Homeಮುಖಪುಟ'ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ; ಕರ್ತವ್ಯದಲ್ಲಿದ್ದಾಗ ನರ್ಸ್‌ಗೆ ಕಿರುಕುಳ': ಬಂಗಾಳದಲ್ಲಿ ಉದ್ವಿಗ್ನತೆ

‘ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ; ಕರ್ತವ್ಯದಲ್ಲಿದ್ದಾಗ ನರ್ಸ್‌ಗೆ ಕಿರುಕುಳ’: ಬಂಗಾಳದಲ್ಲಿ ಉದ್ವಿಗ್ನತೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶದ ನಡುವೆ, ರಾಜ್ಯದಿಂದ ಮಹಿಳೆಯರ ಮೇಲಿನ ದೌರ್ಜನ್ಯದ ಗೊಂದಲದ ಘಟನೆಗಳು ಮತ್ತೆ ಕಾಣಿಸಿಕೊಂಡಿವೆ.

ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಬಿರ್ಭೂಮ್ ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ರೋಗಿಯೊಬ್ಬರು ಕಿರುಕುಳ ನೀಡಿದ್ದಾನೆ.

ಶನಿವಾರ ರಾತ್ರಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳದ ಸುದ್ದಿ ಬೆಳಕಿಗೆ ಬಂದ ತಕ್ಷಣ, ಸ್ಥಳೀಯರು ರೊಹಂಡಾ ಪಂಚಾಯತ್‌ನ ರಾಜಬರಿ ಪ್ರದೇಶದಲ್ಲಿ ದುಷ್ಕರ್ಮಿಯ ಮನೆಯ ಹೊರಗೆ ಪ್ರತಿಭಟನೆ ಆರಂಭಿಸಿದರು. ಉತ್ತರ 24 ಪರಗಣದಲ್ಲಿರುವ ಮಧ್ಯಮಗ್ರಾಮದಲ್ಲಿ ಉದ್ರಿಕ್ತ ಗುಂಪು ಆರೋಪಿಯ ಮನೆ ಮತ್ತು ಅವನ ಸಂಬಂಧಿಕರ ಅಂಗಡಿಯನ್ನು ಧ್ವಂಸಗೊಳಿಸಿತು.  ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.

ಮತ್ತೊಂದು ಘಟನೆಯಲ್ಲಿ, ಹೌರಾ ಸದರ್ ಆಸ್ಪತ್ರೆ ಆವರಣದಲ್ಲಿ 13 ವರ್ಷದ ಬಾಲಕಿಗೆ ಕಿರುಕುಳ ನೀಡಿದ ನಂತರ ಗುತ್ತಿಗೆ ಪ್ರಯೋಗಾಲಯ ತಂತ್ರಜ್ಞನನ್ನು ಹೌರಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ನ್ಯುಮೋನಿಯಾದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ಸಿಟಿ ಸ್ಕ್ಯಾನ್ ಗೆ ಕರೆದೊಯ್ಯಲಾಗಿತ್ತು.

ಸಂತ್ರಸ್ತೆಯ ಕುಟುಂಬದ ಪ್ರಕಾರ, ಅವಳು ಅಳುತ್ತಾ ಲ್ಯಾಬ್‌ನಿಂದ ಹೊರಗೆ ಓಡಿ ಬಂದು, ಇನ್ನೊಬ್ಬ ರೋಗಿಯ ಸಂಬಂಧಿಯಿಂದ ಸಹಾಯ ಕೇಳಿದಳು ಎಂದು ತಿಳಿದುಬಂದಿದೆ.

