Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವಲೋಕನ ಮಾಡುವಾಗ ನ್ಯಾಯಾಧೀಶರು ಜಾಗರೂಕರಾಗಿರಬೇಕು: ಸುಪ್ರೀಂ ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವಲೋಕನ ಮಾಡುವಾಗ ನ್ಯಾಯಾಧೀಶರು ಜಾಗರೂಕರಾಗಿರಬೇಕು: ಸುಪ್ರೀಂ ಕೋರ್ಟ್

- Advertisement -
- Advertisement -

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಧೀಶರು ಅವಲೋಕನಗಳನ್ನು ಮಾಡುವಾಗ ಜಾಗರೂಕರಾಗಿರಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. 2024 ರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಾರ್ಚ್ 11 ರಂದು ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ಆದೇಶದ ಬಗ್ಗೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಈ ಹೇಳಿಕೆ ನೀಡಿದೆ. ಲೈಂಗಿಕ ದೌರ್ಜನ್ಯ

2024ರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡುವಾಗ ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್, ಪ್ರಕರಣದಲ್ಲಿ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಇತ್ತೀಚೆಗೆ ಹೇಳಿದ್ದರು.

ಪ್ರತಿ ಪ್ರಕರಣದ ಸಂಗತಿಗಳನ್ನು ಅವಲಂಬಿಸಿ ಜಾಮೀನು ನೀಡುವುದು ನ್ಯಾಯಾಧೀಶರ ವಿವೇಚನೆಯಾಗಿದ್ದರೂ, ದೂರುದಾರರ ವಿರುದ್ಧ ಅನಗತ್ಯ ಅವಲೋಕನಗಳನ್ನು ತಪ್ಪಿಸಬೇಕು ಎಂದು ಮಂಗಳವಾರ ಸುಪ್ರೀಂಕೋರ್ಟ್ ಹೇಳಿದೆ.

“ಈಗ ಇನ್ನೊಬ್ಬ ನ್ಯಾಯಮೂರ್ತಿ ಮತ್ತೊಂದು ಆದೇಶ ನೀಡಿದ್ದಾರೆ. ಆರೋಪಿಗೆ ಜಾಮೀನು ನೀಡುವುದು ತಪ್ಪೇನಲ್ಲ, ಆದರೆ ‘ಮಹಿಳೆಯೆ ತೊಂದರೆ ಮೈಗೆಳೆದುಕೊಂಡಿದ್ದಾಳೆ’ ಎಂಬ ಚರ್ಚೆ ಏಕೆ ಮಾಡಬೇಕು? ವಿಶೇಷವಾಗಿ ಈ ಕಡೆಯಿಂದ [ನ್ಯಾಯಾಧೀಶರು] ಅಂತಹ ವಿಷಯಗಳನ್ನು ಹೇಳುವಾಗ ಜಾಗರೂಕರಾಗಿರಬೇಕು.” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಸಂಪೂರ್ಣ ನ್ಯಾಯ ದೊರಕಿಸಿಕೊಡುವುದು ಮಾತ್ರವಲ್ಲ, ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಕೂಡಾ ಕಾಣುವಂತಿರಬೇಕು. ಸಾಮಾನ್ಯ ವ್ಯಕ್ತಿಯೊಬ್ಬ ಅಂತಹ ಆದೇಶಗಳನ್ನು ಹೇಗೆ ಗ್ರಹಿಸುತ್ತಾರೆ ಎಂಬುದನ್ನು ಸಹ ನೋಡಬೇಕಾಗುತ್ತದೆ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೇಳಿದ್ದಾರೆ.

ಹೆಣ್ಣು ಮಗುವಿನ ಎದೆಗಳನ್ನು ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ ಎಂದು ಹೇಳಿದ್ದ ಅಲಹಾಬಾದ್ ಹೈಕೋರ್ಟ್‌ನ ಮತ್ತೊಂದು ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿತ್ತು.

2021 ರಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಹೊತ್ತಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ವಿಚಾರಣೆ ನಡೆಸಿ ಮಾರ್ಚ್ 17 ರಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು ಈ ಅವಲೋಕನಗಳನ್ನು ಮಾಡಿದ್ದರು.

ಭಾರತೀಯ ದಂಡ ಸಂಹಿತೆಯಡಿಯಲ್ಲಿ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ನ್ಯಾಯಾಲಯವು ಈ ಇಬ್ಬರು ವ್ಯಕ್ತಿಗಳಿಗೆ ಸಮನ್ಸ್ ನೀಡಿತ್ತು. ದೂರನ್ನು ಮೇಲ್ನೋಟಕ್ಕೆ ತೆಗೆದುಕೊಂಡರೂ ಅದು ಅತ್ಯಾಚಾರ ಯತ್ನದ ಅಪರಾಧವಾಗುವುದಿಲ್ಲ ಎಂದು ವಾದಿಸಿ ಅವರು ಸಮನ್ಸ್ ಅನ್ನು ಪ್ರಶ್ನಿಸಿದ್ದರು.

ಭಾರತೀಯ ದಂಡ ಸಂಹಿತೆಯಡಿಯಲ್ಲಿ ವಿವಸ್ತ್ರಗೊಳ್ಳುವ ಉದ್ದೇಶದಿಂದ ಹಲ್ಲೆ ನಡೆಸಿದ್ದಕ್ಕಾಗಿ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಈ ರೀತಿಯ ಪ್ರಕರಣದಲ್ಲಿ ಕಡಿಮೆ ಶಿಕ್ಷೆ ವಿಧಿಸಲಾಗುತ್ತದೆ.

ಅದಾಗ್ಯೂ, ಮಾರ್ಚ್ 26 ರಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು. ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಪ್ರಸನ್ನ ಬಿ. ವರಾಳೆ ಅವರ ಮತ್ತೊಂದು ಪೀಠವು ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಒಂದು ದಿನದ ನಂತರ ಪೀಠವು ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಪರಿಗಣಿಸಿತ್ತು.

ಈ ವೇಳೆ ಹೈಕೋರ್ಟ್‌ನ ಅವಲೋಕನಗಳು “ಆಘಾತಕಾರಿ” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಮಂಗಳವಾರ ನಡೆದ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಒಂದು ತಿಂಗಳ ಕಾಲ ಮುಂದೂಡಿತು. ಲೈಂಗಿಕ ದೌರ್ಜನ್ಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...