Homeಕರ್ನಾಟಕಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ, ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್...

ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ, ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಹಾಗೂ ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ವರದಿಗಳು ಹೇಳಿವೆ.

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ 47 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅರುಣ್ ಕುಮಾರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆಯ ದೂರು ಆಧರಿಸಿ ಪೊಲೀಸರು ಅರುಣ್ ಕುಮಾರ್ ವಿರುದ್ದ ಹಳೆಯ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 417, 354ಎ ಮತ್ತು 506ರ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ. ಹೊಸ ಕ್ರಿಮಿನಲ್ ಕಾನೂನು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುವ ಮುನ್ನ ಪ್ರಕರಣ ನಡೆದಿರುವುದರಿಂದ ಐಪಿಸಿ ಅಡಿಯೇ ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ.

ಅರುಣ್ ಕುಮಾರ್ ಪುತ್ತಿಲ ಮಹಿಳೆಯೊಬ್ಬರ ಜೊತೆ ಮಾತನಾಡಿದ್ದು ಎನ್ನಲಾಗಿದ್ದ ಆಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ‌ಅದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.

ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?

ಅರುಣ್ ಕುಮಾರ್ ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಯಿಂದ ಮಹಿಳೆ ಅವರ ಅಭಿಮಾನಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡುತ್ತಿದ್ದರು. ಜೊತೆಗೆ ಪುತ್ತಿಲಗೆ ನೈತಿಕ ಬೆಂಬಲವನ್ನೂ ನೀಡುತ್ತಿದ್ದರು. ಬಳಿಕ ಪರಿಚಯವಾದ ಮೇಲೆ ಪುತ್ತಿಲ ಅವರು 2023ರ ಜೂನ್‌ನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಪುತ್ತಿಲ : 

ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆಯೊಬ್ಬರ ನಡುವೆ ನಡೆದಿದೆ ಎನ್ನಲಾಗಿದ್ದ ಮಾತುಕತೆಯ ಆಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಆ ಬಳಿಕ ಪುತ್ತಿಲ ಪರಿವಾರದಿಂದ ತನಗೆ ಬೆದರಿಕೆ ಇದೆ ಎಂದು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದ ಬಗ್ಗೆ ವರದಿಯಾಗಿತ್ತು. ಈ ಬೆಳವಣಿಗೆಯ ನಡುವೆ, ತನ್ನ ವಿರುದ್ದ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ ಅರುಣ್ ಕುಮಾರ್ ಬೆಂಗಳೂರಿನ 7ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಇದರ ಬೆನ್ನಲ್ಲೇ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಅರುಣ್ ಕುಮಾರ್ ಪುತ್ತಿಲ ಯಾರು?

ಅರುಣ್ ಕುಮಾರ್ ಪುತ್ತಿಲ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಹಿಂದುತ್ವ ಮುಖಂಡ. ತನ್ನದೇ ‘ಪುತ್ತಿಲ ಪರಿವಾರ’ ಎಂಬ ತಂಡ ಕಟ್ಟಿಕೊಂಡು ಹಿಂದುತ್ವದ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಅವರಿಗೆ ಟಿಕೆಟ್ ನೀಡದೆ ಮಹಿಳೆಯೊಬ್ಬರನ್ನು ಕಣಕ್ಕಿಳಿಸಿತ್ತು. ಇದರಿಂದ ಅಸಮಾಧಾನಗೊಂಡ ಪುತ್ತಿಲ, ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಆದರೆ, ಅವರು ಗೆಲುವು ಸಾಧಿಸಿರಲಿಲ್ಲ. ಚುನಾವಣೆಯಲ್ಲಿ ಸೋತರೂ, ಹೆಚ್ಚು ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯ ಸೋಲಿಗೆ ಕಾರಣರಾಗುವ ಮೂಲಕ ಬಿಜೆಪಿ ನಾಯಕರಿಗೆ ಪುತ್ತಿಲ ತನ್ನ ಶಕ್ತಿ ತೋರ್ಪಡಿಸಿದ್ದರು. ಬಿಜೆಪಿ ಮತ್ತು ಪುತ್ತಿಲ ಪರಿವಾರದ ಜಟಾಪಟಿಯ ಲಾಭ ಪಡೆದ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದರು.

ನಂತರ 2024ರ ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ನೀಡದಿದ್ದರೆ ವಿಧಾನಸಭೆ ಚುನಾವಣೆಯಂತೆ ಬಂಡಾಯವಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದರು. ಈ ವೇಳೆ ಬಿಜೆಪಿ ದಕ್ಷಿಣ ಕನ್ನಡದ ಅಭ್ಯರ್ಥಿಯನ್ನು ಬದಲಿಸಿತ್ತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಬದಲಾಗಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಿತ್ತು. ನಳಿನ್ ಕುಮಾರ್‌ಗೆ ಟಿಕೆಟ್ ತಪ್ಪಿದ ಬಳಿಕ ಹಠಾತ್ ಬೆಳವಣಿಗೆಯಲ್ಲಿ ಅರುಣ್ ಕುಮಾರ್ ಬಿಜೆಪಿ ಸೇರಿ ಹೊಸ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಬೆಂಬಲಿಸಿದ್ದರು. ಅರುಣ್ ಕುಮಾರ್ ಬಿಜೆಪಿ ಸೇರಿದರೂ, ಅವರ ಪುತ್ತಿಲ ಪರಿವಾರ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಮುಂದುವರೆದಿದೆ. ಈ ನಡುವೆ ಅವರ ಮೇಲೆ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ‘ಮಲಯಾಳಂ ಚಿತ್ರರಂಗದಲ್ಲಿ ಪವರ್ ಗ್ರೂಪ್ ಇಲ್ಲ..’; ಜಸ್ಟೀಸ್ ಹೇಮಾ ಸಮಿತಿ ವರದಿ ಕುರಿತು ಮೌನ ಮುರಿದ ನಟ ಮಮ್ಮುಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...