HomeಮುಖಪುಟBJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಜೆಡಿಎಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊನ್ನೇನಹಳ್ಳಿಯ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಧಾಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ ವೆಂಟಕೇಶ್ ವಿರುದ್ಧ ಹೆಬ್ಬೂರು ಠಾಣೆಯಲ್ಲಿ ಏಪ್ರಿಲ್‌ 22ರಂದು ದೂರು ದಾಖಲಾಗಿತ್ತು. ವೆಂಕಟೇಶ್‌ ಆಕೆಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ಸಾರ್ವಜನಿಕವಾಗಿ ಎಳೆದಾಡಿ ಹಲ್ಲೆ ಮಾಡಿದ್ದ ಎಂದು ದೂರಲಾಗಿತ್ತು. ಈ ಪ್ರಕರಣಕ್ಕೆ ಜೆಡಿಎಸ್‌ ಕಾರ್ಯಕರ್ತರಾದ ರಾಧಾಕೃಷ್ಣ ಪ್ರತ್ಯಕ್ಷ ಸಾಕ್ಷಿಯಾಗಿದ್ದರು ಎಂದು ಹೇಳಲಾಗಿದೆ.

ವೆಂಕಟೇಶ್ ಬಿಜೆಪಿ ಮುಖಂಡರಾಗಿದ್ದು ಸಾಕ್ಷಿಯಿಂದ ಹಿಂದೆ ಸರಿಯುವಂತೆ ರಾಧಾಕೃಷ್ಣ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ ರಾಧಾಕೃಷ್ಣ ಸಾಕ್ಷಿ ಹಿಂತೆಗೆದುಕೊಳ್ಳಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಿಜೆಪಿಯವರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಆರೋಪಿ ವೆಂಕಟೇಶ್

ಅದೇ ಗ್ರಾಮದ ಶಂಕರ, ಮಂಡಲ್ ರವಿ, ಯೋಗೇಶ್, ಸ್ವಾಮಿ, ಮಂಜ, ಎಂ.ಎಚ್. ರಂಗಸ್ವಾಮಿ ಎಂಬುವರಿಂದ ಹಲ್ಲೆ ನಡೆದಿದೆ ಎಂದು ಮತ್ತೊಂದು ದೂರು ದಾಖಲಾಗಿದೆ.

ಈ ಕುರಿತು ನಾನುಗೌರಿ.ಕಾಂ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್‌ರವರನ್ನು ಮಾತನಾಡಿಸಿತು.  ವೆಂಕಟೇಶ್ ವಿರುದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿರುವುದೇ ಘಟನೆಗೆ ಕಾರಣ. ಅವರು ತಪ್ಪಿತಸ್ಥರಲ್ಲದಿದ್ದರೆ ಅದನ್ನು ಪೊಲೀಸ್‌ ಠಾಣೆ ಮತ್ತು ಕೋರ್ಟಿನಲ್ಲಿ ಬಗೆಹರಿಸಿಕೊಳ್ಳಬೇಕಿತ್ತು. ಆದರೆ ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷ ವೆಂಕಟೇಶ್ ಮತ್ತು ಅವರ ಬೆಂಬಲಿಗರು ಏಕಾಏಕಿ ನಿನ್ನೆ ರಾತ್ರಿ ಜೆಡಿಎಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಿರುವುದು ಹೇಯ ಕೃತ್ಯ. ಇದರಿಂದ ಬೆದರಿಸಿ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಆದರೆ ನಾವು ಬಗ್ಗುವುದಿಲ್ಲ ಎಂದಿದ್ದಾರೆ.

ಮಾಜಿ ಶಾಸಕ ಸುರೇಶ್‌ಗೌಡ ಮತ್ತು ಸಬ್ ಇನ್ಸ್ ಪೆಕ್ಟರ್ ಕೂಡ ಹಲ್ಲೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿರುವ ಗೌರಿಶಂಕರ್, ನೆಲಮಂಗಲದ ರೌಡಿಶೀಟರ್‌ಗಳು ಈ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಮಚ್ಚು, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು ನಮ್ಮ ಕಾರ್ಯಕರ್ತ ರಾಧಾಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕೂಡಲೇ ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿ: ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ: ಬಿಜೆಪಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...