ಆರೋಪಿಯನ್ನು ಹಂಗಾಮಿ ನೌಕರ ಅಮನ್ ರಾಜ್ ಎಂದು ಗುರುತಿಸಲಾಗಿದೆ. ಸ್ಕ್ಯಾನರ್ ಕೊಠಡಿಯಿಂದ ಹೊರಬಂದ ನಂತರ, ಸಂತ್ರಸ್ತೆ ತನ್ನ ಪೋಷಕರಿಗೆ ಘಟನೆಯನ್ನು ವಿವರಿಸಿದಳು. ನಂತರ ಅವರು ತಕ್ಷಣ ಆಸ್ಪತ್ರೆಯ ಅಧಿಕಾರಿಗಳ ಗಮನಕ್ಕೆ ತಂದರು. ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆಯ ಸುದ್ದಿ ತ್ವರಿತವಾಗಿ ಹರಡಿತು; ಸ್ಥಳೀಯರು ಮತ್ತು ಸಂತ್ರಸ್ತೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ಪ್ರತಿಭಟನೆಗೆ ಜಮಾಯಿಸಿದರು. ಆರೋಪಿಯ ಮೇಲೆ ಹಲ್ಲೆಗೆ ಯತ್ನಿಸಿದರು. ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ರಕ್ಷಿಸಿ ಬಂಧಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧದ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದ ಟಿಎಂಸಿ ನಾಯಕ, ಪಂಚಾಯತ್ ಸದಸ್ಯೆಯ ಪತಿಯೂ ಆಗಿದ್ದು, ಸಂತ್ರಸ್ತೆಯ ಕುಟುಂಬವನ್ನು “ವಿಷಯವನ್ನು ಇತ್ಯರ್ಥಪಡಿಸುವಂತೆ” ಕೇಳಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಕುಪಿತಗೊಂಡ ಗುಂಪು ಪಂಚಾಯತ್ ಸದಸ್ಯರ ಮನೆಯ ಮೇಲೆ ದಾಳಿ ನಡೆಸಿತು. ಇದರ ನಂತರ, ಪೊಲೀಸರು ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ಸಿಬ್ಬಂದಿಯನ್ನು ಪ್ರದೇಶದಲ್ಲಿ ನಿಯೋಜಿಸಲಾಯಿತು ಮತ್ತು ಗುಂಪನ್ನು ಚದುರಿಸಲು ಅಶ್ರುವಾಯು ಬಳಸಲಾಯಿತು.

ಆದರೆ, ಸಿಪಿಎಂ ಕಾರ್ಯಕರ್ತರೇ ಪ್ರತಿಭಟನೆ ನಡೆಸಿದ್ದಾರೆ ಎಂದು ಪಂಚಾಯಿತಿ ಸದಸ್ಯನ ಕುಟುಂಬ ಆರೋಪಿಸಿದೆ.

ಮತ್ತೊಂದು ಘಟನೆಯಲ್ಲಿ, ಬಿರ್ಭುಮ್ ಜಿಲ್ಲೆಯ ಇಲಂಬಜಾರ್ ಕೇಂದ್ರದ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ರೋಗಿಯೊಬ್ಬರು ಕಿರುಕುಳ ನೀಡಿದ್ದಾರೆ. ತುರ್ತು ಚಿಕಿತ್ಸಾ ವಿಭಾಗದಲ್ಲಿ ನರ್ಸ್‌ಗೆ ಚಿಕಿತ್ಸೆ ನೀಡುತ್ತಿದ್ದಾಗ ಆರೋಪಿಯು ನರ್ಸ್‌ಗೆ ಅನುಚಿತವಾಗಿ ಸ್ಪರ್ಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

“ನಾನು ವೈದ್ಯರ ಸೂಚನೆಗಳನ್ನು ಅನುಸರಿಸುತ್ತಿದ್ದಾಗ ಪುರುಷ ರೋಗಿಯು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದನು. ನನ್ನ ಖಾಸಗಿ ಭಾಗಗಳಲ್ಲಿ ಅನುಚಿತವಾಗಿ ಸ್ಪರ್ಶಿಸಿದನು. ಅವನು ನನ್ನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದನು” ಎಂದು ನರ್ಸ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

“ಸುರಕ್ಷತೆಯ ಕೊರತೆಯಿಂದಾಗಿ ಇಂತಹ ಘಟನೆಗಳು ಸಂಭವಿಸುತ್ತವೆ. ಇಲ್ಲದಿದ್ದರೆ, ರೋಗಿಯು ತನ್ನ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕರ್ತವ್ಯದಲ್ಲಿರುವ ಯಾರಿಗಾದರೂ ಅವನನ್ನು ತಡೆಯಲು ಏನನ್ನೂ ಮಾಡದಂತಹ ಕೆಲಸವನ್ನು ಮಾಡಲು ಹೇಗೆ ಧೈರ್ಯ ಮಾಡುತ್ತಾನೆ” ಎಂದು ನರ್ಸ್ ಪ್ರಶ್ನಿಸಿದರು.

ನಂತರ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಆರೋಪಿ ರೋಗಿಯನ್ನು ವಶಕ್ಕೆ ತೆಗೆದುಕೊಳ್ಳಲಾಯಿತು.

ಇದನ್ನೂ ಓದಿ; ‘ಜಯಸೂರ್ಯ ಮೇಲಿನ ನನ್ನ ಆರೋಪ ಸುಳ್ಳಲ್ಲ..’; ನಟಿ ಸೋನಿಯಾ ಮಲ್ಹಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...