Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವಲೋಕನ ಮಾಡುವಾಗ ನ್ಯಾಯಾಧೀಶರು ಜಾಗರೂಕರಾಗಿರಬೇಕು: ಸುಪ್ರೀಂ ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವಲೋಕನ ಮಾಡುವಾಗ ನ್ಯಾಯಾಧೀಶರು ಜಾಗರೂಕರಾಗಿರಬೇಕು: ಸುಪ್ರೀಂ ಕೋರ್ಟ್

- Advertisement -
- Advertisement -

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಧೀಶರು ಅವಲೋಕನಗಳನ್ನು ಮಾಡುವಾಗ ಜಾಗರೂಕರಾಗಿರಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. 2024 ರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಾರ್ಚ್ 11 ರಂದು ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ಆದೇಶದ ಬಗ್ಗೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಈ ಹೇಳಿಕೆ ನೀಡಿದೆ. ಲೈಂಗಿಕ ದೌರ್ಜನ್ಯ

2024ರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡುವಾಗ ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್, ಪ್ರಕರಣದಲ್ಲಿ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಇತ್ತೀಚೆಗೆ ಹೇಳಿದ್ದರು.

ಪ್ರತಿ ಪ್ರಕರಣದ ಸಂಗತಿಗಳನ್ನು ಅವಲಂಬಿಸಿ ಜಾಮೀನು ನೀಡುವುದು ನ್ಯಾಯಾಧೀಶರ ವಿವೇಚನೆಯಾಗಿದ್ದರೂ, ದೂರುದಾರರ ವಿರುದ್ಧ ಅನಗತ್ಯ ಅವಲೋಕನಗಳನ್ನು ತಪ್ಪಿಸಬೇಕು ಎಂದು ಮಂಗಳವಾರ ಸುಪ್ರೀಂಕೋರ್ಟ್ ಹೇಳಿದೆ.

“ಈಗ ಇನ್ನೊಬ್ಬ ನ್ಯಾಯಮೂರ್ತಿ ಮತ್ತೊಂದು ಆದೇಶ ನೀಡಿದ್ದಾರೆ. ಆರೋಪಿಗೆ ಜಾಮೀನು ನೀಡುವುದು ತಪ್ಪೇನಲ್ಲ, ಆದರೆ ‘ಮಹಿಳೆಯೆ ತೊಂದರೆ ಮೈಗೆಳೆದುಕೊಂಡಿದ್ದಾಳೆ’ ಎಂಬ ಚರ್ಚೆ ಏಕೆ ಮಾಡಬೇಕು? ವಿಶೇಷವಾಗಿ ಈ ಕಡೆಯಿಂದ [ನ್ಯಾಯಾಧೀಶರು] ಅಂತಹ ವಿಷಯಗಳನ್ನು ಹೇಳುವಾಗ ಜಾಗರೂಕರಾಗಿರಬೇಕು.” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಸಂಪೂರ್ಣ ನ್ಯಾಯ ದೊರಕಿಸಿಕೊಡುವುದು ಮಾತ್ರವಲ್ಲ, ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಕೂಡಾ ಕಾಣುವಂತಿರಬೇಕು. ಸಾಮಾನ್ಯ ವ್ಯಕ್ತಿಯೊಬ್ಬ ಅಂತಹ ಆದೇಶಗಳನ್ನು ಹೇಗೆ ಗ್ರಹಿಸುತ್ತಾರೆ ಎಂಬುದನ್ನು ಸಹ ನೋಡಬೇಕಾಗುತ್ತದೆ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೇಳಿದ್ದಾರೆ.

ಹೆಣ್ಣು ಮಗುವಿನ ಎದೆಗಳನ್ನು ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ ಎಂದು ಹೇಳಿದ್ದ ಅಲಹಾಬಾದ್ ಹೈಕೋರ್ಟ್‌ನ ಮತ್ತೊಂದು ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿತ್ತು.

2021 ರಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಹೊತ್ತಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ವಿಚಾರಣೆ ನಡೆಸಿ ಮಾರ್ಚ್ 17 ರಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು ಈ ಅವಲೋಕನಗಳನ್ನು ಮಾಡಿದ್ದರು.

ಭಾರತೀಯ ದಂಡ ಸಂಹಿತೆಯಡಿಯಲ್ಲಿ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ನ್ಯಾಯಾಲಯವು ಈ ಇಬ್ಬರು ವ್ಯಕ್ತಿಗಳಿಗೆ ಸಮನ್ಸ್ ನೀಡಿತ್ತು. ದೂರನ್ನು ಮೇಲ್ನೋಟಕ್ಕೆ ತೆಗೆದುಕೊಂಡರೂ ಅದು ಅತ್ಯಾಚಾರ ಯತ್ನದ ಅಪರಾಧವಾಗುವುದಿಲ್ಲ ಎಂದು ವಾದಿಸಿ ಅವರು ಸಮನ್ಸ್ ಅನ್ನು ಪ್ರಶ್ನಿಸಿದ್ದರು.

ಭಾರತೀಯ ದಂಡ ಸಂಹಿತೆಯಡಿಯಲ್ಲಿ ವಿವಸ್ತ್ರಗೊಳ್ಳುವ ಉದ್ದೇಶದಿಂದ ಹಲ್ಲೆ ನಡೆಸಿದ್ದಕ್ಕಾಗಿ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಈ ರೀತಿಯ ಪ್ರಕರಣದಲ್ಲಿ ಕಡಿಮೆ ಶಿಕ್ಷೆ ವಿಧಿಸಲಾಗುತ್ತದೆ.

ಅದಾಗ್ಯೂ, ಮಾರ್ಚ್ 26 ರಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು. ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಪ್ರಸನ್ನ ಬಿ. ವರಾಳೆ ಅವರ ಮತ್ತೊಂದು ಪೀಠವು ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಒಂದು ದಿನದ ನಂತರ ಪೀಠವು ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಪರಿಗಣಿಸಿತ್ತು.

ಈ ವೇಳೆ ಹೈಕೋರ್ಟ್‌ನ ಅವಲೋಕನಗಳು “ಆಘಾತಕಾರಿ” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಮಂಗಳವಾರ ನಡೆದ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಒಂದು ತಿಂಗಳ ಕಾಲ ಮುಂದೂಡಿತು. ಲೈಂಗಿಕ ದೌರ್ಜನ್ಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...