿಭಟನೆ ನಡೆಸಿದ ಲೈಂಗಿಕ ಕಾರ್ಯಕರ್ತೆಯರು, “ಲೈಂಗಿಕ ಕಾರ್ಯಕರ್ತೆಯರು ಮಹಿಳೆಯರಲ್ಲವೇ?
ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ? ಲೈಂಗಿಕ ಕೆಲಸ ಕಾನೂನುಬಾಹಿರವಲ್ಲದಿದ್ದಾಗ, ಲೈಂಗಿಕ ಕಾರ್ಯಕರ್ತರನ್ನ ಮೇಲೆ ಪ್ರತಿದಿನ ಪೊಲೀಸರು ಏಕೆ ಹಲ್ಲೆ ಮಾಡುತ್ತಾರೆ? ಲೈಂಗಿಕ ಕಾರ್ಯಕರ್ತರಿಗೆ ಜೀವನೋಪಾಯವನ್ನು ಗಳಿಸುವ ಹಕ್ಕಿಲ್ಲವೇ? ಲೈಂಗಿಕ ವೃತ್ತಿಯನ್ನು ಆಯ್ದುಕೊಳ್ಳುವಂತಹ ಪರಿಸ್ಥಿತಿಗೆ ದೂಡುವ ಸಾಮಾಜಿಕ ವ್ಯವಸ್ಥೆ ಹಾಗೂ ಅದನ್ನು ಪರಿಹರಿಸದ ರಾಜ್ಯದ ರಾಜಕೀಯ ವ್ಯವಸ್ಥೆಗೆ, ಲೈಂಗಿಕ ಕಾರ್ಯಕರ್ತೆಯರ ಜೀವನೋಪಾಯವನ್ನು ನಿರಾಕರಿಸಲು ಯಾವ ಹಕ್ಕಿದೆ?” ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಾಧನಾ ಮಹಿಳಾ ಸಂಘದ ಕಾರ್ಯದರ್ಶಿ ಗೀತಾ, “ಸಾರ್ವಜನಿಕವಾಗಿಯೆ ಪೊಲೀಸರು ಬೀದಿಗಳಲ್ಲಿ ದೌರ್ಜನ್ಯವನ್ನು ಎಸಗುತ್ತಾರೆ. ಲೈಂಗಿಕ ಕಾಯಕರ್ತೆಯರು ಮಹಿಳೆಯರಲ್ಲವೆ? ಅವರನ್ನು ಮನುಷ್ಯರಂತೆ ಪರಿಗಣಿಸಿ, ಅವರಿಗೂ ಹಕ್ಕುಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...