Homeಕರ್ನಾಟಕಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ, ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್...

ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ, ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಹಾಗೂ ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ವರದಿಗಳು ಹೇಳಿವೆ.

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ 47 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅರುಣ್ ಕುಮಾರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆಯ ದೂರು ಆಧರಿಸಿ ಪೊಲೀಸರು ಅರುಣ್ ಕುಮಾರ್ ವಿರುದ್ದ ಹಳೆಯ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 417, 354ಎ ಮತ್ತು 506ರ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ. ಹೊಸ ಕ್ರಿಮಿನಲ್ ಕಾನೂನು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುವ ಮುನ್ನ ಪ್ರಕರಣ ನಡೆದಿರುವುದರಿಂದ ಐಪಿಸಿ ಅಡಿಯೇ ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ.

ಅರುಣ್ ಕುಮಾರ್ ಪುತ್ತಿಲ ಮಹಿಳೆಯೊಬ್ಬರ ಜೊತೆ ಮಾತನಾಡಿದ್ದು ಎನ್ನಲಾಗಿದ್ದ ಆಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ‌ಅದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.

ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?

ಅರುಣ್ ಕುಮಾರ್ ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಯಿಂದ ಮಹಿಳೆ ಅವರ ಅಭಿಮಾನಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡುತ್ತಿದ್ದರು. ಜೊತೆಗೆ ಪುತ್ತಿಲಗೆ ನೈತಿಕ ಬೆಂಬಲವನ್ನೂ ನೀಡುತ್ತಿದ್ದರು. ಬಳಿಕ ಪರಿಚಯವಾದ ಮೇಲೆ ಪುತ್ತಿಲ ಅವರು 2023ರ ಜೂನ್‌ನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಪುತ್ತಿಲ : 

ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆಯೊಬ್ಬರ ನಡುವೆ ನಡೆದಿದೆ ಎನ್ನಲಾಗಿದ್ದ ಮಾತುಕತೆಯ ಆಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಆ ಬಳಿಕ ಪುತ್ತಿಲ ಪರಿವಾರದಿಂದ ತನಗೆ ಬೆದರಿಕೆ ಇದೆ ಎಂದು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದ ಬಗ್ಗೆ ವರದಿಯಾಗಿತ್ತು. ಈ ಬೆಳವಣಿಗೆಯ ನಡುವೆ, ತನ್ನ ವಿರುದ್ದ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ ಅರುಣ್ ಕುಮಾರ್ ಬೆಂಗಳೂರಿನ 7ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಇದರ ಬೆನ್ನಲ್ಲೇ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಅರುಣ್ ಕುಮಾರ್ ಪುತ್ತಿಲ ಯಾರು?

ಅರುಣ್ ಕುಮಾರ್ ಪುತ್ತಿಲ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಹಿಂದುತ್ವ ಮುಖಂಡ. ತನ್ನದೇ ‘ಪುತ್ತಿಲ ಪರಿವಾರ’ ಎಂಬ ತಂಡ ಕಟ್ಟಿಕೊಂಡು ಹಿಂದುತ್ವದ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಅವರಿಗೆ ಟಿಕೆಟ್ ನೀಡದೆ ಮಹಿಳೆಯೊಬ್ಬರನ್ನು ಕಣಕ್ಕಿಳಿಸಿತ್ತು. ಇದರಿಂದ ಅಸಮಾಧಾನಗೊಂಡ ಪುತ್ತಿಲ, ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಆದರೆ, ಅವರು ಗೆಲುವು ಸಾಧಿಸಿರಲಿಲ್ಲ. ಚುನಾವಣೆಯಲ್ಲಿ ಸೋತರೂ, ಹೆಚ್ಚು ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯ ಸೋಲಿಗೆ ಕಾರಣರಾಗುವ ಮೂಲಕ ಬಿಜೆಪಿ ನಾಯಕರಿಗೆ ಪುತ್ತಿಲ ತನ್ನ ಶಕ್ತಿ ತೋರ್ಪಡಿಸಿದ್ದರು. ಬಿಜೆಪಿ ಮತ್ತು ಪುತ್ತಿಲ ಪರಿವಾರದ ಜಟಾಪಟಿಯ ಲಾಭ ಪಡೆದ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದರು.

ನಂತರ 2024ರ ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ನೀಡದಿದ್ದರೆ ವಿಧಾನಸಭೆ ಚುನಾವಣೆಯಂತೆ ಬಂಡಾಯವಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದರು. ಈ ವೇಳೆ ಬಿಜೆಪಿ ದಕ್ಷಿಣ ಕನ್ನಡದ ಅಭ್ಯರ್ಥಿಯನ್ನು ಬದಲಿಸಿತ್ತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಬದಲಾಗಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಿತ್ತು. ನಳಿನ್ ಕುಮಾರ್‌ಗೆ ಟಿಕೆಟ್ ತಪ್ಪಿದ ಬಳಿಕ ಹಠಾತ್ ಬೆಳವಣಿಗೆಯಲ್ಲಿ ಅರುಣ್ ಕುಮಾರ್ ಬಿಜೆಪಿ ಸೇರಿ ಹೊಸ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಬೆಂಬಲಿಸಿದ್ದರು. ಅರುಣ್ ಕುಮಾರ್ ಬಿಜೆಪಿ ಸೇರಿದರೂ, ಅವರ ಪುತ್ತಿಲ ಪರಿವಾರ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಮುಂದುವರೆದಿದೆ. ಈ ನಡುವೆ ಅವರ ಮೇಲೆ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ‘ಮಲಯಾಳಂ ಚಿತ್ರರಂಗದಲ್ಲಿ ಪವರ್ ಗ್ರೂಪ್ ಇಲ್ಲ..’; ಜಸ್ಟೀಸ್ ಹೇಮಾ ಸಮಿತಿ ವರದಿ ಕುರಿತು ಮೌನ ಮುರಿದ ನಟ ಮಮ್ಮುಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...