HomeಅಂಕಣಗಳುSIRSIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

- Advertisement -
- Advertisement -

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಿ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದೆ.

ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ಸಾಮಾಜಿಕವಾಗಿ ವಂಚಿತ ಸಮುದಾಯಗಳಿಗೆ ಸೇರಿದವರಾಗಿದ್ದು, ಗುರುತಿನ ಮತ್ತು ವಾಸಸ್ಥಳದ ದಾಖಲೆಗಳನ್ನು ಪಡೆಯಲು ಹಾಗೂ ಅವುಗಳನ್ನು ನವೀಕರಿಸಲು ಗಮನಾರ್ಹ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಂಸ್ಥೆಯು ತನ್ನ ಪತ್ರದಲ್ಲಿ ತಿಳಿಸಿದೆ.

ಇವರಲ್ಲಿ ಅನೇಕರು ವಲಸಿಗರಾಗಿದ್ದು, ಕೊಳಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೆ, ಸ್ಥಳಾಂತರಿಸುವಿಕೆ ಅಥವಾ ಸಾಮಾಜಿಕ ಕಳಂಕದ ಕಾರಣದಿಂದಾಗಿ ಅವರು ಪದೇ ಪದೇ ವಾಸಸ್ಥಳವನ್ನು ಬದಲಾಯಿಸುತ್ತಿರುತ್ತಾರೆ ಮತ್ತು ತಮ್ಮ ಕುಟುಂಬಗಳೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಪರಿಸ್ಥಿತಿಗಳಿಂದಾಗಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿಯಲ್ಲಿ ಅಗತ್ಯವಿರುವ ದಾಖಲಾತಿ ನಿಯಮಗಳನ್ನು ಪೂರೈಸುವುದು ಲೈಂಗಿಕ ಕಾರ್ಯಕರ್ತೆಯರಿಗೆ ಕಷ್ಟಕರವಾಗಿದೆ ಎಂದು ಪತ್ರವು ವಿವರಿಸಿದೆ.

ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ತಮ್ಮ ಪೋಷಕರೊಂದಿಗೆ ಸಂಬಂಧವನ್ನು ಸ್ಥಾಪಿಸುವ ಯಾವುದೇ ದಾಖಲೆಗಳನ್ನು ಹೊಂದಿರುವುದಿಲ್ಲ ಎಂದು ಹೇಳಿರುವ ಸಂಸ್ಥೆ, ಪೋಷಕರು ಅಥವಾ ಮಕ್ಕಳ ಮ್ಯಾಪಿಂಗ್ (ಸಂಬಂಧದ ಕೊಂಡಿ ಜೋಡಿಸುವಿಕೆ) ಅಗತ್ಯತೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ತಮ್ಮ ಪೋಷಕರೊಂದಿಗೆ ಸಂಬಂಧವನ್ನು ಸ್ಥಾಪಿಸುವ ದಾಖಲೆಗಳನ್ನು ಹೊಂದಿಲ್ಲದಿರಬಹುದು ಅಥವಾ ಅವರು ಹಲವು ವರ್ಷಗಳಿಂದ ತಮ್ಮ ಕುಟುಂಬಗಳಿಂದ ದೂರ ವಾಸಿಸುತ್ತಿರಬಹುದು. ಅದೇ ರೀತಿ, ಅವರ ಮಕ್ಕಳೂ ಸಹ ಪರಿಶೀಲನೆಗೆ ಅಪೇಕ್ಷಿತ ರೀತಿಯಲ್ಲಿ ಪೋಷಕರ ಸಂಬಂಧವನ್ನು ಸಾಬೀತುಪಡಿಸುವ ದಾಖಲೆಗಳನ್ನು ಹೊಂದಿಲ್ಲದಿರಬಹುದು. ಕೆಲವು ಸಂದರ್ಭಗಳಲ್ಲಿ, ಮಕ್ಕಳನ್ನು ಸಂಬಂಧಿಕರು, ಪೋಷಕರು, ಸಮುದಾಯದ ಸದಸ್ಯರು ಅಥವಾ ಸಾಂಸ್ಥಿಕ ಆರೈಕೆಯಲ್ಲಿ ಬೆಳೆಸಲಾಗಿರುತ್ತದೆ, ಇದು ಸಾಂಪ್ರದಾಯಿಕ ಕೌಟುಂಬಿಕ ದಾಖಲಾತಿಯನ್ನು ಕಷ್ಟಕರವಾಗಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಅನೇಕ ಲೈಂಗಿಕ ಕಾರ್ಯಕರ್ತೆಯರ ಪೋಷಕರು ಮರಣ ಹೊಂದಿದ್ದಾರೆ ಅಥವಾ ಅವರಿಗೆ ತಮ್ಮ ಪೋಷಕರ ಪೂರ್ಣ ಕಾನೂನಾತ್ಮಕ ಹೆಸರುಗಳು, ಜನ್ಮಸ್ಥಳ ಅಥವಾ ಚುನಾವಣಾ ಇತಿಹಾಸ ತಿಳಿದಿಲ್ಲ ಎಂದು ಸಂಸ್ಥೆಯು ತಿಳಿಸಿದೆ. ಅನೇಕ ಸಂದರ್ಭಗಳಲ್ಲಿ, ಕೌಟುಂಬಿಕ ಸಂಬಂಧಗಳು ಕಡಿತಗೊಂಡಿವೆ ಅಥವಾ ಅದಕ್ಕೆ ಸಂಬಂಧಿಸಿದ ದಾಖಲೆಗಳು ಎಂದಿಗೂ ಅಸ್ತಿತ್ವದಲ್ಲಿಲ್ಲ ಎಂದು ಹೇಳಿರುವ ಸಂಸ್ಥೆಯು, ಇಂತಹ ವ್ಯಕ್ತಿಗಳು ಹಿಂದಿನ ಮತದಾರರ ಪಟ್ಟಿಗಳೊಂದಿಗೆ ಕೌಟುಂಬಿಕ ಕೊಂಡಿಯನ್ನು ಸಾಬೀತುಪಡಿಸಬೇಕೆಂದು ನಿರೀಕ್ಷಿಸುವುದು ಅವಾಸ್ತವಿಕವಾಗಿದೆ ಎಂದು ಪತ್ರದಲ್ಲಿ ಸೇರಿಸಿದೆ.

ಈ ಪರಿಸ್ಥಿತಿಗಳು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಅಪಾಯವನ್ನು ಉಂಟುಮಾಡುತ್ತವೆ ಎಂದು ವಾದಿಸಿರುವ ಪತ್ರವು, ಇಂತಹ ಹೊರಗಿಡುವಿಕೆಯು ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವ ಚುನಾವಣಾ ಆಯೋಗದ ಬದ್ಧತೆಯನ್ನು ಕುಂಠಿತಗೊಳಿಸುತ್ತದೆ ಎಂದು ತಿಳಿಸಿದೆ.

“ಬುದ್ಧದೇವ್ ಕರ್ಮಾಕರ್ V/S ಪಶ್ಚಿಮ ಬಂಗಾಳ ಸರ್ಕಾರ’ ಮತ್ತು ‘ಪ್ರಜ್ವಲ V/S ಭಾರತ ಸರ್ಕಾರ’ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ಸಂಸ್ಥೆಯು ಉಲ್ಲೇಖಿಸಿದೆ. ಈ ತೀರ್ಪುಗಳಲ್ಲಿ ನ್ಯಾಯಾಲಯವು ಮಾನವ ಕಳ್ಳಸಾಗಣೆ (ಟ್ರಾಫಿಕಿಂಗ್) ಮತ್ತು ಒಪ್ಪಿಗೆಯ ಮೇರೆಗೆ ವಯಸ್ಕರು ನಡೆಸುವ ಲೈಂಗಿಕ ವೃತ್ತಿಯ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸಿದೆ ಹಾಗೂ ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕರ ಘನತೆ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಮಾನ್ಯ ಮಾಡಿದೆ ಎಂದು ಹೇಳಿದೆ.

