Homeಕರ್ನಾಟಕ‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ಭಾರತ ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಜೀವನೋಪಾಯವನ್ನು ಆಯ್ಕೆ ಮಾಡುವ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ

- Advertisement -
- Advertisement -

ತಮ್ಮ ವಿರುದ್ಧದ ಪೊಲೀಸ್ ಹಿಂಸಾಚಾರವನ್ನು ವಿರೋಧಿಸಿ ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದ ಲೈಂಗಿಕ ಕಾರ್ಯಕರ್ತರು, ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

‘‘ಒಂದು ಕಡೆ ಮಹಿಳೆಯರನ್ನು ವೈಭವೀಕರಿಸಲಾಗುತ್ತಿದೆ. ಮತ್ತೊಂದೆಡೆ ಲೈಂಗಿಕ ಕಾರ್ಯಕರ್ತರನ್ನು ಪೊಲೀಸರು ಬೆಂಗಳೂರಿನ ಬೀದಿಗಳಲ್ಲಿ ಕ್ರೂರವಾಗಿ ಥಳಿಸುತ್ತಿದ್ದಾರೆ. ಲೈಂಗಿಕ ಕೆಲಸ ಅಪರಾಧ ಎಂಬ ನಂಬಿಕೆಯನ್ನು ಇಲ್ಲವಾಗಿಸುವ ಅವಶ್ಯಕತೆಯಿದೆ. ‘ಲೈಂಗಿಕ ಕೆಲಸ ಅಪರಾಧವಲ್ಲ’ ಎಂದು ಕಾನೂನು ಹೇಳುತ್ತದೆ. ಆದರೆ ಲೈಂಗಿಕ ಕಾರ್ಯಕರ್ತರನ್ನು ಅಪರಾಧೀಕರಿಸುವುದು ಮುಂದುವರಿಯುತ್ತಿದೆ. ನಾವು ಮನುಷ್ಯರಲ್ಲವೆ, ನಮಗೆ ಬದುಕುವ ಹಕ್ಕಿಲ್ಲವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆಗೆ ತನ್ನ ಜೀವನೋಪಾಯವನ್ನು ಆಯ್ಕೆ ಮಾಡುವ ಹಕ್ಕಿದೆ. ಲೈಂಗಿಕ ಕಾರ್ಯಕರ್ತ ಕೆಲಸದಲ್ಲಿರುವ ಮಹಿಳೆಯರೂ ಎಲ್ಲಾ ಕಾರ್ಮಿಕರಂತೆಯೇ. ಸುಪ್ರೀಂ ಕೋರ್ಟ್ ಪ್ರಕಾರ “ಲೈಂಗಿಕ ಕಾರ್ಯಕರ್ತರು ಅಪರಾಧಿಗಳಲ್ಲ, ಆದರೆ ಆರ್ಥಿಕ ಅವಶ್ಯಕತೆ ಮತ್ತು ಸಂದರ್ಭಗಳಿಗೆ ಬಲಿಯಾಗುತ್ತಾರೆ” ಎಂದು ಹೇಳಿದೆ. ಲೈಂಗಿಕ ಕಾರ್ಯಕರ್ತೆಯರ ಮೇಲಿನ ದೌರ್ಜನ್ಯವನ್ನು ನಿಷೇಧಿಸಿ ಕರ್ನಾಟಕ ಪೊಲೀಸ್ ಇಲಾಖೆ 2004 ರಲ್ಲಿ ಸುತ್ತೋಲೆಗಳನ್ನು ಹೊರಡಿಸಿತ್ತು ಎಂದು ಪ್ರತಿಭಟನಾಕಾರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಕಳೆದ ಎರಡು ವರ್ಷಗಳಲ್ಲಿ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ದೈಹಿಕ ಮತ್ತು ಮಾನಸಿಕ ಹಿಂಸೆ ಹೆಚ್ಚುತ್ತಿದೆ. ಲೈಂಗಿಕ ಕಾರ್ಯಕರ್ತೆಯರೊಂದಿಗೆ ಕೆಲಸ ಮಾಡುವ ಸಾಮಾಜಿಕ ಕಾರ್ಯಕರ್ತರನ್ನು ಸಹ ಗುರಿಯಾಗಿಸಲಾಗುತ್ತಿದ್ದು, ತೀವ್ರ ಪೊಲೀಸ್ ಹಿಂಸಾಚಾರ ನಡೆಸಿ, ಸಾರ್ವಜನಿಕವಾಗಿ ಅವಮಾನಿಸಲಾಗುತ್ತಿದೆ. ಆದರೆ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಮತ್ತು ಹಿಂಸಾಚಾರ ನಿತಂತರವಾಗಿ ಮುಂದುವರಿಯುತ್ತಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಪ್ರತಿಭಟನೆ ನಡೆಸಿದ ಲೈಂಗಿಕ ಕಾರ್ಯಕರ್ತೆಯರು, “ಲೈಂಗಿಕ ಕಾರ್ಯಕರ್ತೆಯರು ಮಹಿಳೆಯರಲ್ಲವೇ?
ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ? ಲೈಂಗಿಕ ಕೆಲಸ ಕಾನೂನುಬಾಹಿರವಲ್ಲದಿದ್ದಾಗ, ಲೈಂಗಿಕ ಕಾರ್ಯಕರ್ತರನ್ನ ಮೇಲೆ ಪ್ರತಿದಿನ ಪೊಲೀಸರು ಏಕೆ ಹಲ್ಲೆ ಮಾಡುತ್ತಾರೆ? ಲೈಂಗಿಕ ಕಾರ್ಯಕರ್ತರಿಗೆ ಜೀವನೋಪಾಯವನ್ನು ಗಳಿಸುವ ಹಕ್ಕಿಲ್ಲವೇ? ಲೈಂಗಿಕ ವೃತ್ತಿಯನ್ನು ಆಯ್ದುಕೊಳ್ಳುವಂತಹ ಪರಿಸ್ಥಿತಿಗೆ ದೂಡುವ ಸಾಮಾಜಿಕ ವ್ಯವಸ್ಥೆ ಹಾಗೂ ಅದನ್ನು ಪರಿಹರಿಸದ ರಾಜ್ಯದ ರಾಜಕೀಯ ವ್ಯವಸ್ಥೆಗೆ, ಲೈಂಗಿಕ ಕಾರ್ಯಕರ್ತೆಯರ ಜೀವನೋಪಾಯವನ್ನು ನಿರಾಕರಿಸಲು ಯಾವ ಹಕ್ಕಿದೆ?” ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಾಧನಾ ಮಹಿಳಾ ಸಂಘದ ಕಾರ್ಯದರ್ಶಿ ಗೀತಾ, “ಸಾರ್ವಜನಿಕವಾಗಿಯೆ ಪೊಲೀಸರು ಬೀದಿಗಳಲ್ಲಿ ದೌರ್ಜನ್ಯವನ್ನು ಎಸಗುತ್ತಾರೆ. ಲೈಂಗಿಕ ಕಾಯಕರ್ತೆಯರು ಮಹಿಳೆಯರಲ್ಲವೆ? ಅವರನ್ನು ಮನುಷ್ಯರಂತೆ ಪರಿಗಣಿಸಿ, ಅವರಿಗೂ ಹಕ್ಕುಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...