Homeಕರ್ನಾಟಕ‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

‘ನಾವು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ಭಾರತ ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಜೀವನೋಪಾಯವನ್ನು ಆಯ್ಕೆ ಮಾಡುವ ಹಕ್ಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ

- Advertisement -
- Advertisement -

ತಮ್ಮ ವಿರುದ್ಧದ ಪೊಲೀಸ್ ಹಿಂಸಾಚಾರವನ್ನು ವಿರೋಧಿಸಿ ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದ ಲೈಂಗಿಕ ಕಾರ್ಯಕರ್ತರು, ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

‘‘ಒಂದು ಕಡೆ ಮಹಿಳೆಯರನ್ನು ವೈಭವೀಕರಿಸಲಾಗುತ್ತಿದೆ. ಮತ್ತೊಂದೆಡೆ ಲೈಂಗಿಕ ಕಾರ್ಯಕರ್ತರನ್ನು ಪೊಲೀಸರು ಬೆಂಗಳೂರಿನ ಬೀದಿಗಳಲ್ಲಿ ಕ್ರೂರವಾಗಿ ಥಳಿಸುತ್ತಿದ್ದಾರೆ. ಲೈಂಗಿಕ ಕೆಲಸ ಅಪರಾಧ ಎಂಬ ನಂಬಿಕೆಯನ್ನು ಇಲ್ಲವಾಗಿಸುವ ಅವಶ್ಯಕತೆಯಿದೆ. ‘ಲೈಂಗಿಕ ಕೆಲಸ ಅಪರಾಧವಲ್ಲ’ ಎಂದು ಕಾನೂನು ಹೇಳುತ್ತದೆ. ಆದರೆ ಲೈಂಗಿಕ ಕಾರ್ಯಕರ್ತರನ್ನು ಅಪರಾಧೀಕರಿಸುವುದು ಮುಂದುವರಿಯುತ್ತಿದೆ. ನಾವು ಮನುಷ್ಯರಲ್ಲವೆ, ನಮಗೆ ಬದುಕುವ ಹಕ್ಕಿಲ್ಲವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆಗೆ ತನ್ನ ಜೀವನೋಪಾಯವನ್ನು ಆಯ್ಕೆ ಮಾಡುವ ಹಕ್ಕಿದೆ. ಲೈಂಗಿಕ ಕಾರ್ಯಕರ್ತ ಕೆಲಸದಲ್ಲಿರುವ ಮಹಿಳೆಯರೂ ಎಲ್ಲಾ ಕಾರ್ಮಿಕರಂತೆಯೇ. ಸುಪ್ರೀಂ ಕೋರ್ಟ್ ಪ್ರಕಾರ “ಲೈಂಗಿಕ ಕಾರ್ಯಕರ್ತರು ಅಪರಾಧಿಗಳಲ್ಲ, ಆದರೆ ಆರ್ಥಿಕ ಅವಶ್ಯಕತೆ ಮತ್ತು ಸಂದರ್ಭಗಳಿಗೆ ಬಲಿಯಾಗುತ್ತಾರೆ” ಎಂದು ಹೇಳಿದೆ. ಲೈಂಗಿಕ ಕಾರ್ಯಕರ್ತೆಯರ ಮೇಲಿನ ದೌರ್ಜನ್ಯವನ್ನು ನಿಷೇಧಿಸಿ ಕರ್ನಾಟಕ ಪೊಲೀಸ್ ಇಲಾಖೆ 2004 ರಲ್ಲಿ ಸುತ್ತೋಲೆಗಳನ್ನು ಹೊರಡಿಸಿತ್ತು ಎಂದು ಪ್ರತಿಭಟನಾಕಾರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಕಳೆದ ಎರಡು ವರ್ಷಗಳಲ್ಲಿ, ಲೈಂಗಿಕ ಕಾರ್ಯಕರ್ತೆಯರ ವಿರುದ್ಧ ದೈಹಿಕ ಮತ್ತು ಮಾನಸಿಕ ಹಿಂಸೆ ಹೆಚ್ಚುತ್ತಿದೆ. ಲೈಂಗಿಕ ಕಾರ್ಯಕರ್ತೆಯರೊಂದಿಗೆ ಕೆಲಸ ಮಾಡುವ ಸಾಮಾಜಿಕ ಕಾರ್ಯಕರ್ತರನ್ನು ಸಹ ಗುರಿಯಾಗಿಸಲಾಗುತ್ತಿದ್ದು, ತೀವ್ರ ಪೊಲೀಸ್ ಹಿಂಸಾಚಾರ ನಡೆಸಿ, ಸಾರ್ವಜನಿಕವಾಗಿ ಅವಮಾನಿಸಲಾಗುತ್ತಿದೆ. ಆದರೆ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಮತ್ತು ಹಿಂಸಾಚಾರ ನಿತಂತರವಾಗಿ ಮುಂದುವರಿಯುತ್ತಿದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

ಪ್ರತಿಭಟನೆ ನಡೆಸಿದ ಲೈಂಗಿಕ ಕಾರ್ಯಕರ್ತೆಯರು, “ಲೈಂಗಿಕ ಕಾರ್ಯಕರ್ತೆಯರು ಮಹಿಳೆಯರಲ್ಲವೇ?
ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ? ಲೈಂಗಿಕ ಕೆಲಸ ಕಾನೂನುಬಾಹಿರವಲ್ಲದಿದ್ದಾಗ, ಲೈಂಗಿಕ ಕಾರ್ಯಕರ್ತರನ್ನ ಮೇಲೆ ಪ್ರತಿದಿನ ಪೊಲೀಸರು ಏಕೆ ಹಲ್ಲೆ ಮಾಡುತ್ತಾರೆ? ಲೈಂಗಿಕ ಕಾರ್ಯಕರ್ತರಿಗೆ ಜೀವನೋಪಾಯವನ್ನು ಗಳಿಸುವ ಹಕ್ಕಿಲ್ಲವೇ? ಲೈಂಗಿಕ ವೃತ್ತಿಯನ್ನು ಆಯ್ದುಕೊಳ್ಳುವಂತಹ ಪರಿಸ್ಥಿತಿಗೆ ದೂಡುವ ಸಾಮಾಜಿಕ ವ್ಯವಸ್ಥೆ ಹಾಗೂ ಅದನ್ನು ಪರಿಹರಿಸದ ರಾಜ್ಯದ ರಾಜಕೀಯ ವ್ಯವಸ್ಥೆಗೆ, ಲೈಂಗಿಕ ಕಾರ್ಯಕರ್ತೆಯರ ಜೀವನೋಪಾಯವನ್ನು ನಿರಾಕರಿಸಲು ಯಾವ ಹಕ್ಕಿದೆ?” ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಾಧನಾ ಮಹಿಳಾ ಸಂಘದ ಕಾರ್ಯದರ್ಶಿ ಗೀತಾ, “ಸಾರ್ವಜನಿಕವಾಗಿಯೆ ಪೊಲೀಸರು ಬೀದಿಗಳಲ್ಲಿ ದೌರ್ಜನ್ಯವನ್ನು ಎಸಗುತ್ತಾರೆ. ಲೈಂಗಿಕ ಕಾಯಕರ್ತೆಯರು ಮಹಿಳೆಯರಲ್ಲವೆ? ಅವರನ್ನು ಮನುಷ್ಯರಂತೆ ಪರಿಗಣಿಸಿ, ಅವರಿಗೂ ಹಕ್ಕುಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...