ಸಾಮಾಜಿಕ ಕಳಂಕ, ವಲಸೆ, ಕೌಟುಂಬಿಕ ಪ್ರತ್ಯೇಕತೆ ಮತ್ತು ಪೋಷಕರ ಸಂಬಂಧವನ್ನು ಸಾಬೀತುಪಡಿಸುವ ದಾಖಲೆಗಳ ಕೊರತೆಯನ್ನು ಗಣನೆಗೆ ತೆಗೆದುಕೊಂಡು ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಜಾರಿಗೊಳಿಸಬೇಕು ಎಂದು ಸಂಸ್ಥೆಯು ಅಧಿಕಾರಿಗಳನ್ನು ಒತ್ತಾಯಿಸಿದೆ.

ಚುನಾವಣಾ ಅಧಿಕಾರಿಗಳು ದುರ್ಬಲ ಮತ್ತು ವಂಚಿತ ವರ್ಗದವರಿಗಾಗಿ ವಿಶೇಷ ಕ್ರಮಗಳನ್ನು ಅಳವಡಿಸಿಕೊಂಡಿರುವ ಇತರ ರಾಜ್ಯಗಳ ಉದಾಹರಣೆಗಳನ್ನು ಸಹ ಪತ್ರದಲ್ಲಿ ಎತ್ತಿ ತೋರಿಸಲಾಗಿದೆ.

ಎಲ್ಲಾ ಚುನಾವಣಾ ನೋಂದಣಾಧಿಕಾರಿಗಳು (ಇಆರ್‌ಒಗಳು), ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು (ಎಇಆರ್‌ಒಗಳು) ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒಗಳು) ಈ ಕೆಳಗಿನ ಸೂಚನೆಗಳನ್ನು ನೀಡುವಂತೆ ಸಂಸ್ಥೆಯು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ:

  1. ಪೋಷಕರು ಅಥವಾ ಮಕ್ಕಳ ಮ್ಯಾಪಿಂಗ್ (ಸಂಬಂಧದ ಕೊಂಡಿ ಜೋಡಿಸುವಿಕೆ) ಇಲ್ಲದಿರುವುದನ್ನು, ಇತರ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಮತದಾರರನ್ನು ಹೊರಗಿಡಲು ಒಂದು ಕಾರಣವಾಗಿ ಮಾಡಬಾರದು.
  2. ಕೌಟುಂಬಿಕ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳು ಲಭ್ಯವಿಲ್ಲದಿದ್ದಲ್ಲಿ, ಪರ್ಯಾಯ ದಾಖಲೆಗಳು ಮತ್ತು ಕ್ಷೇತ್ರ ಮಟ್ಟದ ಪರಿಷ್ಕರಣೆ (ಫೀಲ್ಡ್ ವೆರಿಫಿಕೇಶನ್) ವಿಧಾನಗಳನ್ನು ಅಂಗೀಕರಿಸಬೇಕು. ಇಂತಹ ಪರ್ಯಾಯ ಪರಿಶೀಲನೆಗಾಗಿ ಹಿಂದಿನ ಚುನಾವಣಾ ದಾಖಲೆಗಳು, ಎಪಿಕ್ (ಮತದಾರರ ಗುರುತಿನ ಚೀಟಿ), ಸರ್ಕಾರಿ ಯೋಜನೆಗಳ ಅಡಿಯಲ್ಲಿನ ದಾಖಲೆಗಳು, ಹಾಗೆಯೇ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಅಥವಾ ನೋಂದಾಯಿತ ಸಮುದಾಯ ಆಧಾರಿತ ಸಂಸ್ಥೆಗಳು (ಸಿಬಿಒಗಳು) ನೀಡಿರುವ ಗುರುತಿನ ಅಥವಾ ವಾಸಸ್ಥಳದ ಪ್ರಮಾಣಪತ್ರಗಳು ಅಥವಾ ಪರಿಶೀಲನಾ ಪತ್ರಗಳನ್ನು ಒಳಗೊಂಡಿರಬಹುದು.
  3. ಪರಿಶೀಲನಾ ಪ್ರಕ್ರಿಯೆಯ ಸಂದರ್ಭದಲ್ಲಿ, ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಮಹಿಳೆಯರು, ಅವರ ಮಕ್ಕಳು ಮತ್ತು ಇತರ ದುರ್ಬಲ ವರ್ಗದವರ ವಿಶೇಷ ಪರಿಸ್ಥಿತಿಗಳಿಗೆ ಸೂಕ್ತ ಪರಿಗಣನೆ ನೀಡಬೇಕು.
  4. ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಾಮಾಜಿಕ ಕಳಂಕ, ತಾರತಮ್ಯ ಮತ್ತು ದಾಖಲಾತಿ ಸಂಬಂಧಿತ ಅಡೆತಡೆಗಳ ಕುರಿತು ಚುನಾವಣಾ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಸಂವೇದನಾಶೀಲತಾ ತರಬೇತಿಯನ್ನು (ಸೆನ್ಸಿಟೈಸೇಶನ್ ಟ್ರೈನಿಂಗ್) ಆಯೋಜಿಸಬೇಕು.
  5. ಕುಟುಂಬದ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳ ಕೊರತೆಯಿಂದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗದ ಅಪಾಯದಲ್ಲಿರುವ ದುರ್ಬಲ ವರ್ಗದ ಮತದಾರರಿಗಾಗಿ ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು (ಗ್ರೀವೆನ್ಸ್ ರಿಡ್ರೆಸಲ್ ಮೆಕಾನಿಸಂ) ಸ್ಥಾಪಿಸಬೇಕು.
  6. ಮತದಾರರ ಪರಿಶೀಲನೆ ಮತ್ತು ಸೇರ್ಪಡೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಮುದಾಯ ಆಧಾರಿತ ಸಂಸ್ಥೆಗಳು ಮತ್ತು ನಾಗರಿಕ ಸಮಾಜದ ಸಂಸ್ಥೆಗಳೊಂದಿಗೆ (ಸಿವಿಲ್ ಸೊಸೈಟಿ ಆರ್ಗನೈಸೇಶನ್ಸ್) ಸಮನ್ವಯವನ್ನು ಸಾಧಿಸಬೇಕು.
  7. ಸಾಂಪ್ರದಾಯಿಕ ಕೌಟುಂಬಿಕ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳು ಲಭ್ಯವಿಲ್ಲ ಎಂಬ ಕಾರಣಕ್ಕಾಗಿ ಮಾತ್ರ ಮಹಿಳಾ ಲೈಂಗಿಕ ಕಾರ್ಯಕರ್ತೆಯರು, ಅವರ ಮಕ್ಕಳು ಮತ್ತು ಇತರ ದುರ್ಬಲ ವರ್ಗದ ಮತದಾರರನ್ನೊಳಗೊಂಡ ಪ್ರಕರಣಗಳಲ್ಲಿ ಯಾವುದೇ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಬಾರದು. ಇಂತಹ ಸಂದರ್ಭಗಳಲ್ಲಿ, ಪ್ರಸ್ತುತ ಪರಿಸ್ಥಿತಿಗಳ ಆಧಾರದ ಮೇಲೆ ಹೊಂದಿಕೊಳ್ಳುವಂತಹ (ಫ್ಲೆಕ್ಸಿಬಲ್) ಪರಿಶೀಲನಾ ವಿಧಾನವನ್ನು ಅಳವಡಿಸಿಕೊಳ್ಳಬೇಕು ಮತ್ತು ಅಗತ್ಯವಿರುವ ಕಡೆಗಳಲ್ಲಿ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಹಾಗೂ ಸಮುದಾಯ ಆಧಾರಿತ ಸಂಸ್ಥೆಗಳ ಪರಿಶೀಲನೆಯನ್ನು ಸಹ ಪರಿಗಣಿಸಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...